ರಾಜ್ಯ ಬಿಜೆಪಿಗರಿಗೆ ವಿವೇಚನೆಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತು: ಸಚಿವ ಎಂ ಬಿ ಪಾಟೀಲ್‌ ಕಿಡಿ

Date:

Advertisements

ಕರ್ನಾಟದ ಬಿಜೆಪಿಗರಿಗೆ ವಿವೇಚನೆಯೇ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನಾನು ಬಾಗ್ಮನೆಯಿಂದ 4 ಕೋಟಿ ರೂ. ಸಾಲ ತೆಗೆದುಕೊಂಡಿದ್ದು 2001ರಲ್ಲಿ; ನೀವು ಬೊಬ್ಬೆ ಹೊಡೆಯುತ್ತಿರುವಂತೆ 2023ರಲ್ಲಿ ಅಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಚುನಾವಣೆ ಖರ್ಚಿಗಾಗಿಯೂ ನಾನು ಸಾಲ ಮಾಡಿಲ್ಲ. ಅವೆಲ್ಲ ನಮ್ಮ ಕೌಟುಂಬಿಕ ವ್ಯವಹಾರ. ಅನೇಕ ಸಲ ಸಾಲ ಪಡೆದು, ವಾಪಸ್ ಕೂಡ ಕೊಟ್ಟಿದ್ದೇನೆ. ಬಾಕಿಯೂ ಇದೆ” ಎಂದಿದ್ದಾರೆ.

“ಬಿಜೆಪಿಯವರ ಆರೋಪಗಳು ಸತ್ಯಕ್ಕೆ ದೂರವಾದದ್ದು ಹಾಗೂ ಕುಚೇಷ್ಟೆ/ ದುರುದ್ದೇಶದಿಂದ ಕೂಡಿವೆ. ಬಾಗ್ಮನೆ ಸಂಸ್ಥೆ ಮತ್ತು ನಮ್ಮ ಕುಟುಂಬದ ಒಡನಾಟಕ್ಕೂ ಸರ್ಕಾರದ ತೀರ್ಮಾನಕ್ಕೂ ಯಾವ ಸಂಬಂಧವೂ ಇಲ್ಲ” ಎಂದು ಹೇಳಿದ್ದಾರೆ.

Advertisements

“2021ರಲ್ಲಿ ಬಿಜೆಪಿ ಸರ್ಕಾರವೇ ತನ್ನ ಆದೇಶದಲ್ಲಿ ನಿಗದಿಪಡಿಸಿದ್ದ ಹಂಚಿಕೆ ದರವನ್ನೇ ವಿಧಿಸಲಾಗಿದೆ. ಇದರಲ್ಲಿ ಯಾವುದೇ ರಿಯಾಯಿತಿ ನೀಡಿಲ್ಲ. ನಿವೇಶನ ಹಂಚಿಕೆಗೆ ಪರಿಗಣಿಸುವ ಮಾನದಂಡ ಸಂಸ್ಥೆಯ ಅರ್ಹತೆ, ಸಾಮರ್ಥ್ಯ, ಅನುಭವ ಇತ್ಯಾದಿಯೇ ಹೊರತು ವ್ಯಕ್ತಿ ನಿಷ್ಟ ಮಾನದಂಡಗಳಲ್ಲ” ಎಂದು ತಿಳಿಸಿದ್ದಾರೆ.

“ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಾಮೂಹಿಕ ಹಾಗೂ ಒಮ್ಮತದ ತೀರ್ಮಾನವೇ ಹೊರತು ವೈಯಕ್ತಿಕ ನಿರ್ಧಾರವಲ್ಲ. ಅಲ್ಲದೆ, ಬಾಗ್ಮನೆಗೆ 2005, 2006 ಮತ್ತು 2009ರಲ್ಲೆಲ್ಲ ಅಂದಂದಿನ ಸರ್ಕಾರಗಳು ಕೈಗಾರಿಕಾ ಭೂಮಿ ನೀಡಿವೆ. 2009ರಲ್ಲಿ ಇದೇ ಬಾಗ್ಮನೆ ಸಮೂಹದ ಚಂದ್ರಾ ಡೆವಲಪರ್ಸ್ ಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ 25 ಎಕರೆ ಭೂಮಿ ನೀಡಿದ್ದಾಗ ನಿಮ್ಮದೇ ಸರ್ಕಾರ ಇತ್ತಲ್ಲವೇ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X