ವೈಎಸ್‌ಆರ್‌ಸಿಪಿ ನಾಯಕನಿಂದ ಟಿಡಿಪಿ ಶಾಸಕಿಗೆ ಲೈಂಗಿಕ ನಿಂದನೆ: ಮಹಿಳಾ ಆಯೋಗ ಖಂಡನೆ

Date:

ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ(YSRCP) ನಾಯಕ ಮತ್ತು ಮಾಜಿ ಶಾಸಕ ನಲ್ಲಾಪುರರೆಡ್ಡಿ ಪ್ರಸನ್ನ ಕುಮಾರ್ ರೆಡ್ಡಿ ಅವರು ಟಿಡಿಪಿ ಶಾಸಕಿ ವೆಮಿರೆಡ್ಡಿ ಪ್ರಶಾಂತಿ ರೆಡ್ಡಿ ಅವರ ಲೈಂಗಿಕ ನಿಂದನೆ ಮಾಡಿದ್ದು ಸದ್ಯ ವಿವಾದ ಸೃಷ್ಟಿಯಾಗಿದೆ. ಜುಲೈ 7ರಂದು ನೆಲ್ಲೂರು ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಶಾಸಕ ನಲ್ಲಾಪುರರೆಡ್ಡಿ ಅಸಭ್ಯ ಮತ್ತು ಸ್ತ್ರೀದ್ವೇಷದ ಹೇಳಿಕೆ ನೀಡಿದ್ದಾರೆ.

- Advertisement -

“ಪ್ರಶಾಂತಿ ರೆಡ್ಡಿ ತನ್ನ ಪತಿ, ಸಂಸದ ವೆಮಿರೆಡ್ಡಿ ಪ್ರಭಾಕರ್ ರೆಡ್ಡಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಮದುವೆಯಾಗಿದ್ದಾರೆ. ಮದುವೆಯ ನಂತರ ಅವರು ನಿದ್ರಿಸುವಾಗ ವಿಷ ನೀಡಬಹುದು. ಪ್ರಶಾಂತಿ ಅವರನ್ನು ಮದುವೆಯಾಗಿರುವುದು ಪ್ರಭಾಕರ್ ರೆಡ್ಡಿ ಅವರು ಬಾವಿಗೆ ಬಿದ್ದಂತೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ವಿಮಾನ ಹಾರಿಸಲು ಯೋಗ್ಯನಲ್ಲ, ಚಪ್ಪಲಿ ಹೊಲಿ: ಇಂಡಿಗೋದಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

“ಉತ್ತರ ಭಾರತದ ಜನರಿಗೆ ಆಕೆ ಏನು ಎಂಬುದು ತಿಳಿದಿದ್ದಾರೆ” ಎಂದೂ ವ್ಯಂಗ್ಯವಾಗಿ ನುಡಿದಿದ್ದಾರೆ. ಈ ವೇಳೆ ವೇದಿಕೆಯಲ್ಲಿದ್ದ YSRCP ಬೆಂಬಲಿಗರು ನಕ್ಕು, ಚಪ್ಪಾಳೆ ತಟ್ಟಿದ್ದಾರೆ.

ಈ ಸಂಬಂಧ ವೇಮಿರೆಡ್ಡಿ ಪ್ರಶಾಂತಿ ರೆಡ್ಡಿ ಪೊಲೀಸ್ ವರಿಷ್ಠಾಧಿಕಾರಿಗೆ ಔಪಚಾರಿಕ ದೂರು ನೀಡಿದ್ದಾರೆ. ನಲ್ಲಾಪುರರೆಡ್ಡಿ ವಿರುದ್ಧ ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ಮಾನನಷ್ಟ, ಕೆಣಕುವುದು ಮತ್ತು ಸಾರ್ವಜನಿಕ ದುಷ್ಕೃತ್ಯವನ್ನು ಹರಡುವುದು ದೂರನ್ನು ನೀಡಿದ್ದಾರೆ.

ದೂರಿನಲ್ಲಿ ಲೈಂಗಿಕ ಕಿರುಕುಳ, ಮಾನನಷ್ಟ, ಅಶ್ಲೀಲ ಸನ್ನೆಗಳು ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿ ಮತ್ತು ಭಾರತೀಯ ನ್ಯಾಯ ಸಂಹಿತೆಯ ಹಲವು ಸೆಕ್ಷನ್‌ಗಳಡಿ ದೂರು ದಾಖಲಾಗಿದೆ. ಅವರು ಘಟನೆಯ ವಿಡಿಯೋವನ್ನು ಸಹ ಹೊಂದಿದ್ದಾರೆ.

ಪ್ರಸನ್ನ ಕೋವೂರಿನಿಂದ ಐದು ಬಾರಿ ಶಾಸಕರಾಗಿದ್ದಾರೆ. ಈ ಹಿಂದೆ ಟಿಡಿಪಿಯಿಂದ ಮತ್ತು ನಂತರ ವೈಎಸ್‌ಆರ್‌ಸಿಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. 2024ರಲ್ಲಿ ಪ್ರಶಾಂತಿ ರೆಡ್ಡಿ ವಿರುದ್ಧ ಚುನಾವಣೆಯಲ್ಲಿ ಸೋತರು.

ಟಿಡಿಪಿ, ಜನ ಸೇನಾ ಮತ್ತು ಆಂಧ್ರಪ್ರದೇಶ ಮಹಿಳಾ ಆಯೋಗದ ನಾಯಕರು ಪ್ರಸನ್ನ ಕುಮಾರ್ ರೆಡ್ಡಿ ಹೇಳಿಕೆಯನ್ನು ಖಂಡಿಸಿದೆ. ಈ ಹೇಳಿಕೆಗಳನ್ನು ಸಮಾಜಕ್ಕೆ ಅವಮಾನ ಮತ್ತು ಮಹಿಳೆಯರ ಘನತೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...