ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಸೂಚಿಸಿದ ವಿಶೇಷ ನ್ಯಾಯಾಲಯದ ಆದೇಶ ಕಾನೂನುಬಾಹಿರವೇ?

Date:

Advertisements
ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಸೂಚಿಸಿದ ವಿಶೇಷ ನ್ಯಾಯಾಲಯದ ಆದೇಶ ಕಾನೂನುಬಾಹಿರವೇ? ಜಾರಿ ಮಾಡಲು ಸಾಧ್ಯವಿಲ್ಲದ ಆದೇಶದಿಂದ ಸಿದ್ದರಾಮಯ್ಯನವರಿಗೆ ಅನುಕೂಲವಾಗಲಿದೆಯೇ?  
ಇಲ್ಲಿದೆ ಈ ದಿನ ಸ್ಫೋಟಕ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಲೋಕಾಯುಕ್ತ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಸೆ.25) ನೀಡಿರುವ ಆದೇಶವನ್ನು ಜಾರಿ ಮಾಡುವುದು ಸಾಧ್ಯವೇ ಎಂಬ ಪ್ರಶ್ನೆ ಎದ್ದಿದೆ. ಏಕೆಂದರೆ ಅಸ್ತಿತ್ವದಲ್ಲೇ ಇಲ್ಲದ ಹಿಂದಿನ ಸಿಆರ್‌ಪಿಸಿ (ಅಪರಾಧ ದಂಡ ಪ್ರಕ್ರಿಯಾ ಸಂಹಿತೆ) ಅಡಿಯಲ್ಲಿ ನ್ಯಾಯಾಧೀಶರು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ್ದಾರೆ. ನ್ಯಾಯಾಧೀಶರ ಈ ಆದೇಶ ಅಚ್ಚರಿದಾಯಕವಾಗಿದೆ. ಏಕೆಂದರೆ, ಆದೇಶ ಈ ರೀತಿ ಇರುವುದರಿಂದ ತನಿಖೆ ಆರಂಭಿಸಲು ಲೋಕಾಯುಕ್ತ ಪೊಲೀಸರಿಗೆ ಹೇಗೆ ಸಾಧ್ಯ ಎಂಬ ಪ್ರಶ್ನೆ ಎದುರಾಗಿದೆ. ಹಾಗಾಗಿ ಆದೇಶದಲ್ಲಿರುವ ಈ ಲೋಪವೇ ಸಿದ್ದರಾಮಯ್ಯನವರ ವಿರುದ್ಧದ ತನಿಖೆ ಆಗದಂತೆ ತಡೆದಂತಾಗುತ್ತದೆ.

ರಾಜ್ಯ ಹೈಕೋರ್ಟಿನ ಪೀಠವು ಸಿದ್ದರಾಮಯ್ಯನವರ ಮೇಲೆ ತನಿಖೆ ನಡೆಸಲು ರಾಜ್ಯಪಾಲರು ನೀಡಿದ ಅನುಮತಿಯ ಕ್ರಮಬದ್ಧತೆಯನ್ನು ಎತ್ತಿ ಹಿಡಿದು ಸೆ.24ರಂದು ತೀರ್ಪು ನೀಡಿತ್ತು. ಅದರ ಮರುದಿನವೇ, ಅಂದರೆ ಸೆ.25ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತದ ಮೈಸೂರು ಎಸ್‌ಪಿಯವರು ಸಿಆರ್‌ಪಿಸಿಯ 156 (3)ರ ಅಡಿಯಲ್ಲಿ ಈ ಸಂಬಂಧ ತನಿಖೆ ನಡೆಸಬೇಕೆಂದು ಆದೇಶ ಮಾಡಿತ್ತು. ಅಲ್ಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಲೋಕಾಯುಕ್ತ ತನಿಖೆಗೆ ಹಾದಿ ಸುಗಮವಾಯಿತೆಂದು ಬಿಜೆಪಿ ವಲಯಗಳಿಂದ ಪ್ರತಿಭಟನೆ ಇತ್ಯಾದಿಗಳು ನಡೆಯುತ್ತಿವೆ. ಆದರೆ, ಜೂನ್‌ 30ರಂದೇ ಕೊನೆಗೊಂಡ ಸಿಆರ್‌ಪಿಸಿಯಡಿ ಎಫ್‌ಐಆರ್‌ ಹೇಗೆ ಹಾಕುವುದು, ತನಿಖೆ ಹೇಗೆ ಆರಂಭಿಸಲು ಸಾಧ್ಯ ಎಂಬ ಪ್ರಶ್ನೆ ಇದೆ.

ಇದನ್ನು ಓದಿದ್ದೀರಾ?: ಮುಡಾ ಪ್ರಕರಣ | ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ; ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

Advertisements

ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ಈ ಆದೇಶವನ್ನು ಸದರಿ ನ್ಯಾಯಾಲಯವು ಹೊರಡಿಸಿತ್ತು. ಒಂದು ವೇಳೆ ಹಳೆಯ ಸಿಆರ್‌ಪಿಸಿಯ 156(3)ರ ಬದಲಾಗಿ, ಇಂತಹ ಆದೇಶವನ್ನು ಹೊರಡಿಸುವ ಬದಲಿಗೆ ಭಾರತೀಯ ನ್ಯಾಯ ಸಂಹಿತೆಯ 175(4)(ಎ)(ಬಿ)ಯಡಿ ಇದನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಅದನ್ನು ನ್ಯಾಯಾಧೀಶರು ಏಕೆ ಕೈಗೊಂಡಿಲ್ಲ ಎಂಬ ಕುರಿತು, ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅನುಕೂಲವಲ್ಲವೇ ಎಂಬ ಜಿಜ್ಞಾಸೆಗೆ ಕಾನೂನು ಪಂಡಿತರು ಉತ್ತರಿಸಬೇಕಾಗುತ್ತದೆ.

ಈ ಸಂಬಂಧ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸುವ ಪ್ರಯತ್ನವನ್ನು ಈದಿನ.ಕಾಮ್‌ ಮಾಡಿತು. ಆದರೆ, ಅವರು ಉತ್ತರಿಸಲು ನಿರಾಕರಿಸಿದರು.

ಕಾನೂನು ತಜ್ಞರ ಅಭಿಪ್ರಾಯಗಳ ಜೊತೆಗೆ ವಿಶೇಷ ವರದಿಯನ್ನು ನಿರೀಕ್ಷಿಸಿ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X