295+ ಸ್ಥಾನಗಳಲ್ಲಿ ಗೆಲುವು ಖಚಿತ: ‘ಇಂಡಿಯಾ’ ಮೈತ್ರಿಕೂಟದ ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

Date:

Advertisements

“ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದವು ಇಂಡಿಯಾ ಮೈತ್ರಿಕೂಟದ ಮೇಲಿದ್ದು, ಕಡಿಮೆ ಎಂದರೂ 295 ಸ್ಥಾನಗಳನ್ನು ಗೆಲ್ಲುವ ನಂಬಿಕೆ ಇದೆ” ಎಂದು ‘ಇಂಡಿಯಾ’ ಮೈತ್ರಿಕೂಟದ ಸಭೆಯ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

ಇಂದು ಅಂತಿಮ ಹಂತದ ಚುನಾವಣೆ ನಡೆಯುತ್ತಿದೆ. ಅಲ್ಲದೇ, ಜೂನ್ 4ರಂದು ಮತ ಎಣಿಕೆಗೆ ತಮ್ಮ ಕಾರ್ಯತಂತ್ರವನ್ನು ಚರ್ಚಿಸಲು ‘ಇಂಡಿಯಾ’ ಮೈತ್ರಿಕೂಟದ ಹಿರಿಯ ನಾಯಕರು ಇಂದು ದೆಹಲಿಯಲ್ಲಿರುವ ಖರ್ಗೆ ನಿವಾಸದಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಸಭೆ ನಡೆಸಿದರು.

ಈ ಸಭೆಯ ಬಳಿಕ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಇಂದು ಹೆಚ್ಚಿನ ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ (ಎಕ್ಸಿಟ್ ಪೋಲ್) ಪ್ರಸಾರ ಮಾಡುವಲ್ಲಿ ನಿರತವಾಗಿದೆ. ಎಕ್ಸಿಟ್ ಪೋಲ್‌ನಲ್ಲಿ ಭಾಗವಹಿಸಲು ಬಿಜೆಪಿ ಮತ್ತದರ ನಾಯಕರು ಉತ್ಸುಕದಲ್ಲಿದ್ದಾರೆ. ಆದರೆ ಈ ಸಮೀಕ್ಷೆಯ ಚರ್ಚೆಯಲ್ಲಿ ಭಾಗವಹಿಸಲು ಇಂಡಿಯಾ ಮೈತ್ರಿಕೂಟದ ನಾಯಕರು ಭಾಗವಹಿಸುತ್ತಿಲ್ಲ. ನಮ್ಮ ಮೈತ್ರಿಕೂಟಕ್ಕೆ ಜನರ ಆಶೀರ್ವಾದವು ಇರಲಿದೆ ಎಂಬ ನಂಬಿಕೆ ಇದೆ. ಕಡಿಮೆ ಎಂದರೂ 295 ಸ್ಥಾನಗಳನ್ನು ಗೆಲ್ಲುವ ನಂಬಿಕೆ ನಮಗಿದೆ” ಎಂದು ಹೇಳಿದರು.

Advertisements

“ಮತ ಎಣಿಕೆಯ ದಿನ ಅಂಚೆ ಮತ ಎಣಿಕೆಯ ವಿಚಾರವಾಗಿ ಕೆಲವೊಂದು ಸಲಹೆಗಳನ್ನು ನಾವು ಚುನಾವಣಾ ಆಯೋಗಕ್ಕೆ ನೀಡಬೇಕಿದೆ. ಹಾಗಾಗಿ, ನಾಳೆ ಭೇಟಿಗೆ ಸಮಯ ಕೇಳಿದ್ದೇವೆ” ಎಂದ ಮಲ್ಲಿಕಾರ್ಜುನ ಖರ್ಗೆ, “ಮತ ಎಣಿಕೆಯ ದಿನ ಕೊನೆಯ ಕ್ಷಣದವರೆಗೂ ಮತ ಎಣಿಕೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ನಮ್ಮ ಮೈತ್ರಿಕೂಟದ ಮುಖಂಡರು ಕಣ್ಣಿಟ್ಟಿರಬೇಕು” ಎಂದು ಸಲಹೆ ನೀಡಿದರು.

“ಇಂದಿನ ಸಭೆಯಲ್ಲಿ ಎಲ್ಲ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದಾರೆ. ಅವರೆಲ್ಲರಿಗೂ ನಾನು ಧನ್ಯವಾದ ತಿಳಿಸುತ್ತೇನೆ. ನಾವೆಲ್ಲರೂ ಒಂದಾಗಿದ್ದೇವೆ. ದಯವಿಟ್ಟು ನಮ್ಮ ನಡುವೆ ಬಿರುಕು ಉಂಟು ಮಾಡಲು ಪ್ರಯತ್ನಿಸಬೇಡಿ” ಎಂದು ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳಿಗೆ ಕಿವಿಮಾತು ಹೇಳಿದರು.

ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ ವೇಣುಗೋಪಾಲ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಪಂಜಾಬ್ ಸಿಎಂ ಭಗವಂತ್ ಮಾನ್, ಆಪ್ ಸಂಸದ ಸಂಜಯ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿಆರ್ ಬಾಲು ಸೇರಿದಂತೆ ಪ್ರತಿಪಕ್ಷಗಳ ಮೈತ್ರಿಕೂಟದ ಎಲ್ಲ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Exit poll only preplanned strategy of bjp, godi media, with ec alliance, godi media predict exit poll, ruling party celebrate and EC announce poll predict. write it down for june 4.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X