ಜೆಡಿಎಸ್‌ನಿಂದ ‘ಸೆಕ್ಯುಲರ್’ ಪದ ತೆಗೆಯುವುದು ಸೂಕ್ತ: ಸಚಿವ ಝಮೀರ್ ಅಹಮದ್ ಟಾಂಗ್

Date:

Advertisements
  • ಬಿಜೆಪಿಯೊಂದಿಗೆ ಅಧಿಕೃತವಾಗಿ ಮೈತ್ರಿ ಘೋಷಿಸಿದ ಜಾತ್ಯತೀತ ಜನತಾದಳ
  • ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದಂಕೆಗೆ ಇಳಿಯಲಿದೆ ಎಂದ ಸಚಿವ

ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಲಿದ್ದು, ಇದೀಗ ಜೆಡಿಎಸ್ ಬಿಜೆಪಿ ಬಿ ಟೀಮ್ ಎಂಬುದು ಸಾಬೀತಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಜೆಡಿಎಸ್, ಬಿಜೆಪಿಯೊಂದಿಗೆ ಅಧಿಕೃತವಾಗಿ ಮೈತ್ರಿ ಘೋಷಿಸಿದ ಬಳಿಕ ಮಾತನಾಡಿದ ಅವರು ಜೆಡಿಎಸ್ ಇನ್ನು ಮುಂದೆ ಜಾತ್ಯತೀತ ಪದ ತೆಗೆಯುವುದು ಸೂಕ್ತ ಎಂದು ಹೇಳಿದರು.

2019ರಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ನಾವು ಪ್ರತ್ಯೇಕವಾಗಿ ಹೋಗಿದ್ದರೆ ಕನಿಷ್ಠ ಹತ್ತು ಸ್ಥಾನ ಗೆಲ್ಲುತ್ತಿದ್ದೆವು. ಜೆಡಿಎಸ್ ಜತೆ ಹೋಗಿದ್ದಕ್ಕೆ ಒಂದಂಕೆಗೆ ಇಳಿದೆವು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರ ಸ್ಥಿತಿಯೂ ಇದೇ ಆಗಲಿದೆ ಎಂದು ವ್ಯಂಗ್ಯವಾಡಿದರು.

Advertisements

ಮೈತ್ರಿ ಮಾತುಕತೆಗೆ ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಕರೆದಿಲ್ಲ. ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ ಎಂದು ಕರೆದಿಲ್ಲವೇ ಎಂದು ಸಚಿವರು ಪ್ರಶ್ನಿಸಿದ್ದಾರೆ.

ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವ ಇದೆ. ಹಿಂದೆ ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದಕ್ಕೆ ನನ್ನ ಒಪ್ಪಿಗೆ ಇರಲಿಲ್ಲ ಎಂದು ಹೇಳಿದ್ದ ಮಾಜಿ ಪ್ರಧಾನಿ ದೇವೇಗೌಡರು ಇದೀಗ ಏನು ಹೇಳುತ್ತಾರೆ. ಮೈತ್ರಿ ಬಗ್ಗೆ ಅವರು ಮೌನ ವಹಿಸಿರುವುದು ಯಾಕೆ ಎಂದು ಝಮೀರ್ ಅಹಮದ್ ಖಾನ್ ಕೇಳಿದರು.

ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಇದೀಗ ಕಾಂಗ್ರೆಸ್ ಪಕ್ಷ ಒಂದೇ ಜಾತ್ಯತೀತ ಎಂಬುದು ಸಾಬೀತಾಗಿದೆ. ಯಾವುದೇ ಸಿದ್ಧಾಂತ ಇಲ್ಲದ ಮೈತ್ರಿ ಎಂಬುದು ರಾಜ್ಯದ ಜನತೆಗೂ ಸ್ಪಷ್ಟತೆ ಸಿಕ್ಕಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ ಆಗಲಿದೆ ಎಂದು ಸಚಿವ ಝಮೀರ್ ಭವಿಷ್ಯ ನುಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X