ಡಿಸಿಎಂ ಡಿ.ಕೆ ಶಿವಕುಮಾರ್‌ ಭೇಟಿಯಾದ ದಾವಣಗೆರೆ ಜಿಲ್ಲೆಯ ಪ್ರಭಾವಿ ಲಿಂಗಾಯತ ನಾಯಕರು

Date:

Advertisements

ದಾವಣಗೆರೆ ಜಿಲ್ಲೆಯ ಇಬ್ಬರು ಪ್ರಭಾವಿ ರಾಜಕೀಯ ನಾಯಕರಾದ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರು ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದ ಸಿದ್ದೇಶರ ಮತ್ತು ಬಿ.ಪಿ.ಹರೀಶ್, ಯಡಿಯೂರಪ್ಪ ಕುಟುಂಬದ ಕಡು ವಿರೋಧಿಗಳಾಗಿ ಗುರುತಿಸಿಕೊಂಡವರು. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಸೋಲಲು, ಯಡಿಯೂರಪ್ಪನವರ ಹೊಂದಾಣಿಕೆ ರಾಜಕೀಯವೇ ಕಾರಣ ಎಂದು ಇಬ್ಬರು ನಾಯಕರು ನೇರವಾಗಿ ಆರೋಪಿಸಿದ್ದವರು.

ಈಗ ಇಬ್ಬರು ನಾಯಕರು ಡಿ ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಒಂದು ಕಡೆ, ಜಾತಿಗಣತಿ ವರದಿಯ ಸುತ್ತ ಸಿಕ್ಕಾಪಟ್ಟೆ ರಾಜಕೀಯ ನಡೆಯುತ್ತಿರುವ ಸಂದರ್ಭದಲ್ಲಿ ಲಿಂಗಾಯತ ಸಮುದಾಯದ ಈ ಇಬ್ಬರು ನಾಯಕರು ಡಿಸಿಎಂ ಭೇಟಿಯಾಗಿರುವುದಕ್ಕೂ ಒಂದಕ್ಕೊಂದು ಸಂಬಂಧ ಇದೆಯಾ ಎನ್ನುವ ಪ್ರಶ್ನೆ ಮೂಡಿದೆ.

Advertisements

ಸಾಮಾನ್ಯವಾಗಿ, ಏನೇ ರಾಜಕೀಯ ಚಟುವಟಿಕೆ ನಡೆದರೂ, ಇದೊಂದು ಸೌಜನ್ಯದ ಭೇಟಿ ಎಂದು ಹೇಳುವುದು ರಾಜಕೀಯದಲ್ಲಿ ಸಾಮಾನ್ಯ. ಆದರೆ, ಫೋಟೋ ಶೇರ್ ಮಾಡಿಕೊಂಡ ಡಿ.ಕೆ.ಶಿವಕುಮಾರ್ ಅವರು ಇದೊಂದು ಸೌಜನ್ಯದ ಭೇಟಿ ಎಂದು ಹೇಳದೇ ಇರುವುದು ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

ದಾವಣಗೆರೆಯಲ್ಲಿ ಸಿದ್ದೇಶ್ವರ ಅವರ ಆಪ್ತ ಗುತ್ತಿಗೆದಾರರೊಬ್ಬರ ಪೂರ್ಣಗೊಳಿಸಿರುವ ಕಾಮಗಾರಿಯ ಬಿಲ್ ತುಂಬಾ ದಿನಗಳಿಂದ ಬಾಕಿ ಉಳಿದಿರುವ ಹಿನ್ನಲೆಯಲ್ಲಿ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು ಎಂದು ಸಹ ತಿಳಿದುಬಂದಿದೆ.‌

ಡಿ ಕೆ ಶಿವಕುಮಾರ್ 2 8

ಬಿ ವೈ ರಾಘವೇಂದ್ರ ಭೇಟಿ

ಬಿಜೆಪಿ ಮುಖಂಡ, ಸಂಸದ ಬಿ ವೈ ರಾಘವೇಂದ್ರ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಖಾಸಗಿ ಕಾರ್ಯಕ್ರಮಕ್ಕೆ ಡಿಸಿಎಂ ಅವರನ್ನು ಆಹ್ವಾನಿಸಲು ಬಂದಿದ್ದರು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X