ತಮಿಳುನಾಡಿಗೆ ತಕ್ಷಣ ಕಾವೇರಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ: ಬೊಮ್ಮಾಯಿ ಟೀಕೆ

Date:

Advertisements
  • ‘ಸರ್ಕಾರ ಸಿಡಬ್ಲುಎಂಎದಲ್ಲಿ ಪ್ರತಿಭಟಿಸಿಲ್ಲ’
  • ರಾಜ್ಯದ ರೈತರ ಹಿತ ಕಾಯಬೇಕು: ಆಗ್ರಹ

ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಡಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಸವಾರಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ, “ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ” ಎಂದು ಟೀಕಿಸಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ” ಎಂದಿದ್ದಾರೆ.

Advertisements

“ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X