ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

Date:

Advertisements

ಖಲಿಸ್ತಾನಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಕೆನಡಾದಲ್ಲಿ ವೀಸಾ ಸೇವೆಗಳನ್ನು ಭಾರತ ಸರ್ಕಾರ ಸ್ಥಗಿತಗೊಳಿಸಿದೆ.

“ಭಾರತೀಯ ರಾಯಭಾರಿ ಕಚೇರಿಯಿಂದ ಪ್ರಮುಖ ಸೂಚನೆ: ಕಾರ್ಯಾಚರಣೆಯ ಕಾರಣಗಳಿಂದಾಗಿ, 21ನೇ ಸೆಪ್ಟೆಂಬರ್ 2023 ರಿಂದ ಜಾರಿಗೆ ಬರುವಂತೆ, ಮುಂದಿನ ಸೂಚನೆ ಬರುವವರೆಗೆ ಭಾರತೀಯ ವೀಸಾ ಸೇವೆಗಳನ್ನು ಅಮಾನತುಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಬಿಎಲ್‌ಎಸ್ ವೆಬ್‌ಸೈಟ್ ಪರಿಶೀಲಿಸುತ್ತಿರಿ” ಎಂಬ ಸಂದೇಶ ಕೆನಡಾದ ಭಾರತೀಯ ವೀಸಾ ಕೇಂದ್ರದ ಅಧಿಕೃತ ವೆಬ್‌ಸೈಟ್‌ನಿಂದ ಪ್ರಕಟಿಸಲಾಗಿದೆ.

ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ಭಾರತದ ವಿರುದ್ಧ ಆರೋಪಿಸಿದ ಮೂರು ದಿನಗಳ ನಂತರ ಈ ಬೆಳವಣಿಗೆಗಳು ಸಂಭವಿಸಿವೆ.

Advertisements

ಈ ಸುದ್ದಿ ಓದಿದ್ದೀರಾ? ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ

ಕೆನಡಾದ ಪ್ರಧಾನಿ ಟ್ರುಡೊ ಅವರು ಸೋಮವಾರ ಮಾತನಾಡಿ, ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಅವರ ಮಾರಣಾಂತಿಕ ಗುಂಡಿನ ದಾಳಿಯ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದ್ದರು.

ಕೆನಡಾದ ಸರ್ರೆಯ ಗುರುನಾನಕ್ ಸಿಖ್ ಗುರುದ್ವಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಕೆನಡಾದ ಪ್ರಜೆಯ ಹತ್ಯೆಯನ್ನು ಭಾರತ ಸರ್ಕಾರದ ಏಜೆಂಟರು ನಡೆಸಿದ್ದಾರೆ ಎಂದು ನಂಬಲು ನಮ್ಮ ದೇಶದ ರಾಷ್ಟ್ರೀಯ ಭದ್ರತಾ ಅಧಿಕಾರಿಗಳು ಪುರಾವೆಗಳನ್ನು ಹೊಂದಿದ್ದಾರೆ ಎಂದು ಟ್ರೂಡೊ ಹೇಳಿದ್ದಾರೆ.

ಕೆನಡಾ ಮಾಡಿದ ಆರೋಪಗಳಿಗೆ ಪ್ರತ್ಯುತ್ತರ ನೀಡಿದ ಭಾರತ ಸರ್ಕಾರ, ಆರೋಪವು “ಅಸಂಬದ್ಧ” ಮತ್ತು “ಪ್ರಚೋದಿತ” ಎಂದು ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ಹೇಳಿಕೆಯಲ್ಲಿ, “ನಾವು ತಮ್ಮ ಸಂಸತ್ತಿನಲ್ಲಿ ಕೆನಡಾದ ಪ್ರಧಾನಿಯವರ ಹೇಳಿಕೆಯನ್ನು ನೋಡಿದ್ದು, ಇದನ್ನು ತಿರಸ್ಕರಿಸಿದ್ದೇವೆ. ಅಲ್ಲದೆ ಅವರ ವಿದೇಶಾಂಗ ಸಚಿವರ ಹೇಳಿಕೆಯನ್ನು ಸಹ ತಿರಸ್ಕರಿಸಿದ್ದೇವೆ” ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X