ಒಳ ಮೀಸಲಾತಿ | ಬಿಜೆಪಿ ನಿಲುವು ಸ್ಪಷ್ಟವಿದೆ, ಕಾಂಗ್ರೆಸ್‌ನದ್ದೇ ಡಬಲ್ ಗೇಮ್: ಸಂಸದ ಬೊಮ್ಮಾಯಿ

Date:

Advertisements

ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವು ಸ್ಪಷ್ಟವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, “ಮೊದಲು ಸಂವಿಧಾನ‌ ತಿದ್ದುಪಡಿ ಆದ ಮೇಲೆ ಮಾಡುತ್ತೇವೆ ಅಂತ ಕಣ್ಣೊರೆಸುವ ತಂತ್ರ ಮಾಡಿದರು. ಈಗ ಸುಪ್ರೀಂ ಕೋರ್ಟ್ ಆದೇಶ ಬಂದ ಮೇಲೆ ಚರ್ಚೆ ಮಾಡುತ್ತೇವೆ ಅಂತ ಹೇಳುತ್ತಾರೆ. ಅವರಿಗೆ ದಲಿತರಾಗಲಿ ಹಿಂದುಳಿದವರಾಗಲಿ ಅಭಿವೃದ್ಧಿ ಆಗುವುದು ಬೇಡ” ಎಂದರು.

“ಜಾತಿ ಗಣತಿ ವಿಚಾರದಲ್ಲಿಯೂ ಅಷ್ಟೆ, ಜಾತಿ ಗಣತಿ ವರದಿಯನ್ನು ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸ್ವೀಕಾರ ಮಾಡಲಿಲ್ಲ ಅಂತ ಹೇಳಿದ್ದಾರೆ. ಕಾಂತರಾಜು ಅವರು ಸಿದ್ದರಾಮಯ್ಯ ಅವರ ಅವಧಿಯಲ್ಲಿ 2017 ರಲ್ಲಿಯೇ ವರದಿ ನೀಡಿದ್ದಾರೆ. ಹಿಂದುಳಿಸ ವರ್ಗದ ಚಾಂಪಿಯನ್ ಅಂತ ಹೇಳಿಕೊಳ್ಳುವವರು ಆಗ ಯಾಕೆ ಒಪ್ಪಿಕೊಳ್ಳಲಿಲ್ಲ” ಎಂದು ಪ್ರಶ್ನಿಸಿದರು.

Advertisements

“ಕಾಂತರಾಜ್ ಅವರು ಅಧ್ಯಯನ ಮಾಡಿ ವರದಿ ಸಿದ್ದಪಡಿಸಿದ್ದರು. ಜಯಪ್ರಕಾಶ್ ಹೆಗಡೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ವರದಿ ತಿದ್ದುಪಡಿ ಮಾಡಿಸಿಕೊಂಡಿದ್ದಾರೆ. ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಹಿಂದುಳಿದ ವರ್ಗದವರ ಅಭಿವೃದ್ಧಿ ಆಗಬೇಕು. ಇದು ಗೊಂದಲದ ಗೂಡಾಗಬಾರದು, ಸಮಾಜದಲ್ಲಿ ಗೊಂದಲ ಉಂಟು ಮಾಡಬಾರದು. ಸಿಎಂ ತಮ್ಮ ಮೇಲೆ ಮುಡಾ ಹಗರಣದ ಆರೋಪ ಬಂದ ಕೂಡಲೆ ಅದರಿಂದ ದಾರಿ ತಪ್ಪಿಸಲು ಜಾತಿ ಗಣತಿ ವರದಿ ಪ್ರಸ್ತಾಪ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ” ಎಂದು ಕೇಳಿದರು.

ಬೊಮ್ಮಾಯಿ ಶಿಫಾರಸ್ಸು ಜಾರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಎಲ್ಲ ಪ್ರಮುಖರ ಜೊತೆ ಇಂದು ಸಮಾಲೋಚನಾ ಸಭೆ ಕರೆದಿದ್ದೆವು. ಹಿಂದೆ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಮೀಸಲಾತಿ ಬಗ್ಗೆ ನಿರ್ಣಯ ಕೈಗೊಂಡಿದ್ದರು. ವರ್ಗೀಕರಣ ಮಾಡುವ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿದ್ದರು. ಇವುಗಳ ಕುರಿತು ಚರ್ಚಿಸಿ ಒಳ ಮೀಸಲಾತಿ ವಿಚಾರವಾಗಿ ಸರ್ವರೊಂದಿಗೆ ಚರ್ಚೆ ಮಾಡಿದ್ದು, ಹಿಂದಿನ ಬೊಮ್ಮಾಯಿ ಸರಕಾರ ಕೇಂದ್ರಕ್ಕೆ ಮಾಡಿದ ಶಿಫಾರಸನ್ನು ರಾಜ್ಯದ ಕಾಂಗ್ರೆಸ್ ಸರಕಾರ ಯಥಾವತ್ತಾಗಿ ಜಾರಿಗೊಳಿಸಬೇಕು” ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X