4 ವರ್ಷಗಳ ನಂತರ ಬಿಡುಗಡೆಗೊಂಡ ಹುರಿಯತ್ ಕಾನ್ಫರೆನ್ಸ್ ಮುಖಂಡ ಮೀರ್ವೈಝ್ ಉಮರ್ ಫಾರೂಕ್

Date:

Advertisements
  • ಜಮ್ಮು- ಕಾಶ್ಮೀರದ 370ನೇ ವಿಧಿ ರದ್ದುಪಡಿಸಿದ್ದ ವೇಳೆ ವಿರೋಧ ವ್ಯಕ್ತಪಡಿಸಿದ್ದ ಹುರಿಯತ್‌ ಅಧ್ಯಕ್ಷ
  • ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಲು ಬಂದ ಮೀರ್ವೈಝ್

ಜಮ್ಮು-ಕಾಶ್ಮೀರದ ಹುರಿಯತ್‌ ಕಾನ್ಸರೆನ್ಸ್‌ನ ಅಧ್ಯಕ್ಷ ಮೀರ್ವೈಝ್ ಉಮರ್ ಫಾರೂಕ್ ಅವರನ್ನು ನಾಲ್ಕು ವರ್ಷಗಳ ನಂತರ ಗೃಹ ಬಂಧನದಿಂದ ಶುಕ್ರವಾರ ಮುಕ್ತಗೊಳಿಸಲಾಗಿದೆ.

ಸಂವಿಧಾನದ 370ನೇ ವಿಧಿಯಡಿ ಈ ಹಿಂದಿನ ಜಮ್ಮು- ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ 2019ರಲ್ಲಿ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಗೃಹ ಬಂಧನದಲ್ಲಿರಿಸಿದ್ದರು.

ಗೃಹಬಂಧನದಿಂದ ಮುಕ್ತರಾದ ನಂತರ ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ನಡೆಯಲಿರುವ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲು ಅವರು ತೆರಳಿದ್ದಾರೆ.

Advertisements

‘ಮೀರ್ವೈಝ್ ಅವರ ಮನೆಗೆ ಗುರುವಾರ ಸಂಜೆ ಭೇಟಿ ನೀಡಿದ ಅಧಿಕಾರಿಗಳು ಗೃಹಬಂಧನದಿಂದ ಮುಕ್ತಗೊಳಿಸುತ್ತಿರುವ ವಿಷಯ ತಿಳಿಸಿದರು. ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ನಡೆಯಲಿರುವ ಪಾರ್ಥನೆಯಲ್ಲಿ ಪಾಲ್ಗೊಳ್ಳಲು ಅವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ನೊಹತಾ ಪ್ರದೇಶದ ಅಂಜುಮನ್ ವಕ್ಫ್ ಜಾಮಿಯಾ ಮಸೀದಿಯ ವ್ಯವಸ್ಥಾಪನಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿತ್ತು.

ತಮ್ಮ ಗೃಹ ಬಂಧನವನ್ನು ಪ್ರಶ್ನಿಸಿ ಪ್ರತ್ಯೇಕತಾವಾದಿ ಹುರಿಯತ್ ಕಾನ್ಸರೆನ್ಸ್‌ನ ಅಧ್ಯಕ್ಷ ಮೀರ್ವೈಝ್ ಅವರು ಹೈಕೋರ್ಟ್ ಮೊರೆ ಹೋದ ನಂತರ ಅವರ ಬಿಡುಗಡೆ ಮಾಡಲಾಗಿದೆ. ಮೀರ್ವೈಝ್ ಅವರ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಸೆ. 15ರಂದು ನ್ಯಾಯಾಲಯ ಕೇಳಿತ್ತು.

“ನನ್ನ ಮನೆಯ ಸುತ್ತಲಿನಲ್ಲಿ ಕಾವಲಿದ್ದ ಪೊಲೀಸರನ್ನು ಇಂದು (ಶುಕ್ರವಾರ) ಬೆಳಗ್ಗೆ ಹಿಂದೆಗೆದುಕೊಳ್ಳಲಾಗಿದೆ. ನಿನ್ನೆ ಸಂಜೆ ಅಧಿಕಾರಿಗಳು ನನ್ನನ್ನು ಗೃಹಬಂಧನದಿಂದ ಬಿಡುಗಡೆ ಮಾಡುತ್ತಿದ್ದೇವೆ ಎಂದು ನನಗೆ ತಿಳಿಸಿದರು. ಮುಖ್ಯ ಧಾರ್ಮಿಕ ಗುರುವಾಗಿ ನನ್ನ ಜವಾಬ್ದಾರಿಯನ್ನು ನಿರ್ವಹಿಸಲು ಜಾಮಾ ಮಸೀದಿಗೆ ಹೊರಟಿದ್ದೇನೆ. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಅದನ್ನು ಮಾಡದಂತೆ ಅನ್ಯಾಯವಾಗಿ ನಿಲ್ಲಿಸಲಾಗಿತ್ತು” ಎಂದು ಮೀರ್ವೈಝ್ ಉಮರ್ ಫಾರೂಕ್ ತಿಳಿಸಿದ್ದಾರೆ.

ಬಿಡುಗಡೆಯ ಸುದ್ದಿಯ ಬೆನ್ನಲ್ಲೇ ಮಸೀದಿಯ ಸುತ್ತಮುತ್ತಲೂ ವ್ಯಾಪಕ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಹಲವು ಮಂದಿ ಅವರ ಅಭಿಮಾನಿಗಳು ಮಸೀದಿಗೆ ಆಗಮಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X