ಒಳ ಮೀಸಲಾತಿ ಸಮೀಕ್ಷೆ | ಕೊರಚ ಅಥವಾ ಕೊರಚರ್ ಎಂದು ನಮೂದಿಸಲು ಕೊರಚ ಮಹಾಸಭಾ ಕರೆ

Date:

Advertisements

ಒಳ ಮೀಸಲಾತಿ ವಿಂಗಣೆಗಾಗಿ ನಡೆಸುವ ಸಮೀಕ್ಷೆ ಸಂದರ್ಭದಲ್ಲಿ ನಿಗದಿಪಡಿಸಿದ ಕಾಲಂಗಳಲ್ಲಿ ನಮ್ಮ ಸಮುದಾಯದವರು ನಮ್ಮ ಜಾತಿಯನ್ನು ಕಡ್ಡಾಯವಾಗಿ ‘ಕೊರಚ’ ಇಲ್ಲವೆ ‘ಕೊರಚರ್’ ಎಂದು ಮಾತ್ರ ನಮೂದಿಸಬೇಕು ಎಂದು ಅಖಿಲ ಕರ್ನಾಟಕ ಕೊರಚ ಮಹಾಸಭಾ ಕರೆ ನೀಡಿದೆ.

ಬೆಂಗಳೂರಿನ ಪ್ರಸ್‌ಕ್ಲಬ್‌ನಲ್ಲಿ ಸೋಮವಾರ ನಡೆದ ಜಂಟಿಸುದ್ದಿಗೋಷ್ಠಿಯಲ್ಲಿ ಮಹಾಸಭಾ ಅಧ್ಯಕ್ಷ ಆದರ್ಶ ಯಲ್ಲಪ್ಪ, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಮಾತನಾಡಿ, “ಪರಿಶಿಷ್ಟರ ಉಪಜಾತಿಯಾದ ಕೊರಚ ಸಮುದಾಯ ಎಲ್ಲಾ ಜಿಲ್ಲೆಗಳಲ್ಲೂ ಅಸ್ಥಿತ್ವ ಹೊಂದಿವೆ. ಗಣತಿದಾರರು ಆಂತರಿಕ ಹಿಂದುಳಿದಿರುವಿಕೆಯ ಬಗ್ಗೆ ಸರಿಯಾದ ದತ್ತಾಂಶ ಕಲೆಹಾಕಲು ಮನೆ ಮನೆಗೆ ಭೇಟಿ ನೀಡಿದಾಗ ತಪ್ಪದೇ ಕೊರಚ ಇಲ್ಲವೆ ಕೊರಚರ್ ಎಂದು ಕಾಲಂಗಳಲ್ಲಿ ನಮೂದಿಸಬೇಕು” ಎಂದು ಮನವಿ ಮಾಡಿದರು.

“ಕೊರಚ ಜನಾಂಗದಲ್ಲಿ ದಬ್ಬೆ ಕೊರಚ, ಹಗ್ಗ ಕೊರಚ, ಕುಂಚಿ ಕೊರಚ ಎಂಬ ಉಪ ಪಂಗಡಗಳಿದ್ದು ಈ ಮೂರು ಉಪ ಪಂಗಡಗಳನ್ನು ಕೊರಚ ಎಂದು ಪರಿಗಣಿಸಬೇಕು. ಇದರಿಂದ ಮುಂಬರುವ ದಿನಗಳಲ್ಲಿ ಸಮಾಜಿಕ, ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪತ್ತೆ ಮಾಡಲು ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ” ಎಂದರು.

