ಬಿರುಸುಗೊಂಡ ಮತದಾನ: ರಾಜ್ಯಾದ್ಯಂತ ಮಧ್ಯಾಹ್ನ ವೇಳೆಗೆ 37%ರಷ್ಟು ಮತದಾನ

Date:

  • 244 ಕ್ಷೇತ್ರಗಳಲ್ಲೂ ಚುರುಕುಪಡೆದ ಮತದಾನ ಪ್ರಕ್ರಿಯೆ
  • ಮಧ್ಯಾಹ್ನದ ವೇಳೆಗೆ ಶೇಕಡಾ 25ರಷ್ಟು ಮತದಾನ ದಾಖಲು

ರಾಜ್ಯವಿಧಾನಸಭೆ ಚುನಾವಣೆ ಸಲುವಾಗಿ ನಡೆಯುತ್ತಿರುವ ಇಂದಿನ ಮತದಾನ ಪ್ರಕ್ರಿಯೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

- Advertisement -

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ಬಿರುಸುಗೊಂಡಿದ್ದು ಎಲ್ಲಡೆಯೂ ಜನ ಸ್ವಯಂಪ್ರೇರಿತವಾಗಿ ಮತದಾನ ಮಾಡಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಚುನಾವಣಾ ಆಯೋಗ ನೀಡಿರುವ ಮಾಹಿತಿಯಂತೆ ಮಧ್ಯಾಹ್ನ 12ರವರೆಗೆ ರಾಜ್ಯಾದ್ಯಂತ ಶೇಕಡಾ 37% ಮತದಾನವಾಗಿದೆ. ಬೆಳಗ್ಗೆ 7 ಗಂಟೆಯಿಂದ 1 ಗಂಟೆಯವರೆಗೆ ರಾಜ್ಯದಲ್ಲಿ ಶೇ.37% ರಷ್ಟು ಮತದಾನವಾಗಿದೆ.

ಬೆಂಗಳೂರು ಸೆಂಟ್ರಲ್ ಶೇ 19.30ರಷ್ಟು, ಬೆಂಗಳೂರು ಉತ್ತರ ಶೇ 17.50ರಷ್ಟು, ಬೆಂಗಳೂರು ದಕ್ಷಿಣ ಶೇ 19.18ರಷ್ಟು, ಬೆಂಗಳೂರು ನಗರದಲ್ಲಿ ಶೇ 17.72ರಷ್ಟು, ಬೆಳಗಾವಿ ಜಿಲ್ಲೆಯಲ್ಲಿ ಶೇ 20.76ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 23.56ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 20.54ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 20.66ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 16.77ರಷ್ಟು ಮತದಾನವಾಗಿದೆ.

ಮೈಸೂರು ಜಿಲ್ಲೆಯಲ್ಲಿ ಶೇ. 19.34ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 22.48ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇ 25.21ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 22.75ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇ 23.44ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 20.23ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇ 21.46ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ 22.29ರಷ್ಟು ಮತದಾನ ಬೆಳಿಗ್ಗೆ 11 ಗಂಟೆವರೆಗೆ ಆಗಿದೆ.

ಹಾಸನ ಜಿಲ್ಲೆಯಲ್ಲಿ ಶೇಕಡಾ 22.18ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 19.44ರಷ್ಟು, ಕೊಡಗು ಜಿಲ್ಲೆಯಲ್ಲಿ ಶೇಕಡಾ 26.49ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 19.87ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 21.46ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 19.56ರಷ್ಟು ವೋಟಿಂಗ್‌ ನಡೆದಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 18.56ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 28.46ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 21.32ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 20.82ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 21.14ರಷ್ಟು, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 17.89ರಷ್ಟು ಮತದಾನವಾಗಿದೆ.

ಈ ಸುದ್ದಿ ಓದಿದ್ದೀರಾ?:ಬೆಳಗಾವಿ ಜಿಲ್ಲೆಯಲ್ಲಿ 13 ಸ್ಥಾನ ಕಾಂಗ್ರೆಸ್ ಗೆ‌ಲ್ಲಲಿದೆ, ನಾನು ಮಂತ್ರಿಯಾಗುವೆ: ಲಕ್ಷ್ಮಿ ಹೆಬ್ಬಾಳ್ಕರ್‌

ತುಮಕೂರು ಜಿಲ್ಲೆಯಲ್ಲಿ ಶೇಕಡಾ 22.06ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 30.26ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 25.46ರಷ್ಟು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 21.07ರಷ್ಟು, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 18.84ರಷ್ಟು ಮತದಾನವಾಗಿದೆ.

ಒಟ್ಟಾರೆ ಮಧ್ಯಾಹ್ನ 1ಗಂಟೆ ಹೊತ್ತಿಗೆ ಶೇಕಡಾ 37% ಮತದಾನವಾಗಿರುವುದಾಗಿ ಇಲಾಖೆ ಮೂಲಗಳು ತಿಳಿಸಿವೆ. ಉಳಿದಂತೆ ಇಂದು ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶವಿದ್ದು ಮತದಾರರು ಮತ ಚಲಾವಣೆ ಮಾಡಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...