ನಮ್ಮ ಬಗ್ಗೆಯೂ ತನಿಖೆ ಮಾಡಿ, ಆದರೆ ಮೊದಲು ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಬಿ ವೈ ವಿಜಯೇಂದ್ರ

Date:

Advertisements

ಮುಖ್ಯಮಂತ್ರಿಗಳೇ ನೀವು ಅಹಿಂದ ಹೆಸರು ಹೇಳಿ ಅಧಿಕಾರಕ್ಕೆ ಬಂದವರು. ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಆದುದನ್ನು ಒಪ್ಪಿಕೊಂಡಿದ್ದೀರಿ. ತಮ್ಮ ಸಂಪುಟದ ಸಚಿವರಾಗಿದ್ದವರು ಇವತ್ತು ಇ.ಡಿ. ಕಸ್ಟಡಿಯಲ್ಲಿದ್ದಾರೆ. ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ಇಂತಹ ಹಗರಣ ನಡೆಯಲು ಅಸಾಧ್ಯ. ತಾವು ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ವಿನಂತಿ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಬಳ್ಳಾರಿಯಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ವಾಲ್ಮೀಕಿ ನಿಗಮದ ಹಣ ದೋಚಿ ಆ ಹಣದಿಂದ ಹೆಂಡ ಖರೀದಿಸಿ, ಬಳ್ಳಾರಿ ಮತ್ತಿತರ ಕಡೆ ಚುನಾವಣೆ ವೇಳೆ ಬಳಸಿದ್ದಾರೆ. ಅಲ್ಲದೆ, ಹೊರರಾಜ್ಯಗಳಲ್ಲೂ ಬಳಸಿದ್ದಾರೆ ಎಂದು ಇ.ಡಿ. ಹೇಳಿದೆ. ಹಾಗಿದ್ದರೆ ಇದೆಲ್ಲದಕ್ಕೂ ಕೇವಲ ಅಧಿಕಾರಿಗಳು ಹೊಣೆಗಾರರೇ” ಎಂದು ಕೇಳಿದರು.

“ಅಸಮರ್ಥ ಸಿಎಂ ಇದ್ದರೆ ಅಥವಾ ಸಚಿವರ, ಸಿಎಂ ಮೌಖಿಕ ಒಪ್ಪಿಗೆ ಇದ್ದರೆ ಮಾತ್ರ ವಾಲ್ಮೀಕಿ ನಿಗಮದ ಹಣ ದುರುಪಯೋಗದಂತಹ ಭ್ರಷ್ಟಾಚಾರದ ಹಗರಣ ನಡೆಯಲು ಸಾಧ್ಯ” ಎಂದರು.

Advertisements

“ಅಸ್ತಿತ್ವವೇ ಇಲ್ಲದ ಕಂಪೆನಿ ಹೆಸರಿಗೆ ಹಣ ವರ್ಗಾವಣೆ ಮಾಡಿ, ಅದನ್ನು ವಿತ್‍ಡ್ರಾ ಮಾಡಿ ಹಗರಣ ಮಾಡಿದ್ದಾರೆ. ಬಿಜೆಪಿ ಸರಕಾರದ ಹಗರಣಗಳ ತನಿಖೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಯಾರು ನಿಮ್ಮನ್ನು ತಡೆಯುತ್ತಿದ್ದಾರೆ? ಯಾವುದೇ ಹಗರಣ ಇದ್ದರೂ ತನಿಖೆ ಮಾಡಿ. ಆದರೆ, ನಮ್ಮ ಪ್ರಶ್ನೆಗೆ ಮೊದಲು ಸಿಎಂ ಉತ್ತರಿಸಬೇಕು. ತಾವೇ ಹಣಕಾಸಿನ ಸಚಿವರಾದ ಕಾರಣ ಈ ಹಗರಣಕ್ಕೆ ಸಂಬಂಧಿಸಿ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.

ಹಗರಣದಲ್ಲಿ ದೊಡ್ಡ ದೊಡ್ಡ ಹೆಸರುಗಳು

“ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಸುಮಾರು 2 ತಿಂಗಳ ಬಳಿಕ ನಿನ್ನೆ 25 ಲಕ್ಷ ಪರಿಹಾರ ಘೋಷಿಸಿದ್ದಾರೆ. ಬಿಜೆಪಿ ಈ ವಿಚಾರದಲ್ಲಿ ನಿರಂತರವಾಗಿ ಆಗ್ರಹಿಸುತ್ತ ಬಂದಿತ್ತು ಎಂದರು. ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡ ದೊಡ್ಡ ಹೆಸರುಗಳು ಕೇಳಿಬರುತ್ತಿದೆ. ಕೇವಲ ನಾಗೇಂದ್ರ ರಾಜೀನಾಮೆ, ಅವರ ಕಸ್ಟಡಿಗೆ ಈ ಹಗರಣ ಮುಗಿಯುವುದಿಲ್ಲ” ಎಂದು ವಿಜಯೇಂದ್ರ ತಿಳಿಸಿದರು.

“ಲ್ಯಾಂಬೊರ್ಗಿನಿ, ಬೆಂಝ್ ಕಾರನ್ನು ವಾಪಸ್ ಕೊಟ್ಟು ಹಣ ತರುವುದಾಗಿ ಹೇಳಿದ್ದಾರೆ. ಅದನ್ನು ನಿಮ್ಮಲ್ಲಿರುವ ಯಾರಿಗೋ ಗಿಫ್ಟ್ ಕೊಡಲು ಖರೀದಿ ಮಾಡಿರಬಹುದಲ್ಲವೇ? ಕದ್ದ ಮಾಲು ವಾಪಸ್ ಬಂದಿದೆ ಎಂದ ಮಾತ್ರಕ್ಕೆ ಬಚಾವಾಗಲು ಸಾಧ್ಯವಿಲ್ಲ. ದುಡ್ಡನ್ನು ಚುನಾವಣೆಗೆ ಬಳಸಿದ್ದಾರೆ. ಸತ್ಯನಾರಾಯಣ ವರ್ಮ ಮನೆಯಲ್ಲಿ 12 ಕೋಟಿ ಸಿಕ್ಕಿದೆ. ಆ ಕುರಿತು ನನಗೇನೋ ಇವತ್ತಿಗೂ ಅನುಮಾನವಿದೆ” ಎಂದರು.

“ಇ.ಡಿ., ಸಿಬಿಐ ಮೂಲಕ ಸರಕಾರ ಅಭದ್ರಗೊಳಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಸಿಎಂ ಹೇಳುತ್ತಾರೆ. ಹಿಂದುಳಿದ ವರ್ಗಗಳ ಮುಖ್ಯಮಂತ್ರಿಯ ಸ್ಥಾನ ಅಭದ್ರಗೊಳಿಸುವುದೆಂದು ಯಾಕೆ ಭಾವಿಸುತ್ತೀರಿ? ಭ್ರಷ್ಟಾಚಾರ ಎಂದರೆ ಅದು ಭ್ರಷ್ಟಾಚಾರ ತಾನೇ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X