ಜೆಡಿಎಸ್ ಕೋಮುವಾದವನ್ನು ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತವೆಯೇ: ಕಾಂಗ್ರೆಸ್‌ ಪ್ರಶ್ನೆ

Date:

Advertisements

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ ಮತ್ತು ಜೆಡಿಎಸ್‌ ಈಗ ಮಿತ್ರಪಕ್ಷಗಳಾಗಿವೆ. 2024ರ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡಿರುವ ಜೆಡಿಎಸ್‌ ಬಿಜೆಪಿಯನ್ನು ಹೆಜ್ಜೆ ಹೆಜ್ಜೆಗೂ ಬೆಂಬಲಿಸುತ್ತಿದೆ.

ಜುಲೈ 17 ಮತ್ತು 18ರಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಮಿತ್ರಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್‌ ಐಎಎಸ್‌ ಅಧಿಕಾರಿಗಳನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಸದಸ್ಯರನ್ನು ವಿಧಾನಸಭೆ ಸ್ಪೀಕರ್‌ ಯು ಟಿ ಖಾದರ್‌ ಅಮಾನತು ಮಾಡಿದ್ದರು. ಈ ವೇಳೆ ಬಿಜೆಪಿಯನ್ನು ಬೆಂಬಲಿಸಿ ಜೆಡಿಎಸ್‌ ಕೂಡ ಪ್ರತಿಭಟನೆ ನಡೆಸಿತ್ತು. ಅಲ್ಲದೆ ಬಿಜೆಪಿಯಂತೆ ಜೆಡಿಎಸ್‌ ಕೂಡ ಅಧಿವೇಶನದಿಂದ ಹೊರಗುಳಿದಿದೆ.

ಅಲ್ಲದೆ, ಗುರುವಾರ ರಾಜಭವನಕ್ಕೆ ಬಿಜೆಪಿ ಜೊತೆಗೆ ಜೆಡಿಎಸ್‌ ನಾಯಕರೂ ಭೇಟಿ ನೀಡಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಈ ವೇಳೆ ಬಿಜೆಪಿ ಅಧಿಕೃತ ಲೆಟರ್‌ಹೆಡ್‌ಗೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಸಹಿ ಮಾಡಿ ಕುತೂಹಲ ಮೂಡಿಸಿದ್ದರು. ಇಂದೂ ಕೂಡ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಕಾಂಗ್ರೆಸ್‌ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.

Advertisements

ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದ ಕಾಂಗ್ರೆಸ್‌ ಟ್ವೀಟ್‌ ಮಾಡಿ ಎರಡೂ ಪಕ್ಷಗಳಿಗೆ ಟಾಂಗ್‌ ನೀಡಿದೆ. “ರಾಜ್ಯದಲ್ಲಿ ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ” ಎಂದು ಪ್ರಶ್ನಿಸಿದೆ.

“ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್ ನಾಗವಲ್ಲಿಯ ತರ” ಎಂದು ಸಿನಿಮಾ ಪಾತ್ರ ಒಂದಕ್ಕೆ ಜೆಡಿಎಸ್‌ ನಡೆಯನ್ನು ಹೋಲಿಸಿ ಕಾಂಗ್ರೆಸ್‌ ಟೀಕಿಸಿದೆ.

ಈ ಸುದ್ದಿ ಓದಿದ್ದೀರಾ? ಕಲಾಪ ಬಹಿಷ್ಕರಿಸಿ ಸರ್ಕಾರದ ವಿರುದ್ಧ ಮುಂದುವರಿದ ಬಿಜೆಪಿ ಪ್ರತಿಭಟನೆ

ಮನುವಾದವೇ ಬಿಜೆಪಿ ಬೈಲಾ ಆಗಿದೆಯೇ?

“ಬಿಜೆಪಿಗೆ ದಲಿತರ ರಾಜಕೀಯ ಮತ್ತು ಸಾಮಾಜಿಕ ಏಳಿಗೆಯನ್ನು ಸಹಿಸಲಾಗುತ್ತಿಲ್ಲವೇ? ಬಿಜೆಪಿಯು ದಲಿತರ ತಲೆ ಮೇಲೆ ಚಡ್ಡಿ ಹೊರಿಸಿತ್ತು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ದುರುಪಯೋಗ ಮಾಡಿತ್ತು. ದಲಿತರಿಗೆ ಮಾತ್ರ ಚಪ್ಪಲಿ ಕಾಯುವ ಟೆಂಡರ್ ಮೀಸಲಿಟ್ಟಿತ್ತು. ಸೆಂಟ್ರಲ್ ವಿಸ್ತಾ, ರಾಮಮಂದಿರದ ಕಾರ್ಯಕ್ರಮಕ್ಕೆ ದಲಿತ ಸಮುದಾಯದ ರಾಷ್ಟ್ರಪತಿಗೆ ಆಹ್ವಾನಿಸಲಿಲ್ಲ. ಈಗ ದಲಿತ ಸಮುದಾಯದ ಉಪಸಭಾಪತಿಯ ಮುಖಕ್ಕೆ ಪೇಪರ್ ಎಸೆದು ಅವಮಾನಿಸಿದೆ. ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ? ಮನುವಾದವೇ ಬಿಜೆಪಿಯ ಬೈಲಾ ಆಗಿದೆಯೇ?” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X