ಜೈನಮುನಿ ಹತ್ಯೆ ಪ್ರಕರಣ | ನಾವ್ಯಾರೂ ಈ ಸಮಾಜದಲ್ಲಿ ಬದುಕಲು ಅರ್ಹರಿಲ್ಲ: ಬೊಮ್ಮಾಯಿ

Date:

Advertisements
  • ರಾಜ್ಯ ಸರ್ಕಾರ ಜೈನಮುನಿ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲಿ
  • ಜೈನಮುನಿ ಹತ್ಯೆ ಪೂರ್ವ ನಿಯೋಜಿತ ಕೊಲೆ: ಬೊಮ್ಮಾಯಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂಬುದನ್ನು ತೋರಿಸಲು ಸರ್ಕಾರ ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲದಿದ್ದರೆ ಸಮಾಜಘಾತಕ ಶಕ್ತಿಗಳು ತಾವು ಏನು ಮಾಡಿದರೂ ರಕ್ಷಣೆಗೆ ಇದ್ದಾರೆ ಎಂದು ಭಯವಿಲ್ಲದೆ ಓಡಾಡುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪವಾದ ಸಂದರ್ಭದಲ್ಲಿ ಮಾತನಾಡಿದ ಅವರು, “ಸಾಮಾನ್ಯವಾಗಿ ಕೊಲೆಗಡುಕ ಕೊಲೆ ಮಾಡಿ ಓಡಿ ಹೋಗುತ್ತಾರೆ. ಈ ಕೊಲೆ ಮಾಡಿದ ವ್ಯಕ್ತಿ ಅವರನ್ನು ಪೈಶಾಚಿಕವಾಗಿ ಹತ್ಯೆ ಮಾಡಿದ್ದಾರೆ.
ಜೈನ ಮುನಿಗಳು ಸಾಮಾನ್ಯವಾಗಿ ಯಾರ ಮನಸಿಗೂ ನೋವಾಗದಂತೆ ಮಾತನಾಡುತ್ತಾರೆ‌. ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡುವುದಿಲ್ಲ. ಇಂತಹ ಮುನಿಗಳ ಹತ್ಯೆಯಾಗಿದ್ದು ನೋಡಿದರೆ ನಾವ್ಯಾರೂ ಈ ಸಮಾಜದಲ್ಲಿ ಬದುಕಲು ಅರ್ಹರಿಲ್ಲ ಅನಿಸುತ್ತದೆ” ಎಂದು.

“ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪೂರ್ವ ನಿಯೋಜಿತ ಕೊಲೆಯಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇದು ಕೋಲ್ಡ್ ಬ್ಲಡೆಡ್ ಮರ್ಡರ್ ಆಗಿದೆ. ಅವರು ಕರೆಂಟ್ ಶಾಕ್ ಕೊಟ್ಟು ಹತ್ಯೆ ಮಾಡಲು ಎಷ್ಟು ಸಮಯ ಆಲೋಚನೆ ಮಾಡಿರಬಹುದು. ಇದು ಮುನಿಗಳಿಗೆ ಹತ್ತಿರ ಇದ್ದವರೇ ಮಾಡಿದ್ದಾರೆ. ಹಣಕಾಸಿನ ವ್ಯವಹಾರಕ್ಕೂ ಮುನಿಗೂ ಯಾವುದೇ ಸಂಬಂಧ ಇಲ್ಲ. ಮುನಿಗಳ ಹತ್ಯೆ ಯಾಕೆ ಆಯಿತು ಅಂತ ಪೊಲಿಸರು ಹೇಳುತ್ತಿಲ್ಲ. ಪ್ರಕರಣ ಬೇಗ ಭೇದಿಸಿದ್ದು ಸರಿ ಆದರೆ, ಪೊಲಿಸರು ಅಷ್ಟು ಬೇಗ ಪ್ರಕರಣ ಮುಕ್ತಾಯ ಮಾಡುವ ರೀತಿ ಮಾತನಾಡಿದ್ದಾರೆ” ಎಂದು ದೂರಿದರು.

Advertisements

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ಅಲ್ಲಿ ಎಲ್ಲೆಲ್ಲೂ ಸೌಜನ್ಯಳೇ ಕಾಣಸಿಗುತ್ತಾಳೆ…

“ಜೈನಮುನಿ ಅವರು ಕೊಲೆ ಮಾಡಿ ಅಲ್ಲಿಂದ ಸಾಗಿಸಲು ಕೇವಲ ಇಬ್ಬರು ಮಾತ್ರ ಇರಲು ಸಾಧ್ಯವಿಲ್ಲ. ಅಲ್ಲಿಂದ ಸಾಗಿಸಲು ಯಾವ ವಾಹನ ಬಳಸಿದರು. ಅವರು ಹೆಣ ತುಂಡು ಹೇಗೆ ಮಾಡಿದರು. ಜೈನ ಧರ್ಮ ಯಾವುದೇ ಪ್ರಚೋದನೆ ಮಾಡುವುದಿಲ್ಲ. ಅಂತಹ ಮುನಿಗಳ ಹತ್ಯೆಯಾಗಿದೆ ಅಂದರೆ ಇದರ ಹಿಂದೆ ದೊಡ್ಡ ಶಕ್ತಿ ಇದೆ” ಎಂದು ಅನುಮಾನ ವ್ಯಕ್ತಪಡಿಸಿದರು.

ಕಲಬುರ್ಗಿಯಲ್ಲಿ ಮರಳು ಮಾಫಿಯಾದವರು ಹೆಡ್ ಕಾನ್ ಸ್ಟೇಬಲ್ ಹತ್ಯೆ ಮಾಡುತ್ತಾರೆ. ನಂಜನಗೂಡಿನಲ್ಲಿ ನಡೆದ ಹತ್ಯೆ, ಬೀದರ್ ನಲ್ಲಿ ಹಣ ವಸೂಲಿಗೆ ಏಜೆಂಟ್ ಗೆ ಒತ್ತಡ ಇದೆ ಅಂತ ಆರೋಪ ಮಾಡಿದ್ದಾನೆ. ಈ ಬಗ್ಗೆ ಎಫ್ ಐ ಆರ್ ಕೂಡ ಆಗಿದೆ. ಕಲಬುರ್ಗಿಯಲ್ಲಿ ಒಬ್ಬ ಪೊಲಿಸ್ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಷ್ಟು ಬೇಗ ಹದಗೆಟ್ಟಿದೆ. ಜೈನ ಮುನಿಗಳ ಸಾವಿಗೆ ನ್ಯಾಯ ಕೊಡಬೇಕಾದರೆ, ಈ ವಿಚಾರದಲ್ಲಿ ಆಕಡೆ ಈ‌ಕಡೆ ಅನ್ನದೆ ಸರ್ಕಾರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದೆ ಅಂತ ತೋರಿಸಬೇಕಾದರೆ ಸಿಬಿಐ ತನಿಖೆಗೆ ಒಪ್ಪಿಸಬೇಕು.‌ ಇಲ್ಲದಿದ್ದರೆ ರಾಜ್ಯದ ಜನತೆ ಪ್ರತಿಭಟನೆ ನಡೆಸುತ್ತಾರೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X