ಮುಂದಿನ 5 ವರ್ಷಗಳಲ್ಲಿ ಭಾರತದ ತಲಾ ಆದಾಯವು 2,000 ಡಾಲರ್‌ಗಳಷ್ಟು ಹೆಚ್ಚುತ್ತದೆ: ನಿರ್ಮಲಾ ಸೀತಾರಾಮನ್

Date:

Advertisements

ಪ್ರಸ್ತುತ, ಭಾರತದ ತಲಾ ಆದಾಯವು 2,730 ಡಾಲರ್‌ಗಳಿದ್ದು, ಇದು, ಮುಂದಿನ ಐದು ವರ್ಷಗಳಲ್ಲಿ 2,000 (2,700 ಡಾಲರ್‌ಗೆ) ಡಾಲರ್‌ಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಮಾತನಾಡಿದ ಅವರು, “ಭಾರತವು ಪ್ರಸ್ತುತ ತಲಾ ಆದಾಯದ ಮಟ್ಟವನ್ನು ತಲುಪಲು 75 ವರ್ಷಗಳನ್ನು ತೆಗೆದುಕೊಂಡಿತು. ದೇಶವು ಇತ್ತೀಚೆಗೆ ಜಾಗತಿಕವಾಗಿ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯುವ ಮೂಲಕ ಗಮನಾರ್ಹ ಮೈಲಿಗಲ್ಲು ಸಾಧಿಸಿದೆ” ಎಂದು ಹೇಳಿದ್ದಾರೆ.

“ಕಳೆದ 5 ವರ್ಷಗಳ ಅವಧಿಯಲ್ಲಿ 10ನೇ ಸ್ಥಾನದಿಂದ ಐದನೇ ಅತಿದೊಡ್ಡ ಆರ್ಥಿಕತೆಗೆ ಭಾರತವು ಜಿಗಿತ ಕಂಡಿದೆ. ಹೆಚ್ಚಿನ ಬೆಳವಣಿಗೆ ದರಗಳನ್ನು ಉಳಿಸಿಕೊಂಡಿದೆ. ಹಣದುಬ್ಬರವನ್ನು ಚೆನ್ನಾಗಿ ನಿರ್ವಹಿಸಿದೆ” ಎಂದು ಅವರು ಹೇಳಿದ್ದಾರೆ.

Advertisements

ವಿತ್ತೀಯ ನೀತಿಗಳ ಕುರಿತು ಮಾತನಾಡಿದ ಸೀತಾರಾಮನ್, “ವಿತ್ತೀಯ ಕೊರತೆಯನ್ನು ತಗ್ಗಿಸಲು ಸರ್ಕಾರವು ತನ್ನ ಬದ್ಧತೆಯನ್ನು ಮುಂದುವರೆಸಿದೆ. ಹಣಕಾಸಿನ ಕೊರತೆಯು 2024ರ ಆರ್ಥಿಕ ವರ್ಷದಲ್ಲಿ ಜಿಡಿಪಿಯ 5.6%ನಿಂದ 4.9%ಗೆ ಕುಸಿದಿದೆ ಎಂದು ಅಂದಾಜಿಸಲಾಗಿದೆ” ಎಂದಿದ್ದಾರೆ.

“2047ರ ವೇಳೆಗೆ, ಭಾರತವು ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸಲಿದೆ. ಆ ವೇಳೆಗೆ, ಹೊಸ ಭಾರತೀಯ ಯುಗವು ಅಭಿವೃದ್ಧಿ ಹೊಂದಿದ ದೇಶಗಳಂತೆಯೇ ಪ್ರಮುಖ ಗುಣಲಕ್ಷಣಗಳನ್ನು ಹೊಂದಿರುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X