ತೇಜಸ್ವಿ ಸೂರ್ಯ ನಾಮಪತ್ರ: ಮೆರವಣಿಗೆಯಲ್ಲಿ ಕಡ್ಡಾಯ ಭಾಗವಹಿಸಲು ಜೈನ್ ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಸೂಚನೆ!

Date:

Advertisements

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ನಾಳೆ(ಏಪ್ರಿಲ್ 4) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆಯಲ್ಲಿ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ‘ಫರ್ಮಾನು’ ಹೊರಡಿಸಿರುವುದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಬೆಂಗಳೂರಿನ ವಿವಿ ಪುರಂನಲ್ಲಿರುವ ಜೈನ್ ಕಾಲೇಜಿನ ವಾಟ್ಸಪ್ ಗ್ರೂಪಿನಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಇದು ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಈ ಸೂಚನೆಯಲ್ಲಿ, “ನಾಳೆ(ಏಪ್ರಿಲ್ 4) ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿ ಪರಿಷತ್ತಿನ ಎಲ್ಲಾ ಸದಸ್ಯರು ಸೇರಿ ಎಲ್ಲ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಜಯನಗರದ ಮೈಯ್ಯಾಸ್ ಹೋಟೆಲ್ ಬಳಿ ಸೇರಬೇಕು. ಅಲ್ಲಿ ನಿಮಗೆ ಟಿ-ಶರ್ಟ್ ನೀಡಲಾಗುವುದು. ಆದ್ದರಿಂದ ತಡ ಮಾಡಬಾರದು. ಕಡ್ಡಾಯವಾಗಿ ಇದರಲ್ಲಿ ಭಾಗವಹಿಸಬೇಕು. ಇದರಿಂದ ಯಾವುದೇ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಇದಕ್ಕಾಗಿ ನೀವು ಹಾಜರಾತಿ ಪಡೆಯುತ್ತೀರಿ” ಎಂದು ಸೂಚನೆ ನೀಡಲಾಗಿದೆ ಎಂದು ಈ ದಿನ.ಕಾಮ್‌ಗೆ ತಿಳಿದುಬಂದಿದೆ.

Advertisements
surya 1
ಕಡ್ಡಾಯ ಭಾಗವಹಿಸುವಂತೆ ಕಳುಹಿಸಲಾಗಿರುವ ಸಂದೇಶ

ಇಂದು ಕಾಲೇಜಿನ ಪ್ರತಿಯೊಂದು ತರಗತಿಯ ವಾಟ್ಸಪ್ ಗ್ರೂಪ್‌ನಲ್ಲೂ ಕೂಡ ಈ ಸಂದೇಶ ರವಾನಿಸಲಾಗಿದೆ. ಅಲ್ಲದೇ, ಕಾಲೇಜಿನ ಆಡಳಿತ ಮಂಡಳಿಯ ಸೂಚನೆಯ ಹಿನ್ನೆಲೆಯಲ್ಲಿ ಪ್ರತಿಯೊಂದು ವಿಭಾಗದ ತರಗತಿಗಳಿಗೆ ತೆರಳಿಯೂ ಕೂಡ ಸೂಚನೆ ನೀಡಿರುವುದಾಗಿ ಕೆಲವು ವಿದ್ಯಾರ್ಥಿಗಳು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಹಲವು ವಿದ್ಯಾರ್ಥಿಗಳು ಈ ಬಗ್ಗೆ ಸೋಷಿಯಲ್ ಮೀಡಿಯಾದ ಮೂಲಕ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದು, ಕಡ್ಡಾಯ ಯಾಕೆ ಮಾಡಿದ್ದೀರಾ ಎಂದು ಕಾಲೇಜಿನ ಪ್ರಾಂಶುಪಾಲರಲ್ಲಿ ಪ್ರಶ್ನಿಸಿದಾಗ, ‘ಉತ್ತರ ನೀಡಿಲ್ಲ’ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಬೆಂಗಳೂರಿನ ವಿವಿ ಪುರಂನಲ್ಲಿರುವ ಜೈನ್ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಅವರನ್ನು ಸಂಪರ್ಕಿಸಿತು. ಈ ವೇಳೆ ಪ್ರತಿಕ್ರಿಯಿಸಿದ ಅವರು, “ತೇಜಸ್ವಿ ಸೂರ್ಯ ಮೆರವಣಿಗೆಯಲ್ಲಿ ಭಾಗವಹಿಸಲು ನಾವು ಯಾವುದೇ ಸೂಚನೆ ಕೊಟ್ಟಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

WhatsApp Image 2024 04 03 at 11.00.52 PM

 

ಒಂದು ವಾರದ ಹಿಂದೆ ಕಾಲೇಜಿಗೆ ತೆರಳಿದ್ದ ಸಂಸದ ತೇಜಸ್ವಿ ಸೂರ್ಯ, 2 ವರ್ಷದ ಹಿಂದೆ ನಾನು ನಿಮ್ಮ ಕಾಲೇಜಿನ ಫೆಸ್ಟ್‌ನಲ್ಲಿ ಬಂದು ಭಾಗವಹಿಸಿದ್ದೆ. ಹಾಗಾಗಿ, ನಾನು ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳನ್ನು ಭಾಗವಹಿಸಲು ಕಳುಹಿಸಿಕೊಡುವಂತೆ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಬೇಡಿಕೆ ಇರಿಸಿದ್ದರು. ಹೀಗಾಗಿ, ಕಾಲೇಜು ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯು ಏಪ್ರಿಲ್ 3ರಂದು ಸೂಚನೆ ನೀಡಿರುವ ಆರೋಪ ಕೂಡ ಕೇಳಿಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X