ಕಿಚ್ಚ ಸುದೀಪ್ ನಟನೆಯ ಜಾಹೀರಾತುಗಳಿಗೆ ನಿರ್ಬಂಧ ಹೇರಲು ಆಯೋಗಕ್ಕೆ ಜೆಡಿಎಸ್‌ ಮನವಿ

Date:

  • ವಕೀಲರ ದೂರಿನ ಬೆನ್ನಲ್ಲೇ ಸುದೀಪ್‌ಗೆ ಮತ್ತೊಂದು ಸಂಕಷ್ಟ
  • ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಕಾನೂನು ಘಟಕದ ಪತ್ರ

ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್‌ನ ಕಾನೂನು ವಿಭಾಗ ಪತ್ರ ಬರೆದಿದೆ.

ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕ. ಸುದೀಪ್ ಅವರ ಚಿತ್ರಗಳೂ ಜನರ ಮೇಲೆ ಪ್ರಭಾವ ಬೀರಬಹುದು, ಹೀಗಾಗಿ ಚುನಾವಣೆ ಮುಗಿಯುವವರೆಗೆ ಚಿತ್ರ ಪ್ರದರ್ಶಿಸಬಾರದು. ಸುದೀಪ್ ಅವರ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡಬೇಕು ಎಂದು ಜೆಡಿಎಸ್‌ ಮನವಿ ಮಾಡಿದೆ.

ಸುದೀಪ್‌ ಅವರು ಬಿಜೆಪಿ ಪರ ಚುನಾವಣಾ ಅಖಾಡಕ್ಕೆ ದುಮುಕಿದ್ದೇ ತಡ ಒಂದಿಲ್ಲೊಂದು ಸಂಕಷ್ಟಗಳು ಅವರಿಗೆ ಎದುರಾಗುತ್ತಿವೆ. ಅವರ ಸಿನಿಮಾ ಮತ್ತು ರಿಯಾಲಿಟಿ ಶೋಗಳನ್ನು ಚುನಾವಣೆ ಮುಗಿಯುವವರೆಗೆ ನಿಷೇಧಿಸುವಂತೆ ಶಿವಮೊಗ್ಗ ವಕೀಲರು ಮನವಿ ಮಾಡಿದ್ದರು. ಬೆನ್ನಲ್ಲೇ ಜೆಡಿಎಸ್‌ ಮತ್ತೊಂದು ಮನವಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ : ಪ್ರಿಯಾಂಕ್‌ ಖರ್ಗೆ

ಈ ಕುರಿತು ಚುನಾವಣಾ ಜೆಡಿಎಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಅವರು ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

“ಖ್ಯಾತ ಚಲನಚಿತ್ರ ನಟರಾದ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಇವರು ನಟಿಸಿರುವ ಜಾಹೀರಾತು, ಪೋಸ್ಟರ್ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಚುನಾವಣೆ ಮುಗಿಯುವವರೆಗೆ ಟಿವಿ ಮತ್ತು ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ತಡೆಹಿಡಿಯಿರಿ” ಎಂದು ಮನವಿ ಮಾಡಿದ್ದಾರೆ.

“ಸುದೀಪ್ ಭಾವಚಿತ್ರವಿರುವ ಪೋಸ್ಟರ್ ಜಾಹೀರಾತುಗಳನ್ನು ಕೂಡಲೇ ತೆರವುಗೊಳಿಸಿ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇವೆ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ...

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ...