ಲೋಕಸಭಾ ಚುನಾವಣೆ | ಮಂಡ್ಯ ಸೇರಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ: ಹೆಚ್ ಡಿ ಕುಮಾರಸ್ವಾಮಿ

Date:

ಲೋಕಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮಂಡ್ಯ ಸೇರಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -

ಹಾಸನದಲ್ಲಿ ಇಂದು ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, “ಮಂಡ್ಯ, ಕೋಲಾರ, ಹಾಸನ ಲೋಕಸಭಾ ಕ್ಷೇತ್ರವನ್ನು ನಮಗೆ ಕೊಡಲು ತೀರ್ಮಾನ ಮಾಡಿದ್ದಾರೆ. ಕೇಳಿದ್ದಿದ್ದರೆ ಇನ್ನೂ ಎರಡು ಕ್ಷೇತ್ರ ಕೊಡುವವರಿದ್ದರು. ಆದರೆ ಚುನಾವಣಾ ರಾಜಕೀಯ ಮಾಡುವ ಶಕ್ತಿ ನಮಗಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಡಾ.ಸಿ.ಎನ್. ಮಂಜುನಾಥ್ ಅವರನ್ನ ಚುನಾವಣೆಗೆ ತರಬೇಕು ಎಂದು ನಾವು ತೀರ್ಮಾನ ಮಾಡಿರಲಿಲ್ಲ. ಮಾಧ್ಯಮಗಳೇ ಅವರಿಗೆ ಪ್ರಚಾರ ನೀಡಿದ್ದರು. ನಮಗೆ ಎಂದಿಗೂ ಇಷ್ಟು ಪ್ರಚಾರವನ್ನ ಮಾಧ್ಯಮಗಳು ಕೊಡಲಿಲ್ಲ. ಬಿಜೆಪಿ‌ ಹೈಕಮಾಂಡ್ ಮಂಜುನಾಥ್ ಸ್ಪರ್ಧಿಸಬೇಕು ಎಂಬ ತೀರ್ಮಾನ ತೆಗೆದುಕೊಂಡಿದೆ” ಎಂದು ಕುಮಾರಸ್ವಾಮಿ ಹೇಳಿದರು.

“ದೇವೇಗೌಡರು ಕೂಡ ನನ್ನ ಅಳಿಯ ಎಂದಿಗೂ ರಾಜಕೀಯಕ್ಕೆ ಬರುವುದಿಲ್ಲ‌ ಎಂದಿದ್ದರು. ಆದರೆ, ಅನಿವಾರ್ಯವಾಗಿ ಇಂದು ಸ್ಪರ್ಧಿಸಬೇಕಾಗಿದೆ” ಎಂದು ಮಂಜುನಾಥ್ ರಾಜಕೀಯಕ್ಕೆ ಬರುವುದನ್ನು ಖಚಿತಪಡಿಸಿದರು.

ಇದನ್ನು ಓದಿದ್ದೀರಾ? ವೋಟ್‌ ಬ್ಯಾಂಕ್‌ಗಾಗಿ ಕಾಂಗ್ರೆಸ್‌ನಿಂದ ಸಿಎಎಗೆ ವಿರೋಧ: ಗೃಹ ಸಚಿವ ಅಮಿತ್ ಶಾ

“ನೀವು ನಮ್ಮನ್ನ ಸೋಲಿಸಿಲ್ಲ, ನಾವೇ ಮೈ ಮರೆತಿದ್ದೇವೆ. ಪಕ್ಷ ಕಟ್ಟಬೇಕು ಎಂದು ನಿರಂತರ 90 ದಿನ ಶ್ರಮ ಹಾಕಿದೆ. ಎಲ್ಲ ಕಡೆ ಜನ ಸಾಗರ ಸೇರಿತು. ಆದರೆ ಯಾರ ಕೆಟ್ಟ ದೃಷ್ಟಿ ಬಿತ್ತೋ ಎಂದು ಗೊತ್ತಿಲ್ಲ. 19ಕ್ಕೆ ಇಳಿದಿದ್ದೇವೆ” ಎಂದು ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬೇಸರ ಹೊರ ಹಾಕಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ ಅಮ್ಮ’

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ...

ಹವಾಮಾನ | ರಾಜ್ಯದ ಹಲವೆಡೆ ಒಣಹವೆ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಇಂದು ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...