ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

Date:

Advertisements

‘ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ನ ಪ್ರಣಾಳಿಕೆ’ ಎಂದು ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ” ಎಂದಿದ್ದಾರೆ.

ಟ್ವಿಟ್ಟರ್‌ನಲ್ಲಿ ಸುದೀರ್ಘವಾದ ಪೋಸ್ಟ್ ಹಂಚಿಕೊಂಡ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯು ಮೊದಲ ಹಂತದ ಚುನಾವಣೆಯ ಬಳಿಕ ಇಂಡಿಯಾ ಮೈತ್ರಿಕೂಟವು ಗೆಲ್ಲುತ್ತಿರುವ ಸೂಚನೆ ಎಂದು ತಿಳಿಸಿದ್ದಾರೆ.

“ಮೋದೀಜಿಯವರ ಗಾಬರಿ ತುಂಬಿದ ಭಾಷಣವು ಮೊದಲ ಹಂತದ ಮತದಾನದಲ್ಲಿ ಇಂಡಿಯಾ ಮೈತ್ರಿಕೂಟವು ಗೆಲ್ಲುತ್ತಿದೆ ಎಂಬುದನ್ನು ತೋರಿಸಿದೆ. ಮೋದಿ ಜೀ ಹೇಳಿದ್ದು ಕೇವಲ ದ್ವೇಷದ ಮಾತು ಮಾತ್ರವಲ್ಲ ಗಮನ ಬೇರೆಡೆಗೆ ಸೆಳೆಯುವ ತಂತ್ರವಾಗಿದೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

Advertisements

“ಪ್ರಧಾನಿ ಮೋದಿಯವರು ಸಂಘಪರಿವಾರದ ಕಲಿಸಿದ್ದ ಮೌಲ್ಯಗಳಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಅಧಿಕಾರಕ್ಕಾಗಿ ಸುಳ್ಳು ಹೇಳುವುದು, ವಿಷಯಗಳ ಬಗ್ಗೆ ಆಧಾರರಹಿತ ಉಲ್ಲೇಖಗಳನ್ನು ಮಾಡುವುದು ಮತ್ತು ವಿರೋಧಿಗಳ ಮೇಲೆ ಸುಳ್ಳು ಆರೋಪ ಮಾಡುವುದು ಆರೆಸ್ಸೆಸ್ ಮತ್ತು ಬಿಜೆಪಿಯ ತರಬೇತಿಯ ವಿಶೇಷತೆಯಾಗಿದೆ” ಎಂದು ಆರ್‌ಎಸ್‌ಎಸ್ ಹಾಗೂ ಸಂಘಪರಿವಾರದ ವಿರುದ್ಧ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶದ 140 ಕೋಟಿ ಜನರು ಇನ್ನು ಮುಂದೆ ನಿಮ್ಮ ಇಂತಹ ಸುಳ್ಳಿಗೆ ಬಲಿಯಾಗುವುದಿಲ್ಲ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಪ್ರತಿಯೊಬ್ಬ ಭಾರತೀಯನದ್ದು. ಇದು ಎಲ್ಲರಿಗೂ ಸಮಾನತೆಯ ಬಗ್ಗೆ ಮಾತನಾಡುತ್ತದೆ. ಇದು ಎಲ್ಲರಿಗೂ ನ್ಯಾಯದ ಬಗ್ಗೆ ಮಾತನಾಡುತ್ತದೆ. ಕಾಂಗ್ರೆಸ್ಸಿನ ನ್ಯಾಯವು ಸತ್ಯದ ತಳಹದಿಯ ಮೇಲೆ ನಿಂತಿದೆ. ಆದರೆ ಗೋಬೆಲ್ಸ್ ರೂಪದಲ್ಲಿರುವ ಸರ್ವಾಧಿಕಾರಿಯ ಗದ್ದುಗೆ ಈಗ ಅಲುಗಾಡುತ್ತಿರುವಂತೆ ತೋರುತ್ತಿದೆ. ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರ ದ್ವೇಷ ಭಾಷಣಕ್ಕೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X