- ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದ ಕೆಜಿಎಫ್ ಬಾಬು
- ಚುನಾವಣಾ ಅಧಿಕಾರಿಗಳಿಂದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ದಾಖಲು
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದ ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ನಡೆದಿದ್ದ ಐಟಿ ದಾಳಿ ಬಹುತೇಕ ಅಂತ್ಯಗೊಂಡಿದೆ. ಬಾಬು ವಿರುದ್ಧ ಚುನಾವಣಾ ಅಧಿಕಾರಿಗಳು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ.
ಬುಧವಾರ ಬೆಳಂಬೆಳಗ್ಗೆ ವಸಂತನಗರದ ರುಕ್ಸಾನ ಪ್ಯಾಲೇಸ್ನಲ್ಲಿರುವ ಬಾಬು ಅವರ ಮನೆಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ, ಸೀರೆ, ಡಿ.ಡಿ, ಮತದಾರರ ಗುರುತಿನ ಚೀಟಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದು, ಮೆಲ್ನೋಟಕ್ಕೆ ಚುನಾವಣಾ ಅಕ್ರಮ ಎಸಗಿರುವುದು ಕಂಡು ಬಂದಿದೆ ಎನ್ನಲಾಗಿದೆ. ಬಾಬು ವಿರುರ್ದಧ ಚುನಾವಣಾ ಅದಿಕಾರಿಗಳು ಹೌಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎನ್ಸಿಆರ್ ದಾಖಲಿಸಿಕೊಂಡಿರುವ ಪೊಲೀಸರು, ನ್ಯಾಯಾಲಯದಿಂದ ಒಪ್ಪಿಗೆ ಪಡೆದ ನಂತರವ ಎಫ್ಐಆರ್ ದಾಖಲಿಸಲು ಚಿಂತನೆ ನಡೆಸಿದ್ದಾರೆ.
ಐಟಿ ಅಧಿಕಾರಿಗಳು ದಾಳಿ ನಡೆಸಿದಾಗ 26 ಬ್ಯಾಗ್ಗಳಲ್ಲಿ ಇಟ್ಟಿದ್ದ ಸೀರೆಗಳು, ಮುದ್ರಣ ಪ್ರತಿಗಳು, ವ್ಯಾನ್ ಹುಸೇನ್ ಕಂಪನಿಯ 481 ಸೂಟ್ಗಳು, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ 2000ಕ್ಕೂ ಹೆಚ್ಚು ವೋಟರ್ ಐಡಿ ಹಾಗೂ ಅದಕ್ಕೆ ಪಿನ್ ಮಾಡಲಾಗಿದ್ದ ಎಚ್ಡಿಎಫ್ಸಿ ಬ್ಯಾಂಕ್ ಅಕೌಂಟ್ನ (50200060873761) ನಂಬರ್ನ ಚೆಕ್ಗಳು ಪತ್ತೆಯಾಗಿವೆ. ಪ್ರತಿ ಚೆಕ್ ಮೇಲೂ 5000 ರೂ. ಎಂದು ಬರೆಯಲಾಗಿತ್ತೆಂದು ಮಾಹಿತಿ ಲಭ್ಯವಾಗಿದೆ.
ಈ ಸುದ್ದಿ ಓದಿದ್ದೀರಾ? : ಬೆಂಗಳೂರು | ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಕಚೇರಿ ಮೇಲೆ ಐಟಿ ದಾಳಿ
ಇವುಗಳೆನ್ನೆಲ್ಲ ಗಮನಿಸಿದ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಚುನಾವಣಾ ನೀತಿ ಸಂಹಿತೆ ಉಲ್ಲಂಘಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದಿದ್ದಾರೆ. ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳಿಂದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.