ಹಜ್ 2024 | 1.75 ಲಕ್ಷ ಭಾರತೀಯ ಹಜ್ ಯಾತ್ರಿಕರಿಗೆ ಅವಕಾಶ ಕಲ್ಪಿಸಿದ ಸೌದಿ ಅರೇಬಿಯಾ

Date:

Advertisements

ಭಾರತ ಮತ್ತು ಸೌದಿ ಅರೇಬಿಯಾ ಭಾನುವಾರ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದ್ದು, ಅದರ ಅಡಿಯಲ್ಲಿ 2024ರಲ್ಲಿ ಮುಸ್ಲಿಮರ ಪವಿತ್ರ ಹಜ್ ಯಾತ್ರೆಗಾಗಿ 1,75,025 ಭಾರತೀಯ ಹಜ್ ಯಾತ್ರಿಕರಿಗೆ ಸೌದಿ ಅರೇಬಿಯಾ ಅವಕಾಶ ಕಲ್ಪಿಸಿದೆ.

ಹಾಗೂ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ ಮುರಳೀಧರನ್ ಅವರು ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ ಸಚಿವ ಡಾ. ತೌಫಿಕ್ ಬಿನ್ ಫೌಜಾನ್ ಜೊತೆಗೆ ಜಿದ್ದಾದಲ್ಲಿ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದರು.

ಅಧಿಕೃತ ಹೇಳಿಕೆಯ ಪ್ರಕಾರ, 2024ಕ್ಕೆ ಭಾರತದ ಒಟ್ಟು 1,75,025 ಯಾತ್ರಾರ್ಥಿಗಳಿಗೆ ಕೋಟಾ ಅಂತಿಮಗೊಳಿಸಲಾಗಿದೆ. ಇವುಗಳ ಪೈಕಿ 1,40,020 ಆಸನಗಳನ್ನು ಹಜ್ ಸಮಿತಿ ಹಾಗೂ 35,005 ಯಾತ್ರಾರ್ಥಿಗಳಿಗೆ ಖಾಸಗಿ ನಿರ್ವಾಹಕರ ಮೂಲಕ ಯಾತ್ರೆ ಕೈಗೊಳ್ಳಲು ಅನುಮತಿ ನೀಡಲಾಗಿದೆ.

Advertisements

“ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ದ್ವಿಪಕ್ಷೀಯ ಹಜ್ ಒಪ್ಪಂದಕ್ಕೆ ಸಹಿ ಹಾಕಿರುವುದಕ್ಕೆ ಸಂತೋಷವಾಗಿದೆ. ಸೌದಿ ಅರೇಬಿಯಾ ಹಾಗೂ ಭಾರತದ ಆಸಕ್ತಿಯ ವಿಷಯಗಳ ಬಗ್ಗೆ ಹಜ್ ಮತ್ತು ಉಮ್ರಾ ವ್ಯವಹಾರಗಳ ಸೌದಿ ಸಚಿವರ ಜೊತೆಗೆ ಚರ್ಚಿಸಲಾಯಿತು” ಎಂದು ಸಚಿವೆ ಸ್ಮೃತಿ ಇರಾನಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.


ಕಳೆದ ವರ್ಷ ವು ಹಜ್ ಯಾತ್ರೆಯ ನಿಯಮದಲ್ಲಿ ಕೆಲ ಬದಲಾವಣೆ ತಂದಿತ್ತು. ಅದರ ಪ್ರಕಾರ, ಮಹಿಳೆಯರು ಯಾವುದೇ ಪುರುಷ ರಕ್ಷಕನಿಲ್ಲದೆ ಹಜ್ ಯಾತ್ರೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿತ್ತು. ಈ ವಿಚಾರವನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿರುವ ಸಚಿವೆ ಇರಾನಿ, “”ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ನಮ್ಮ ಪ್ರಸ್ತಾಪವು ನಮ್ಮ ಬದ್ಧತೆಯನ್ನು ಮತ್ತಷ್ಟು ಒತ್ತಿ ಹೇಳುತ್ತದೆ” ಎಂದು ತಿಳಿಸಿದ್ದಾರೆ.

ಸೌದಿಯೊಂದಿಗಿನ ಮಾತುಕತೆಯ ವೇಳೆ ಎಲ್ಲ ಯಾತ್ರಿಕರ ಸಮಗ್ರ ಯೋಗಕ್ಷೇಮವನ್ನು ಖಾತ್ರಿಪಡಿಸುವ, ವೈದ್ಯಕೀಯ ಸೌಲಭ್ಯಗಳ ವರ್ಧನೆಯ ಯೋಜನೆಗಳನ್ನು ಚರ್ಚೆಗಳು ಒಳಗೊಂಡಿತ್ತು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.

ಇರಾನಿ ಮತ್ತು ಮುರಳೀಧರನ್ ಜೆದ್ದಾದ ಕಿಂಗ್ ಅಬ್ದುಲ್ ಅಝೀಝ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಜ್ ಟರ್ಮಿನಲ್‌ಗೆ ಭೇಟಿ ನೀಡಿ, ಯಾತ್ರಾರ್ಥಿಗಳಿಗೆ ಒದಗಿಸಲಾಗುತ್ತಿರುವ ಸೇವೆಗಳನ್ನು ಸೌದಿಯ ನಿಯೋಗದೊಂದಿಗೆ ಪರಿಶೀಲಿಸಿದರು.

ಇರಾನಿ ಮತ್ತು ಮುರಳೀಧರನ್ ಎರಡು ದಿನಗಳ ಭೇಟಿಗಾಗಿ ಭಾನುವಾರ ಸೌದಿಗೆ ತೆರಳಿದ್ದಾರೆ. ಜೆದ್ದಾ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಡಾ. ಸುಹೇಲ್ ಖಾನ್, ಕಾನ್ಸುಲ್ ಜನರಲ್ ಮೊಹಮ್ಮದ್ ಶಾಹಿದ್ ಮತ್ತು ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯದ ಅಧಿಕಾರಿಗಳು ಉಪಸ್ಥಿತರಿದ್ದು, ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X