ಹುಲಿ ಉಗುರು ವಿವಾದ: ಬಂಧಿಸುತ್ತಾ ಹೋದರೆ ಜೈಲುಗಳು ಸಾಕಾಗಲ್ಲ ಎಂದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

Date:

Advertisements

ಹುಲಿ ಉಗುರು ವಿವಾದ ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಹುಲಿ ಉಗುರು ಡಾಲರ್, ಲಾಕೆಟ್ ಧರಿಸಿದವರನ್ನು ಅಥವಾ ಮನೆಯಲ್ಲಿ ಇಟ್ಟುಕೊಂಡವರನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಜೈಲಿಗೆ ಕಳುಹಿಸುತ್ತಾ ಹೋದರೆ ರಾಜ್ಯದಲ್ಲಿ ಜೈಲುಗಳು ಸಾಕಾಗಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

ತಮ್ಮ ಹೇಳಿಕೆಯ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಸ್ತುತ ತೀರ್ಥಹಳ್ಳಿ ಕ್ಷೇತ್ರದ ಶಾಸಕ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಮಲೆನಾಡು, ಕರಾವಳಿ ಭಾಗದ ಅನೇಕ ಮನೆಗಳಲ್ಲಿ ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ಉತ್ಪನ್ನಗಳನ್ನು ಇಟ್ಟುಕೊಳ್ಳುವುದು ಬಹಳ ವರ್ಷಗಳಿಂದ ನಡೆಯುತ್ತಿದೆ. ಸತ್ತು ಬಿದ್ದ ವನ್ಯಜೀವಿಗಳ ವಸ್ತುಗಳನ್ನು ಧೈರ್ಯದ ಪ್ರತೀಕ ಎಂದು ಹಾಕುತ್ತಿದ್ದರು. ಇತ್ತೀಚೆಗೆ ಶ್ರೀಮಂತರು ಅದಕ್ಕೆ ಆಲಂಕಾರಿಕವಾಗಿ ಚಿನ್ನದ ಪೆಂಡೆಂಟ್ ಮಾಡಿ ಹಾಕುತ್ತಿದ್ದಾರೆ. ಈ ಕಾರಣಕ್ಕಾಗಿ ಜನರನ್ನು ಏಕಾಏಕಿ ಬಂಧಿಸುವುದು ಸರಿಯಲ್ಲ. ಈ ಕುರಿತು ಸರ್ಕಾರ ಮಧ್ಯ ಪ್ರವೇಶಿಸುವುದು ಅವಶ್ಯ‌ವಿದೆ’ ಎಂದು ತಿಳಿಸಿದ್ದಾರೆ.

Advertisements

ಹಿಂದೂ-ಮುಸ್ಲಿಂ ಐಕ್ಯತಾ ಸ್ಥಳವಾದ ಹಣಗೇರಿನಲ್ಲಿರುವ ದರ್ಗಾಕ್ಕೆ ಸ್ಪೀಕರ್, ಮಂತ್ರಿಗಳು ಎಲ್ಲರೂ ಹೋಗುತ್ತಾರೆ. ಈ ವೇಳೆ ಅಲ್ಲಿನ ಇಮಾಮರು ನವಿಲು ಗರಿಯಿಂದ ತಲೆಮೇಲೆ, ಭುಜದ ಮೇಲೆ ಹೊಡೀತಾರೆ. ಅದು ಅಲ್ಲಿನ ಪದ್ಧತಿ. ಹಾಗಾಗಿ, ಅಲ್ಲಿ ನವಿಲುಗರಿ ಇರುವುದು ವನ್ಯಜೀವಿ ಕಾಯ್ದೆಯ ಉಲ್ಲಂಘನೆಯಂತಾದರೆ ಸಾಧ್ಯವಾಗುವುದಾದರೆ ಅವರನ್ನೂ ಬಂಧಿಸಬೇಕು. ಟಿಪ್ಪು ಸುಲ್ತಾನ್ ಹುಲಿಯೊಂದನ್ನು ಕೊಲ್ಲುತ್ತಿರುವ ಫೋಟೋಗಳನ್ನು ಅನೇಕ ಜನ ತಮ್ಮ ಮನೆಗಳಲ್ಲಿ ತೂಗು ಹಾಕಿದ್ದಾರೆ. ಅದು ವನ್ಯಜೀವಿ ಸಂರಕ್ಷಣೆ ಕಾಯ್ದೆ ಉಲ್ಲಂಘನೆಯಲ್ಲವೇ? ಅದನ್ನು ನೋಡಿ ಬೇರೆ ಜನ ಹುಲಿಗಳನ್ನು ಬೇಟೆಯಾಡಲು ಮುಂದಾದರೆ ಹೇಗೆ? ಎಂದು ಪ್ರಶ್ನಿಸಿದರು.

ಕೆಲವರು ತಮಗೆ ತಿಳಿಯದೆ ಅಥವಾ ಪರಂಪರಾಗತವಾಗಿ ಹುಲಿ ಉಗುರು ಮನೆಗಳಲ್ಲಿ ಇಟ್ಟುಕೊಂಡಿರುತ್ತಾರೆ. ಅವರನ್ನೆಲ್ಲ ಬಂಧಿಸಿ ಜೈಲಿಗೆ ಹಾಕುತ್ತಾ ಹೋದರೆ, ರಾಜ್ಯದಲ್ಲಿ ಜೈಲುಗಳು ಸಾಕಾಗಲ್ಲ. ಅರಣ್ಯ ಇಲಾಖೆ ಹುಲಿಯುಗುರು ಇಟ್ಟುಕೊಂಡಿರುವವರನ್ನು ಬಂಧಿಸುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಸಚಿವ ಮತ್ತು ಅಧಿಕಾರಿಗಳು ವಿಷಯದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X