ಚಂದ್ರಯಾನ-3 ಯಶಸ್ವಿ ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಇಸ್ರೋ

Date:

Advertisements
  • ಸೂರ್ಯನ ಅಧ್ಯಯನಕ್ಕೆ ಆದಿತ್ಯ ಎಲ್‌-1 ನೌಕೆ ಸೆ.2ಕ್ಕೆ ಉಡಾವಣೆ
  • ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

ಚಂದ್ರನ ಮೇಲೆ ವಿಕ್ರಮ್‌ ಲ್ಯಾಂಡರ್‌ ಅನ್ನು ಯಶಸ್ವಿಯಾಗಿ ‘ಸಾಫ್ಟ್‌ ಲ್ಯಾಂಡಿಂಗ್‌’ ಮಾಡುವ ಮೂಲಕ ಜಗತ್ತಿನ ಗಮನ ಸೆಳೆದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮಹತ್ವದ ತನ್ನ ಮುಂದಿನ ಯೋಜನೆಯನ್ನು ಸೋಮವಾರ ಪ್ರಕಟಿಸಿದೆ.

ಸೂರ್ಯನ ಬಗ್ಗೆ ಅಧ್ಯಯನ ನಡೆಸುವ ನಿಟ್ಟಿನಲ್ಲಿ ಆದಿತ್ಯ ಎಲ್‌-1 ನೌಕೆಯನ್ನು ಇಸ್ರೋ ಕಳಿಸಿಕೊಡಲಿದೆ ಎಂದು ಚಂದ್ರಯಾನ-3 ಯಶಸ್ವಿಯಾದ ಬಳಿಕ ತಿಳಿಸಿತ್ತು. ಈಗ ಈ ಆದಿತ್ಯ ಯೋಜನೆಯ ಉಡಾವಣೆಯ ದಿನಾಂಕ ಹಾಗೂ ಸಮಯವನ್ನು ಇಸ್ರೋ ಟ್ವಿಟರ್‌ನಲ್ಲಿ ಪ್ರಕಟಿಸಿದೆ.

ಸೋಮವಾರ ಟ್ವೀಟ್ ಮಾಡಿರುವ ಇಸ್ರೋ, ಸೆಪ್ಟೆಂಬರ್‌ 2ರಂದು ಆದಿತ್ಯ ಎಲ್‌-1 ನೌಕೆಯನ್ನು ಉಡಾವಣೆ ಮಾಡಲಿದ್ದೇವೆ ಎಂದು ತಿಳಿಸಿದೆ.

Advertisements

ಅಂದು ಬೆಳಗ್ಗೆ 11.50ಕ್ಕೆ ಆಂಧ್ರದ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಇದರ ಉಡಾವಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದೆ.

ವೀಕ್ಷಕರಿಗೂ ನೇರವಾಗಿ ವೀಕ್ಷಿಸಲು ಇಸ್ರೋ ಅವಕಾಶ ಕಲ್ಪಿಸಿದ್ದು, ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಸರು ನೋಂದಣಿ ಮಾಡಿಕೊಂಡು ಉಡಾವಣಾ ಸ್ಥಳವಾದ ಶ್ರೀಹರಿಕೋಟಾಕ್ಕೆ ಬರುವಂತೆ ಆಹ್ವಾನ ನೀಡಿದೆ.

ಸೂರ್ಯನ ಅಧ್ಯಯನಕ್ಕೆ ಸೆಪ್ಟೆಂಬರ್ ಮೊದಲ ವಾರದಲ್ಲಿ ‘ಆದಿತ್ಯ-ಎಲ್1’ ಯೋಜನೆ ಕೈಗೊಳ್ಳಲಿದ್ದು, ಇನ್ನೆರಡು ದಿನಗಳಲ್ಲಿ ದಿನಾಂಕ ಘೋಷಿಸುವುದಾಗಿ ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X