ಅರುಣಾಚಲ ಪ್ರದೇಶ ಸ್ಥಳಗಳಿಗೆ ಹೊಸ ಹೆಸರಿಟ್ಟ ಚೀನಾ; ಟೀಕಿಸಿ ಸುಮ್ಮನಾದ ಭಾರತ

Date:

  • ಅರುಣಾಚಲ ಪ್ರದೇಶ ರಾಜ್ಯದ 11 ಸ್ಥಳಗಳ ಹೆಸರು ಬದಲಿಸಿದ ಚೀನಾ
  • ಚೀನಾದಿಂದ ಮರುನಾಮಕರಣ ಸ್ಥಳಗಳಿಗೆ ಝಂಗ್ನಾನ್‌ ಎಂದು ಹೆಸರು

ಅರುಣಾಚಲ ಪ್ರದೇಶ ರಾಜ್ಯದಲ್ಲಿ ಹಕ್ಕು ಸಾಧಿಸಲು ಚೀನಾ ತನ್ನ ಪ್ರಯತ್ನ ಮುಂದುವರಿಸಿದೆ. ಮತ್ತೆ ಇಲ್ಲಿನ 11 ಸ್ಥಳಗಳ ಹೆಸರುಗಳನ್ನು ಬದಲಿಸಿದೆ. ಚೀನಾದ ಅತಿಕ್ರಮಣಕಾರಿ ಪ್ರವೃತ್ತಿಯನ್ನು ಖಂಡಿಸಿದ ಭಾರತ, ಹೊಸ ಹೆಸರುಗಳನ್ನು ತಿರಸ್ಕರಿಸಿದೆ.

ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಮೂರನೇ ಹಂತದಲ್ಲಿ ಹೆಸರುಗಳನ್ನು ಬದಲಿಸಿದೆ ಎಂದು ಸೋಮವಾರ (ಏಪ್ರಿಲ್ 3) ವರದಿಯಾಗಿದೆ.

ಹೆಸರು ಬದಲಿಸುವ ಚೀನಾದ ಕ್ರಮವನ್ನು ಭಾರತ ಟೀಕಿಸಿದೆ. ಅರುಣಾಚಲ ಪ್ರದೇಶ ದೇಶದ ಅವಿಭಾಜ್ಯ ಅಂಗ ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಈ ಕುರಿತು ಹೇಳಿಕೆ ನೀಡಿ, “ನಾವು ಈ ರೀತಿಯ ಹಲವು ವರದಿ ನೋಡಿದ್ದೇವೆ. ಚೀನಾ ಇಂತಹ ಪ್ರಯತ್ನ ಮಾಡಿರುವುದು ಇದೇ ಮೊದಲಲ್ಲ. ಇದನ್ನು ಸಾರಾಸಗಟಾಗಿ ತಿರಸ್ಕರಿಸುತ್ತಿದ್ದೇವೆ. ಅರುಣಾಚಲ ರಾಜ್ಯವು ಈ ಹಿಂದೆ, ಈಗ ಹಾಗೂ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗ. ಇದು ಬೇರ್ಪಡಿಸಲಾಗದ ಭಾಗ. ಹೊಸದಾಗಿ ಸೃಷ್ಟಿಸಿದ ಹೆಸರು ಇಡುವುದರಿಂದ ವಾಸ್ತವ ಬದಲಾಗುವುದಿಲ್ಲ” ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಐದು ಶಿಖರಗಳು, ಎರಡು ಭೂ ಪ್ರದೇಶಗಳು, ಎರಡು ವಸತಿ ಪ್ರದೇಶಗಳು ಮತ್ತು ಎರಡು ನದಿಗಳ ಹೆಸರನ್ನು ಬದಲಿಸಿ ಚೀನಾ ಭಾನುವಾರ (ಏಪ್ರಿಲ್ 2) ಪಟ್ಟಿ ಬಿಡುಗಡೆ ಮಾಡಿದೆ.

ಇದು ಸ್ಥಳಗಳ ಹೆಸರುಗಳು ಮತ್ತು ಅವುಗಳ ಅಧೀನದ ಆಡಳಿತ ಜಿಲ್ಲೆಗಳ ವರ್ಗವನ್ನು ಸಹ ಪಟ್ಟಿ ಮಾಡಿದೆ. ಈ 11 ಪ್ರದೇಶಗಳಿಗೆ ಚೈನೀಸ್, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ ಈ ಹೆಸರುಗಳನ್ನು ನೀಡಲಾಗಿದೆ.

