ಯಾರು ಮುಖ್ಯಮಂತ್ರಿಯಾಗಬೇಕು ಎಂಬುದು ಹೈಕಮಾಂಡ್ ನಿರ್ಣಯಿಸುತ್ತದೆ: ಎಂ ಬಿ ಪಾಟೀಲ್

Date:

Advertisements
  • ‘ರವಿಕುಮಾರ್ ಗಣಿಗ ಹೇಳಿಕೆ ವೈಯಕ್ತಿಕವಾದದ್ದು’
  • ‘ಹೈಕಮಾಂಡ್ ಇದೆಲ್ಲವನ್ನು ಗಮನಿಸುತ್ತದೆ’

ಎರಡುವರೆ ವರ್ಷದ ಬಳಿಕ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂಬ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಮೇಲಿನ ಪ್ರೀತಿಯಿಂದ ಹೇಳಿರಬಹುದು. ರಾಜ್ಯಕ್ಕೆ ಯಾರು ಮುಖ್ಯಮಂತ್ರಿಯಾಗಬೇಕು, ಯಾರು ಮುಂದುವರಿಯಬೇಕು ಎಂಬುದನ್ನು ನಮ್ಮ ಹೈಕಮಾಂಡ್‌ ನಿರ್ಧರಿಸುತ್ತದೆ ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎರಡುವರೆ ವರ್ಷಗಳಾದ ಬಳಿಕ ಮುಖ್ಯಮಂತ್ರಿಯಾಗುವುದು ಗ್ಯಾರಂಟಿ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರವಿಕುಮಾರ್ ಗಣಿಗ ಅವರ ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

“ಅಸಲಿಗೆ ಬದಲಾವಣೆಯ ಅವಶ್ಯಕತೆ ಇದೆಯಾ, ಇಲ್ಲವಾ, ಸಚಿವ ಸಂಪುಟದಲ್ಲಿ ಯಾರಿರಬೇಕು ಮೊದಲಾದ ಎಲ್ಲ ಸಂಗತಿಗಳನ್ನು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಂದೀಪ್ ಸಿಂಗ್ ಸುರ್ಜೆವಾಲಾ ಅವರನ್ನೊಳಗೊಂಡ ಹೈ ಕಮಾಂಡ್ ತೀರ್ಮಾನಿಸುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಐಸ್‌ಲ್ಯಾಂಡ್ ಮಹಿಳೆಯರ ಮುಷ್ಕರದಲ್ಲಿ ಅಡಗಿರುವ ಪಾಠಗಳು

ಕೆಲ ಶಾಸಕರು ತಮ್ಮ ತಮ್ಮ ನಾಯಕರ ಮೇಲಿನ ಪ್ರೀತಿಯಿಂದ ಅವರು ಸಿಎಂ ಆಗಬೇಕು ಅನ್ನುತ್ತಿರುತ್ತಾರೆ. ಹೈಕಮಾಂಡ್ ಅದೆಲ್ಲವನ್ನು ಗಮನಿಸುತ್ತಿರುತ್ತದೆ. ಯಾವುದೇ ನಾಯಕರು ಮುಖ್ಯಮಂತ್ರಿ ವಿಚಾರವನ್ನು ಬಹಿರಂಗವಾಗಿ ಮಾತನಾಡಬಾರದು ಎಂದು ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ಸ್ವತಃ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X