ವರ್ಗಾವಣೆ ದಂಧೆ | ಹಗಲು ದರೋಡೆಗೆ ಇಳಿದ ಕಾಂಗ್ರೆಸ್‌ ಬಗ್ಗೆ ದಾಖಲೆ ಕೊಡುವೆ: ಎಚ್‌ ಡಿ ಕುಮಾರಸ್ವಾಮಿ

Date:

Advertisements
  • ದಾಖಲೆ ನೋಡಿದ ಮೇಲೆ ಆ ಸಚಿವರನ್ನು ಸಂಪುಟದಿಂದ ವಜಾ ಮಾಡುತ್ತೀರಾ?
  • ‘ಕಾಂಗ್ರೆಸ್‌ ಯೋಗ್ಯತೆಗೆ ಎರಡು ವರ್ಷ ಬಿಜೆಪಿ ವಿರುದ್ಧ ಒಂದೇ ಒಂದು ದಾಖಲೆ ನೀಡಲಿಲ್ಲ’

ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳು ಆಗಿಲ್ಲ. ಆಗಲೇ ಕಾಂಗ್ರೆಸ್‌ನವರು ಹಗಲು ದರೋಡೆಗೆ ಇಳಿದಿದ್ದಾರೆ. ವರ್ಗಾವಣೆ ದಂಧೆಗೆ ಎಷ್ಟು ಹಣ ನಿಗದಿ ಮಾಡಿದ್ದೀರೆಂದು ಗೊತ್ತಿದೆ. ಟೈಮ್ ಬಂದಾಗ ಎಲ್ಲ ದಾಖಲೆ ಕೊಡುವೆ. ಸದನದಲ್ಲೇ ದಾಖಲೆ ನೀಡುವೆ, ನಾನು ನೀಡುವ ದಾಖಲೆ ನೋಡಿ ಆ ಸಚಿವರನ್ನು ಸಂಪುಟದಿಂದ ವಜಾ ಮಾಡುತ್ತೀರಾ? ಎಂದು ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಕಮಿಷನ್​ ಆರೋಪ ಕುರಿತು ದಾಖಲೆ ಕೊಟ್ಟು ಆರೋಪ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದ ಹೇಳಿಕೆಗೆ ಕುಮಾರಸ್ವಾಮಿ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿ ಸರ್ಕಾರದ ವಿರುದ್ಧ ಎರಡು ವರ್ಷ ಭ್ರಷ್ಟಾಚಾರ ಬಗ್ಗೆ ಆರೋಪ ಮಾಡಿ, ಪ್ರತಿದಿನ ತನಿಖೆ ತನಿಖೆ ಎಂದು ಗುಮ್ಮ ತೋರಿಸುತ್ತಿದ್ದರು. ಅವರ ಯೋಗ್ಯತೆಗೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಯಾವುದೇ ಒಂದೇ ಒಂದು ದಾಖಲೆ ನೀಡಿರಲಿಲ್ಲ” ಎಂದು ಕಿಡಿಕಾರಿದರು.

Advertisements

ಕೆಲವು ಸಚಿವರು ದಾಖಲೆ ಕೊಡಲಿ ಎಂದು ಕೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ದಾಖಲೆ ಕೊಡುತ್ತೇನೆ ತನಿಖೆ ಮಾಡೋ ಧಮ್ ನಿಮಗೆ ಇದೆಯಾ? ನನ್ನ ಕಾಲದಲ್ಲಿ ನಡೆದ ವರ್ಗಾವಣೆ ಬಗ್ಗೆಯೂ ತನಿಖೆ ಮಾಡಲಿ” ಎಂದು ಆಗ್ರಹಿಸಿದರು.

“ಕೆಲವರು ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಆದರೆ ಈಗಾಗಲೇ ಡಿಕೆ ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿದ್ದಾರೆ. ನೋಡೋಣ ಎಷ್ಟು ದಿನ ಇರುತ್ತೆ ಈ ಸರ್ಕಾರ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ನಿನ್ನ ಮುಖ ಸ್ವಲ್ಪ ನೋಡಿಕೋ… ನೀನು ರಾತ್ರಿ ದರೋಡೆಗಾರ. ನೀನು ಮೊದಲ ಬಾರಿ ಮುಖ್ಯಮಂತ್ರಿ ಹೇಗೆ ಆದೆ ನಿನಗೆ ನೆನಪು ಇದೆಯಾ. ಇನ್ನೊಬ್ಬರ ಕಟ್ಟು ಕೊಯುವ ವ್ಯಕ್ತಿ. ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಜೊತೆ ಮೈತ್ರಿ ಟಿಕೆಟ್. ವಿಧಾನಸಭೆ ಚುನಾವಣೆ ಯಲ್ಲೇ ನಿನ್ನ ಯೋಗ್ಯತೆ ಇಡೀ ದೇಶಕ್ಕೆ ಗೊತ್ತಾಗಿದೆ. ಹೋಗಿ ಕುಳಿತುಕೊ ಮತ್ತೆ Singapore… 🤔🤔

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X