ಬಂಗಾಳ ಸಿಎಂ ಮಮತಾ ವಿರುದ್ಧ ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ಕ್ಷಮೆಯಾಚನೆ

Date:

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಾಕಾರಿ ಟೀಕೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬುಧವಾರ ಕ್ಷಮೆಯಾಚಿಸಿದ್ದಾರೆ.

ವಿಡಿಯೋವೊಂದರ ತುಣುಕನ್ನು ಹಂಚಿಕೊಂಡಿದ್ದ ಘೋಷ್, ‘ಬೆಂಗಾಲ್ ನಿಜೇರ್ ಮೇಯೆ ಕೆ ಚಾಯ್ (ಬಂಗಾಳ ತನ್ನ ಸ್ವಂತ ಮಗಳನ್ನು ಬಯಸುತ್ತದೆ)’ ಎಂಬ ಘೋಷಣೆಯನ್ನು ಲೇವಡಿ ಮಾಡಿದ್ದರು. “ಮಮತಾ ಗೋವಾಕ್ಕೆ ಹೋದಾಗ ಗೋವಾದ ಮಗಳು ಅಂತಾರೆ, ತ್ರಿಪುರಾದಲ್ಲಿ ತ್ರಿಪುರಾ ಮಗಳು ಅಂತಾರೆ, ಮೊದಲು ಅವರು ಅವರ ತಂದೆಯ ಗುರುತನ್ನು ಸ್ಪಷ್ಟಪಡಿಸಲಿ” ಎಂದು ವ್ಯಂಗ್ಯವಾಡಿದ್ದಾರೆ.

ಅವರ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು ಸಲ್ಲಿಸಿದೆ. ಮಾದರಿ ನೀತಿ ಸಂಹಿತೆಯನ್ನು ಬಿಜೆಪಿ ಉಲ್ಲಂಘಿಸಿದೆ ಎಂದೂ ಆರೋಪಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘೋಷ್‌ ಟೀಕೆಗೆ ಬಿಜೆಪಿ ವಿವರಣೆ ಕೇಳಿದೆ. ಕೆಲವು ಬಿಜೆಪಿಗರು ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ, ಅವರು ಕ್ಷಮೆ ಕೇಳಿದ್ದಾರೆ.

“ಮುಖ್ಯಮಂತ್ರಿ ಮಮತಾ ಜೊತೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ನಾನು ಬ್ಯಾನರ್ಜಿಯವರ ರಾಜಕೀಯ ಹೇಳಿಕೆಗಳನ್ನು ಮಾತ್ರ ಪ್ರತಿಭಟಿಸಿದ್ದೇನೆ. ಯಾರೇ ತಪ್ಪು ಮಾಡಿದರೂ, ಅವರ ಎದುರೇ ನಾನು ಖಂಡಿಸುತ್ತೇನೆ. ನನ್ನ ಹೇಳಿಕೆಗಳ ಬಗ್ಗೆ ವಿವಾದ ಭುಗಿಲೆದ್ದಿರುವುದು ಇದೇ ಮೊದಲಲ್ಲ” ಎಂದು ಘೋಷ್ ಹೇಳಿದ್ದಾರೆ.

“ಮಹಿಳೆಯರ ಬಗ್ಗೆ, ಅದರಲ್ಲೂ ಮುಖ್ಯಮಂತ್ರಿಯಾಗಿರುವ ಯಾರೊಬ್ಬರ ವಿರುದ್ಧದ ಹೇಳಿಕೆಗಳನ್ನು ನಮ್ಮ ಪಕ್ಷ ಬೆಂಬಲಿಸುವುದಿಲ್ಲ. ಅದಕ್ಕಾಗಿಯೇ ಘೋಷ್ ಅವರಿಂದ ವಿವರಣೆ ಕೇಳಲಾಗಿದೆ” ಎಂದು ಬಿಜೆಪಿ ವಕ್ತಾರ ಸಾಮಿಕ್ ಭಟ್ಟಾಚಾರ್ಯ ಹೇಳಿದ್ದಾರೆ.

ಹಾಲಿ ಮೇದಿನಿಪುರ ಸಂಸದರಾಗಿರುವ ಘೋಷ್, ಈ ಬಾರಿ ಚುನಾವಣೆಯಲ್ಲಿ ಬರ್ಧಮಾನ್-ದುರ್ಗಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...