ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಕಡೆ ಮುಖ ಮಾಡಿರುವುದು ಅಕ್ಷಮ್ಯ ಅಪರಾಧ : ಯಡಿಯೂರಪ್ಪ

Date:

  • ಶೆಟ್ಟರ್ – ಸವದಿ ಬಂಡವಾಳ ಬಯಲು ಮಾಡುವುದಾಗಿ ಬಿಎಸ್‌ವೈ ಹೇಳಿಕೆ
  • ಬಿಜೆಪಿಯ ಪಕ್ಷಾಂತರ ಬೆಳವಣಿಗೆಗೆ ಕಾರ್ಯಕರ್ತರು ವಿಚಲಿತರಾಗದಂತೆ ಕರೆ

ಜಗದೀಶ್‌ ಶೆಟ್ಟರ್‌ ಅವರಿಗೆ ನಾವು ಏನು ಅನ್ಯಾಯ ಮಾಡಿದ್ದೇವೆ? ಶೆಟ್ಟರ್ ಕಾಂಗ್ರೆಸ್‌ ಕಡೆ ಮುಖ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದರು.

ಜಗದೀಶ್‌ ಶೆಟ್ಟರ್‌ ಅವರು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರಬರುತ್ತಿದ್ದಂತೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ದಿಢೀರ್‌ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಶೆಟ್ಟರ್‌ ಪಕ್ಷ ತೊರೆಯುವುದರಿಂದ ಯಾವುದೇ ಡ್ಯಾಮೇಜ್‌ ನಮ್ಮ ಪಕ್ಷಕ್ಕೆ ಆಗುವುದಿಲ್ಲ. ನಮ್ಮ ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ” ಎಂದರು.

“ಜನಸಂಘದ ಕಾಲದಿಂದ ಶೆಟ್ಟರ್ ಬಿಜೆಪಿಯೊಂದಿಗೆ ಇದ್ದರು. ಶೆಟ್ಟರ್‌ ಅವರಿಗೆ ಪಕ್ಷ ಎಲ್ಲ ಸ್ಥಾನಮಾನ ನೀಡಿತ್ತು. ನಾನೇ ಮುಂದೆ ನಿಂತು ಅವರನ್ನು ಮುಖ್ಯಮಂತ್ರಿ ಮಾಡಿದ್ದೆ. ಶೆಟ್ಟರ್ ಅವರು ಆತುರದಿಂದ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರ ಈ ಬೆಳವಣಿಗೆ ಅವರೇ ನಂಬಿರುವ ಸಿದ್ದಾಂತಕ್ಕೆ ವಿರುದ್ಧವಾಗಿದೆ. ನಮಗೆ ಸ್ಥಾನಮಾನ ಸಿಗಲಿ ಬಿಡಲಿ, ದೇಶಕ್ಕಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜಗದೀಶ್ ಶೆಟ್ಟರ್ ಅವರ ಮನವೊಲಿಸಲು ನಮ್ಮ ನಾಯಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಪ್ರಲ್ಹಾದ್ ಜೋಶಿ ಅವರ ಹುಬ್ಬಳ್ಳಿಗೆ ತೆರಳಿ, ಕೆಲ ಭರವಸೆ ನೀಡಿದ್ದರು. ಆದರೆ, ಶೆಟ್ಟರ್ ಅವರು ನಮ್ಮ ನಾಯಕರ ಮಾತಿಗೆ ಬೆಲೆ ಕೊಡಲಿಲ್ಲ. ನಮಗೆ ದ್ರೋಹ ಬಗೆದು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ” ಎಂದು ಕಿಡಿ ಕಾರಿದರು.

“ಜಗದೀಶ್ ಶೆಟ್ಟರ್ ಅವರನ್ನು ರಾಜ್ಯಾದ್ಯಕ್ಷ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಮಾಡಿದ್ದೆವು. ಆದರೂ ಅವರು ಕಾಂಗ್ರೆಸ್‌ ಜೊತಗೆ ಕೈ ಜೋಡಿಸಲು ಹೊರಟಿರುವುದು ಅಕ್ಷಮ್ಯ ಅಪರಾಧ ಇದನ್ನು ಜನ ಕ್ಷಮಿಸಲಾರರು. ಬರುವ ದಿನಗಳಲ್ಲಿ ಜಗದೀಶ್‌ ಶೆಟ್ಟರ್‌ ಅವರ ಬಣ್ಣ ಬಯಲು ಮಾಡುವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಶೆಟ್ಟರ್‌ ರಾಜೀನಾಮೆಯಿಂದ ಬಿಜೆಪಿಗೆ ‘ಡ್ಯಾಮೇಜ್‌’ ಆಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ

“ನಾವು ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಯತ್ನ. ಹೊಸತನಕ್ಕೆ ನಾವು ದಾರಿ ಮಾಡಿಕೊಡಬೇಕು. ಬಿಜೆಪಿ ನಿಮಗೆ ಎಲ್ಲವೂ ಕೊಟ್ಟಿದೆ. ಆ ಋಣ ತೀರಿಸಬೇಕಿದೆ. ಅದನ್ನು ಶೆಟ್ಟರ್‌ ಅರ್ಥ ಮಾಡಿಕೊಳ್ಳಲಿಲ್ಲ. ನಾನು ಆ ಭಾಗಕ್ಕೆ ಹೋಗಿ ವಾಸ್ತವ ಅರ್ಥ ಮಾಡಿಸುತ್ತೇನೆ. ಪಕ್ಷ ಬಿಟ್ಟು ಹೋದವರ ಬಂಡಾವಳ ಬಯಲು ಮಾಡುತ್ತೇನೆ. ರಾಜಕೀಯ ಬೆಳವಣಿಗೆಯಿಂದ ಕಾರ್ಯಕರ್ತರು ವಿಚಲಿತರಾಗಬೇಡಿ, ಒಟ್ಟಾಗಿ ಕೆಲಸ ಮಾಡಿ” ಎಂದು ಕರೆ ನೀಡಿದರು.

ಲಕ್ಷ್ಮಣ ಸವದಿ ಅವರ ಕುರಿತು ಮಾತನಾಡಿ, “ಚುನಾವಣೆಯಲ್ಲಿ ಸೋತ ಸವದಿಗೆ ಉಪ ಮುಖ್ಯಮಂತ್ರಿ ಮಾಡಿದ್ದೆವು. ಅವರನ್ನು ಎಂಎಲ್‌ಸಿ ಮಾಡಿದ್ದೆವು. ಅವರ ನಿರ್ಧಾರ ದುರದೃಷ್ಟಕರ. ಅದನ್ನು ತಿರಸ್ಕರಿಸಿ ಕಾಂಗ್ರೆಸ್‌ಗೆ ಹೋಗಿದ್ದಾರೆ. ನಮ್ಮ ಕೆಲ ನಾಯಕರು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದಾರೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...