ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗ ಗುರುವಾರ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನವೆಂಬರ್ನಲ್ಲಿ ರಾಜ್ಯ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಈ ಆಯೋಗ ಇಂದು ಮಧ್ಯಂತರ ವರದಿಯನ್ನು ಇಂದು ಸಲ್ಲಿಸಿದೆ.
ಇದನ್ನು ಓದಿದ್ದೀರಾ? ಒಳಮೀಸಲಾತಿ | ಆಯೋಗದ ಮಧ್ಯಂತರ ವರದಿ ಗುರುವಾರ ಸರ್ಕಾರಕ್ಕೆ ಸಲ್ಲಿಕೆ
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಬಗ್ಗೆ ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ವರದಿಯನ್ನು ಆಯೋಗ ನೀಡಿದೆ.
