ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ ಕೆ ಸುರೇಶ್‌ ಮೈಯಲ್ಲಿ ಹರಿಯುತ್ತಿಲ್ಲ: ಕೆ ಎಸ್‌ ಈಶ್ವರಪ್ಪಗೆ ಡಿ ಕೆ ಶಿವಕುಮಾರ್ ತಿರುಗೇಟು

Date:

Advertisements

“ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ ಕೆ ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲ್‌ಮೆಂಟ್ ಆಗಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, “ಅವರಿಗೆ ಕ್ಷಮೆ ಕೇಳಿ ಎಂದು ಯಾರೂ ಹೇಳಿಲ್ಲ. ಸದನದಲ್ಲಿ ನಮ್ಮ ತಂದೆ ಬಗ್ಗೆ ಮಾತನಾಡಿದ್ದರು. ಅದಕ್ಕೆ ಒಂದು ಸುತ್ತಿನ ಸೆಟ್ಲ್‌ಮೆಂಟ್ ಮಾಡಿದ್ದೇವೆ. ಈಶ್ವರಪ್ಪ ಈಗ ಎಲ್ಲಿದ್ದಾರೆ”ಎಂದು ಪ್ರಶ್ನಿಸಿದರು.

“ನಮ್ಮ ವಿಚಾರಕ್ಕೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲ್‌ಮೆಂಟ್ ಆಗಿದೆ. ಈಶ್ವರಪ್ಪ ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ. ಅವರ ಹೇಳಿಕೆಗೆ ನಡುಗುವ ರಕ್ತ ಡಿ ಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಪೂರ್ವಜರಾದ ಕೆಂಪೇಗೌಡರ ಇತಿಹಾಸ ಗೊತ್ತಿದೆಯೇ? ನಮಗೆ ನಮ್ಮದೇ ಆದ ಇತಿಹಾಸವಿದೆ. ನಾವು ಕಿವಿ ಮೇಲೆ ಹೂವ ಇಟ್ಟುಕೊಂಡು ರಾಜಕಾರಣ ಮಾಡಲು ಬಂದಿಲ್ಲ”ಎಂದು ಎಚ್ಚರಿಸಿದರು.

Advertisements

ಜನರ ಅಭಿಪ್ರಾಯ ಸಂಗ್ರಹಿಸಲು ಪ್ರಣಾಳಿಕೆ ಸಮಿತಿ ಸಭೆ

“ಇಂದು ಕಾಂಗ್ರೆಸ್ ಪಕ್ಷದ ಕೇಂದ್ರ ಪ್ರಣಾಳಿಕೆ ಸಮಿತಿ ಸಭೆ ನಡೆಯುತ್ತಿದೆ. ನಮ್ಮ ಮುಖ್ಯಮಂತ್ರಿಗಳು ಈ ಸಮಿತಿ ಸದಸ್ಯರಾಗಿದ್ದಾರೆ. ಈಗಾಗಲೇ ಈ ಸಮಿತಿ ಅನೇಕ ಸಭೆಗಳನ್ನು ಮಾಡಿದ್ದು ಇಲ್ಲಿನ ಜನರು ಹಾಗೂ ಸಂಘ, ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಲು ಇಂದು ಸಭೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಪಿ. ಚಿದಂಬರಂ ಅವರು ಕೂಡ ಇಂದಿನ ಸಭೆಗೆ ಆಗಮಿಸಬೇಕಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

“ಇಂದಿನ ಸಭೆಗೆ ಸುಮಾರು 150 ಜನರು ಹಾಗೂ ಸಂಘ ಸಂಸ್ಥೆಗಳಿಗೆ ಆಹ್ವಾನ ನೀಡಿದ್ದೆವು. ಬಹುತೇಕ ಎಲ್ಲರೂ ಸಭೆಗೆ ಆಗಮಿಸಿ ತಮ್ಮ ಸಲಹೆ ನೀಡುತ್ತಿದ್ದಾರೆ. ನಾವು ರಾಷ್ಟ್ರದ ಭದ್ರತೆ, ಎಲ್ಲಾ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವುದನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಮಾಡುತ್ತೇವೆ. ಈ ಹಿಂದೆ ನಾವು ಮಾಡಿದ ಗ್ಯಾರಂಟಿ ಪ್ರಣಾಳಿಕೆ ದೇಶಕ್ಕೆ ಮಾದರಿಯಾಗಿತ್ತು. ಅದನ್ನು ನಾವು ಕಾರ್ಯರೂಪಕ್ಕೆ ತಂದಿದ್ದೇವೆ. ನಾವು ಕಾರ್ಯರೂಪಕ್ಕೆ ತರಲು ಸಾಧ್ಯವಾಗುವ ಕಾರ್ಯಕ್ರಮಗಳನ್ನು ಮಾತ್ರ ಘೋಷಣೆ ಮಾಡುತ್ತೇವೆ” ಎಂದು ಹೇಳಿದರು.

“ಇಂಡಿಯಾ ಒಕ್ಕೂಟ ಕೂಡ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಿದೆ. ಎಲ್ಲರೂ ಒಟ್ಟಾಗಿ ದೇಶದಲ್ಲಿ ಬದಲಾವಣೆ, ಕ್ರಾಂತಿ ತರಲು ಹೋರಾಟ ಮಾಡುತ್ತೇವೆ. ಭಾವನೆ ಬಿಟ್ಟು ಜನರು ಬದುಕಿನತ್ತ ಸಾಗಿಸಿಕೊಂಡು ಹೋಗುವಂತೆ ಮಾಡಲು ನಾವು ಬದ್ದರಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X