ಬಿಜೆಪಿ ವರಿಷ್ಠರಿಗೇ ಸೆಡ್ಡುಹೊಡೆದ ಜಗದೀಶ್ ಶೆಟ್ಟರ್; ಕಮಲ ಪಾಳಯದಲ್ಲಿ ಮತ್ತೊಂದು ಬಂಡಾಯದ ಕಿಡಿ

Date:

Advertisements
  • ದೆಹಲಿ ವರಿಷ್ಠರ ನಿರ್ಧಾರದ ವಿರುದ್ಧ ಸಿಡಿದ ಜಗದೀಶ್ ಶೆಟ್ಟರ್
  • ಬಿಜೆಪಿ ಎದುರೇ ಬಂಡಾಯ ಸ್ಪರ್ಧೆ ಸುಳಿವು ನೀಡಿದ ಮಾಜಿ ಸಿಎಂ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮದೇ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಹೊಸಬರಿಗೆ ಅವಕಾಶ ಬಿಟ್ಟುಕೊಡಿ ಎಂದಿದ್ದ ಬಿಜೆಪಿ ಹೈಕಮಾಂಡ್‌ಗೆ ತಿರುಗೇಟು ನೀಡಿರುವ ಅವರು 30 ವರ್ಷದ ಪಕ್ಷ ಸೇವೆಗೆ ಕೊಡುವ ಗೌರವ ಇದೆಯೇ ಏನು? ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ನಾನಿನ್ನೂ ರಾಜಕೀಯದಲ್ಲಿ ಇರಬೇಕೆಂದು ಬಯಸಿದ್ದೇನೆ ಅದರಂತೆ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದು ವರಿಷ್ಠರಿಗೇ ಸೆಡ್ಡು ಹೊಡೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್‌ ಶೆಟ್ಟರ್‌, “ನನಗೆ ವರಿಷ್ಠರಿಂದ ಪೋನ್ ಬಂದಿದ್ದು ಸತ್ಯ.ನೀವು ಹಿರಿಯ ನಾಯಕ ಆಗಿದ್ದೀರಿ, ಬೇರೆಯವರಿಗೆ ಅವಕಾಶ ಕೊಡಿ ಎಂದು ನನಗೆ ಹೈಕಮಾಂಡ ಹೇಳಿದ್ರು”ಎಂದು ಅವರು ತಿಳಿಸಿದರು.

Advertisements

“ಕಳೆದ 30 ವರ್ಷಗಳಿಂದ ನಾನೂ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ನೂರಾರು ಜನರಿಗೆ ಟಿಕೆಟ್ ಕೊಡುವ ಕೆಲಸ ನಾನೂ ಮಾಡಿದ್ದೇನೆ. ನನಗೆ ಟಿಕೆಟ್ ನೀಡಬಾರದು ಎನ್ನುವುದಕ್ಕೆ ಕಾರಣ ಏನಿದೆ” ಎಂದು ಅವರು ಪಕ್ಷದ ವರಿಷ್ಠರನ್ನು ಕೇಳಿದರು.

ಮುಂದುವರೆದು ಮಾತನಾಡಿದ ಅವರು, “ಬಿಜೆಪಿ ಆಂತರಿಕ ಸಮೀಕ್ಷೆಯಲ್ಲಿ ನನ್ನ ಪರ ಪಾಸಿಟಿವ್ ರಿಸಲ್ಟ್ ಇದೆ. ಯಾವುದೇ ರೀತಿಯ ಕಪ್ಪು ಚುಕ್ಕೆ ನನ್ನ ಮೇಲಿಲ್ಲ.

ಇದರ ಜೊತೆಗೆ ಇಲ್ಲಿಯವರೆಗೂ ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡಿದ್ದೇನೆ. ಇದಕ್ಕೆ ನನಗೆ ಈ ಶಿಕ್ಷೆಯನ್ನು ನೀವು ಕೊಡುತ್ತಿದ್ದೀರಾ ಎಂದು ಕೇಳಿದ ಶೆಟ್ಟರ್. ನಿಮ್ಮ ನಿರ್ಧಾರದಿಂದ ಮನಸ್ಸಿಗೆ ನೋವಾಗಿದೆ” ಎಂದರು.

ಬಳಿಕ ತಮ್ಮ ಸ್ಪರ್ಧೆ ವಿಚಾರ ಸ್ಪಷ್ಟಪಡಿಸಿದ ಶೆಟ್ಟರ್, ನಾನು ಹುಬ್ಬಳ್ಳಿ- ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದರು.

ಈ ಸುದ್ದಿ ಓದಿದ್ದೀರಾ? : ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಕೆಎಸ್‌ ಈಶ್ವರಪ್ಪ: ಪುತ್ರನಿಗಾಗಿ ಕ್ಷೇತ್ರ ತ್ಯಾಗ ಮಾಡಿದರಾ?

ಪಿತೂರಿ ಮಾಡಿದವರಿಗೆ ತಿರುಗೇಟು

ಇನ್ನು ತಮಗೆ ಟಿಕೆಟ್ ತಪ್ಪಿಸುವಂತೆ ಮಾಡಿದವರ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ ಜಗದೀಶ್‌ ಶೆಟ್ಟರ್, ರಾಜಕೀಯದಲ್ಲಿ ಅವಸರ ಮಾಡಿದ್ರೆ ಅಪಘಾತವಾಗುತ್ತದೆ ಎನ್ನುವುದರ ನೆನಪು ಅವರುಗಳಿಗೆ ಇರಬೇಕು.

ನಾನು ಈಗಾಗಲೇ ಯಡಿಯೂರಪ್ಪನವರ ಜೊತೆ ಮಾತನಾಡಿದ್ದೇನೆ. ನಾನು ಟಿಕೆಟ್‌ಗಾಗಿ ಎಲ್ಲಿಯೂ ಹೋಗುವುದಿಲ್ಲ, ಯಾರ ಜೊತೆಗೂ ಮಾತನಾಡುವುದಿಲ್ಲ.

ರಾಜಕಾರಣದಲ್ಲಿ ಯಾವಾಗ ಏನು ಆಗುತ್ತದೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಹಾಗಾಗಿ ತಾಳ್ಮೆ ಮುಖ್ಯ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X