ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ | ಟೆಂಡರ್ ಪ್ರಕ್ರಿಯೆ ಸೇರಿ ವಿವಿಧ ಅಕ್ರಮದ ತನಿಖೆಗೆ ಸಿಎಂ ಆದೇಶ

Date:

Advertisements
  • ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಟಿಪ್ಪಣಿ
  • ಎರಡು ವಾರಗಳೊಳಗೆ ಪಾರದರ್ಶಕ ವರದಿ ಸಲ್ಲಿಸಲು ಸೂಚನೆ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಟೆಂಡರ್ ಪ್ರಕ್ರಿಯೆ ಸೇರಿ ವಿವಿಧ ಅಕ್ರಮಗಳ ಕುರಿತು ತನಿಖೆ ನಡೆಸಲು ತಂಡ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಈ ಕುರಿತು ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಟಿಪ್ಪಣಿ ಹೊರಡಿಸಿದ್ದು, “ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು ಇಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರಕುತ್ತಿಲ್ಲ, ಟೆಂಡರ್‌ಗಳು ಹಾಗೂ ಔಷಧಗಳ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದ ಅಕ್ರಮಗಳು ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿರುತ್ತವೆ. ಎಲ್ಲ ಹಿನ್ನಲೆಯಲ್ಲಿ ಒಬ್ಬ ಐಎಎಸ್‌ ಅಧಿಕಾರಿಯ ನೇತೃತ್ವದಲ್ಲಿ ಉತ್ತಮ ಚಾರಿತ್ರ್ಯ ಹೊಂದಿರುವ ಸಹಕಾರ ಇಲಾಖೆಯ ಒಬ್ಬ ಅಧಿಕಾರಿ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡವನ್ನು ಈ ಕೂಡಲೇ ರಚಿಸಿ, ಎರಡು ವಾರಗಳೊಳಗೆ ಪಾರದರ್ಶಕ ವರದಿ ಸಲ್ಲಿಸಿ” ಎಂದು ಸಿಎಂ ಸೂಚಿಸಿದ್ದಾರೆ.

ಸಂಸ್ಥೆಯಲ್ಲಿನ ಕೆಲ ವೈದ್ಯರು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಾಲ್ಕು ಪುಟಗಳ ವರದಿಸಹಿತ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಶೀಘ್ರವೇ ತನಿಖಾ ತಂಡ ರಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

ದೂರಿನಲ್ಲಿ ಏನಿದೆ?

ಪೆಟ್‌ಸ್ಕ್ಯಾನ್ ಟೆಂಡರ್ ನಿಯಮ ಉಲ್ಲಂಘನೆಯಾಗಿದ್ದು, ನಿರ್ದೇಶಕರು ಅವಧಿಗೂ ಮುನ್ನವೇ ಟೆಂಡ‌ರ್ ಕಾರ್ಯಾದೇಶ, ಬಿಲ್ಡಿಂಗ್, ಹೆಚ್ಚುವರಿ ಹಣ ವಸೂಲಿ, ಟೆಂಡರ್ ನಿಯಮ ಉಲ್ಲಂ‍ಘಿಸಿ ಮಾನವ ಸಂಪನ್ಮೂಲ ಒದಗಣೆ, ಕಳಪೆ ಪೆಟ್‌ಸ್ಕ್ಯಾನ್ ಯಂತ್ರ ಖರೀದಿ, ಜಿಎಸ್‌ಟಿ ವಂಚನೆ, ಸರಕಾರದ ಅನುಮೋದನೆ ಇಲ್ಲದೆ ಟೆಂಡರ್‌ದಾರರಿಗೆ ಪೆಟ್‌ಸ್ಕ್ಯಾನ್ ಪರೀಕ್ಷೆಗಳ ಹಣ ಸಂದಾಯ, ಪಿಪಿಪಿ ಮಾದರಿಯ ನಿಯಮ ಉಲ್ಲಂಘನೆ, ಕಳಪೆ ಗುಣಮಟ್ಟದ ಔಷಧಿ, ಔಷಧಿಗಳ ಖರೀದಿಯಲ್ಲಿ ಅಕ್ರಮ, ರೋಗಿಗಳ ಸಾವಿನ ಸಂಖ್ಯೆ ಹೆಚ್ಚಳ ಹಾಗೂ ಆಡಳಿತ ವ್ಯವಸ್ಥೆಯ ಸಂಪೂರ್ಣ ವಿಫಲತೆ ಕುರಿತಂತೆ ಸುಮಾರು 15ಕ್ಕೂ ಹೆಚ್ಚು ಆರೋಪಗಳ ದೂರು ಸಲ್ಲಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X