Advertisements

“ಪ್ರತಿ ಜಿಲ್ಲೆಗಳಲ್ಲಿ ಕೊರಚ ಸಮುದಾಯ ಭವನ, ವಸತಿ ನಿಲಯಗಳ ನಿರ್ಮಾಣ, ಪ್ರತ್ಯೇಕ ಅಭಿವೃದ್ಧಿ ನಿಗಮ, ಸಮುದಾಯದ ಸಂಪ್ರದಾಯ ಆಚರಣೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ, ವಚನಕಾರ ನುಲಿಯಾ ಚಂದಯ್ಯ ಅವರ ಹೆಸರಿನಲ್ಲಿ ಶರಣ ನೂಲಿ ಚಂದಯ್ಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಸಮುದಾಯದ ಏಳಿಗೆಗೆ ಸಹಕರಿಸುವ, ಸಂಘದಿಂದ ಕೊರಚ ಜನಾಂಗಕ್ಕೆ ಬಿದಿರು ಪುಟ್ಟಿ ಹೆಣೆಯಲು ಬೊಂಬು ಮತ್ತು ಗಳಗಳನ್ನು ಒದಗಿಸಿಕೊಡಲು ಬಿದಿರು ಸೊಸೈಟಿ ಆರಂಭಿಸುವ, ಕೊರಚ ಕುಲಶಾಸ್ತ್ರ ಅಧ್ಯಯನಕ್ಕೆ ಆದ್ಯತೆ ನೀಡಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಒಳ ಮೀಸಲಾತಿ | ಜಾತಿ ರಹಿತ ಬೌದ್ಧರಿಗೆ ಸಮೀಕ್ಷೆಯಲ್ಲಿ ಪ್ರತ್ಯೇಕ ಧರ್ಮದ ಕಾಲಂ ರಚಿಸಿ: ಬೌದ್ಧ ಮಹಾಸಭಾ ಆಗ್ರಹ

“ಕೊರಚರ ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ, ಅಲೆಮಾರಿ ಜನಾಂಗದವರಿಗೆ ಸರ್ಕಾರಿ ಜಾಗ ಗುರುತಿಸಿ ಮಂಜೂರು ಮಾಡಿಸಿಕೊಡುವುದು, ಮಹಿಳಾ ಸಬಲೀಕರಣ ಅಡಿಯಲ್ಲಿ ಸಮುದಾಯದ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಸಹಾಯಧನ ನೀಡುವ, ಸರ್ಕಾರದಿಂದ ದೊರೆಯುವ ಪ್ರೇರಣಾ ಸಾಲ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳ ಸೌಲಭ್ಯ ಒದಗಿಸಲಾಗುವುದು” ಎಂದರು.

ಸುದ್ದಿಗೋಷ್ಠಿಯಲ್ಲಿ ಖಜಾಂಚಿ ಗಂಗಪ್ಪ.ಕೆ, ಹಿರಿಯ ಮುಖಂಡರಾದ ವಿನಾಯಕ ಪೆನುಗೊಂಡ ಧನಂಜಯ.ಎನ್, ಸಂಘದ ಪದಾಧಿಕಾರಿಗಳಾದ ಸಿದ್ದೇಶ್ ಮಾದಪುರ, ಮಾರುತಿ ಮಾಕಡವಾಲೆ, ಕುಂಸಿ ಶ್ರೀನಿವಾಸ್, ಪುರಶೋತ್ತಮಯಲ್ಲಾಪುರ, ವಿಜಯ್ಕುಮಾರ್ ಶ್ರೀನಿವಾಸ, ಶಿವು.ಜಿ, ಬಾಲಕೃಷ್ಣಪ್ಪ, ಕೆ.ವಿ.ಮಂಜುನಾಥ, ಲೋಕೇಶ್ ಆಂಜಿನಪ್ಪ ಪ್ರಕಾಶ ಲಿಗಾಡಿ, ಸುರೇಶ್ ಎನ್ ವಿಜಯ್ಕುಮಾರ್, ಏಕಲವ್ಯ ಕೃಷ್ಣಪ್ಪ, ಬಳೆಗಾರ, ಕಿರಣ್, ಸೀತಾರಾಮಯ್ಯ ಅಜಯ್.ಎನ್, ಕವಾಡಿ ಚಂದ್ರಪ್ಪ, ಸಂತೋಷ್ ಸಿ, ಅಂಜಿನಪ್ಪ, ಕುಮಾರ್ ಮಾರುತಿ, ಹೆಚ್.ಯಶೋಧ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X