4 ವರ್ಷಗಳ ನಂತರ ಜಾರ್ಖಂಡ್ ವಿಧಾನಸಭೆಗೆ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆ

Date:

Advertisements

ಕರ್ನಾಟಕದಲ್ಲಿ ಸರ್ಕಾರ ರಚನೆಯಾಗಿ 6 ತಿಂಗಳು ಕಳೆದರೂ ಬಿಜೆಪಿಯಿಂದ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿಲ್ಲ. ಇದೇ ರೀತಿಯ ಪರಿಸ್ಥಿತಿ ಜಾರ್ಖಂಡ್‌ ರಾಜ್ಯದಲ್ಲಿ ಉದ್ಭವಿಸಿದ್ದು, ನಾಲ್ಕು ವರ್ಷಗಳ ನಂತರ ಪ್ರತಿಪಕ್ಷ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿಯ ಮಾಜಿ ಸಚಿವ ಅಮರ್ ಬೌರಿ ಅವರನ್ನು ತನ್ನ ಹೊಸ ಶಾಸಕಾಂಗ ಪಕ್ಷದ ನಾಯಕ ಎಂದು ಹೆಸರಿಸಿರುವುದರಿಂದ ಜಾರ್ಖಂಡ್‌ ವಿಧಾನಸಭೆಯ ಮುಂದಿನ ಅಧಿವೇಶನವು ನಾಲ್ಕು ವರ್ಷಗಳ ನಂತರ ಪ್ರತಿಪಕ್ಷದ ನಾಯಕನೊಂದಿಗೆ ನಡೆಯಲಿದೆ.

ಚಂದಂಕಿಯಾರಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ ಬೌರಿ ಅವರು ಈ ಹಿಂದೆ ವಿಪಕ್ಷ ನಾಯಕರಾಗಿದ್ದ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಅವರ ಸ್ಥಾನವನ್ನು ತುಂಬಲಿದ್ದಾರೆ.

Advertisements

2020ರ ಫೆಬ್ರವರಿ 24ರಂದು ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಪಕ್ಷಾಂತರ ವಿರೋಧಿ ಚಟುವಟಿಕೆಯಡಿ ಸ್ಪೀಕರ್ ರವೀಂದ್ರನಾಥ್ ಮಹ್ತೋ ಅವರು ಬಾಬುಲಾಲ್ ಮರಾಂಡಿ ವಿರುದ್ಧ ಕ್ರಮ ಕೈಗೊಂಡಿರುವ ಕಾರಣ ಕಳೆದ ನಾಲ್ಕು ವರ್ಷಗಳಿಂದ ವಿಪಕ್ಷ ನಾಯಕನ ಸ್ಥಾನಮಾನವನ್ನು ನೀಡಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಪ್ರಶ್ನೆಗೆ ಲಂಚ: ಸಿಬಿಐಗೆ ಸ್ವಾಗತ ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಜಾರ್ಖಂಡ್ 5ನೇ ವಿಧಾನಸಭೆ ಡಿಸೆಂಬರ್ 2019 ರಿಂದ ಹನ್ನೊಂದು ಅಧಿವೇಶನಗಳನ್ನು ವಿಪಕ್ಷ ನಾಯಕನಿಲ್ಲದೆ ಕಾರ್ಯನಿರ್ವಹಿಸಿದೆ. ಆದರೆ, ಬಿಜೆಪಿಯ ಹೊಸ ನಿರ್ಧಾರದಿಂದ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕನೊಂದಿಗೆ ಅಧಿವೇಶನ ನಡೆಯಲಿದೆ.

ಅಮರ್ ಬೌರಿ ಅವರನ್ನು ಶಾಸಕಾಂಗ ಪಕ್ಷದ ನಾಯಕ ಎಂದು ಹೆಸರಿಸುವುದರ ಜೊತೆಗೆ, ಪಕ್ಷವು ಜೆಪಿ ಪಟೇಲ್ ಅವರನ್ನು ಪಕ್ಷದ ವಿಪ್ ಎಂದು ಹೆಸರಿಸಿದೆ.

ಬಿಜೆಪಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಬೌರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವುದರೊಂದಿಗೆ, ಆದಿವಾಸಿ-ದಲಿತರು-ಒಬಿಸಿಗಳ ಮತ ಪಡೆಯಲು ಪಕ್ಷವು ತನ್ನ ನೆಲೆಯನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸಿದೆ ಎಂದು ಬಿಜೆಪಿಯ ಆಪ್ತಮೂಲಗಳು ತಿಳಿಸಿವೆ.

ಜಾರ್ಖಂಡ್‌ನಲ್ಲಿ ಜೆಎಂಎಂ ಪಕ್ಷ ಆಡಳಿತ ನಡೆಸುತ್ತಿದ್ದು, ಹೇಮಂತ್ ಸೋರೇನ್‌ ಮುಖ್ಯಮಂತ್ರಿಯಾಗಿದ್ದಾರೆ. ಜೆಎಂಎಂ ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X