ಮರುನಾಮಕರಣ ಮಾಡಿದ ಸ್ಥಳಗಳನ್ನು ಚೀನಾ ಝಂಗ್ನಾನ್ ಎಂದು ಕರೆದಿದೆ. ಇದು ಟಿಬೆಟ್‌ನ ದಕ್ಷಿಣ ಭಾಗ ಎಂದು ಹೇಳಿಕೊಂಡಿದೆ. ಚೀನಾ ಮೂರನೇ ಬಾರಿಗೆ ಅರುಣಾಚಲ ಪ್ರದೇಶದ ಸ್ಥಳಗಳಿಗೆ ಏಕಪಕ್ಷೀಯವಾಗಿ ಹೆಸರು ಬದಲಾಯಿಸಿದೆ ಎಂದು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ ಹೇಳಿದೆ ಎಂದು ವರದಿಯಾಗಿದೆ.

ಚೀನಾ, ಅರುಣಾಚಲ ಪ್ರದೇಶ ಸ್ಥಳಗಳ ಹೆಸರುಗಳನ್ನು ಬದಲಿಸುತ್ತಿರುವುದು ಇದು ಮೂರನೇ ಬಾರಿ. 2018 ಹಾಗೂ 2021ರಲ್ಲಿಯೂ ಇಂತಹದೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಹಿಂದೆ ಬೀಜಿಂಗ್ 2017ರ ಏಪ್ರಿಲ್‌ನಲ್ಲಿ ಆರು ಮತ್ತು 2021ರ ಡಿಸೆಂಬರ್‌ನಲ್ಲಿ 15 ಅರುಣಾಚಲ ಪ್ರದೇಶ ರಾಜ್ಯದ ಸ್ಥಳಗಳನ್ನು ಮರುನಾಮಕರಣ ಮಾಡುವ ಏಕಪಕ್ಷೀಯ ಘೋಷಣೆಗಳನ್ನು ಮಾಡಿತ್ತು. ಈ ಹಿಂದೆಯೂ ಭಾರತ ಚೀನಾದ ಈ ನಿರ್ಧಾರ ತಳ್ಳಿಹಾಕಿತ್ತು.

ಈ ಸುದ್ದಿ ಓದಿದ್ದೀರಾ? ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

ಭಾರತ ಇತ್ತೀಚೆಗೆ ಅರುಣಾಚಲ ಪ್ರದೇಶದಲ್ಲಿ ಜಿ20 ಸರಣಿ ಕಾರ್ಯಕ್ರಮಗಳ ಭಾಗವಾಗಿ ಮಹತ್ವದ ಸಭೆ ನಡೆಸಿತ್ತು. ಈ ಸಭೆಯಲ್ಲಿ ಚೀನಾ ಭಾಗವಹಿಸಿರಲಿಲ್ಲ. ವಿವಾದಿತ ಅರುಣಾಚಲ ಪ್ರದೇಶದಲ್ಲಿ ಜಿ20 ಸಭೆ ಆಯೋಜನೆ ಕುರಿತು ಚೀನಾ ಪರೋಕ್ಷ ಅಸಮಾಧಾನ ಹೊಂದಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ಸರ್ಕಾರ ನೋಡಿದ್ರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಬರುತ್ತಿದೆ: ಆರ್‌ ಅಶೋಕ್‌

ಬೆಂಗಳೂರಿನಲ್ಲಿ ಜೈಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ...

ಪಶ್ಚಿಮ ಬಂಗಾಳ ರಾಜ್ಯಪಾಲದ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ರಾಜ್ಯದಲ್ಲಿ ಲೋಕಸಭಾ ಚುನಾವಣಾ ನಡೆಯುವ ಹಿನ್ನೆಲೆ ಮಧ್ಯಪ್ರದೇಶ ಮಾಡುತ್ತಿರುವ ಪಶ್ಚಿಮ ಬಂಗಾಳ...

ಭ್ರಷ್ಟ ಸುಧಾಕರ್ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ: ಸಿಎಂ ಸಿದ್ದರಾಮಯ್ಯ

ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ...

ಬಿಟ್‌ಕಾಯಿನ್ ಹಗರಣ| ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ಕುಂದ್ರಾಗೆ ಸೇರಿದ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ನಟಿ ಶಿಲ್ಪಾ ಶೆಟ್ಟಿ...