ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ: ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

Date:

Advertisements

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರ್ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು ಹಾಗೂ ಕಿರಿಯ ತಾಂತ್ರಿಕ ಶಾಲೆಗಳ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಜ.1, 2024ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.

ಸೇವಾ ಅವಧಿಯ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನವನ್ನು 5ಸಾವಿರ ರೂ.ಗಳಿಂದ 8 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ. 60 ವರ್ಷ ಮೀರಿದ ಅತಿಥಿ ಉಪನ್ಯಾಸಕರಿಗೆ ಭದ್ರತಾ ರೂಪದಲ್ಲಿ ವಾರ್ಷಿಕ 50 ಸಾವಿರ ರೂ.ಗಳಂತೆ 5 ಲಕ್ಷ ರೂ.ಗಳ ಮೊತ್ತದ ಇಡಿಗಂಟಿನ ಸೌಲಭ್ಯವನ್ನು ನೀಡಲು ಮಂಜೂರಾತಿ ಮಾಡಲಾಗಿದೆ.

ಅತಿಥಿ ಉಪನ್ಯಾಸಕರ ಆರೋಗ್ಯ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ.ಗಳ ಆರೋಗ್ಯ ವಿಮಾ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ಆರೋಗ್ಯ ವಿಮಾ ಸೌಲಭ್ಯವನ್ನು ಅನುಷ್ಠಾನಗೊಳಿಸಲು ಮಂಜೂರು ಮಾಡಲಾಗಿದೆ.

Advertisements

ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಧರಣಿ ನಡೆಸಿದ್ದ ಅತಿಥಿ ಉಪನ್ಯಾಸಕರು, ಖಾಯಂಗೊಳಿಸಲು ಬೇಡಿಕೆ ಇರಿಸಿದ್ದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ನಿಯೋಗದೊಂದಿಗೆ ಸಭೆ ನಡೆಸಿ, “ಸೇವಾ ಭದ್ರತೆ ನೀಡಲು ಕಾನೂನು ತೊಡಕುಗಳಿರುವುದರಿಂದ ಸಾಧ್ಯವಾಗುವುದಿಲ್ಲ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ” ಎಂದು ನಿಯೋಗಕ್ಕೆ ತಿಳಿಸಿದ್ದಲ್ಲದೇ, ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X