ಕಲಬುರಗಿ | ಎರಡನೇ ಬಾರಿ ಬಿಜೆಪಿ ಟಿಕೆಟ್ ಪಡೆದ ಸಂಸದ ಡಾ.ಉಮೇಶ್ ಜಾಧವ್

Date:

Advertisements

ಕಳೆದಬಾರಿ ಸಂಸದರಾಗಿ ಚುನಾಯಿತರಾಗಿದ್ದ ಡಾ. ಉಮೇಶ್ ಜಾಧವ್ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಒಲಿದು ಬಂದಿದೆ.

ಡಾ.ಉಮೇಶ್ ಜಾಧವ್ ಪರಿಚಯ

1991ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಜನರಲ್ ಸರ್ಜರಿಯಲ್ಲಿ ಮಾಸ್ಟರ್ ಆಫ್ ಸರ್ಜರಿ ಪೂರ್ಣಗೊಳಿಸಿದರು. ವೃತ್ತಿಯಲ್ಲಿ ವೈದ್ಯರು ಇವರು ಹುಟ್ಟಿದ್ದು ಕಲಬುರಗಿ ಕ್ಷೇತ್ರದ ಬೇಧಸೂರು ಗ್ರಾಮದ ಗೋಪಾಲದೇವ್ ಜಾಧವ್, ತಾಯಿ ಚಂದ್ರಮ್ಮ. ಸಂಗಾತಿ ಗಾಯತ್ರಿ ಜಾಧವ್. ಸುಪುತ್ರ ಅವಿನಾಶ್ ಜಾಧವ್ ಪ್ರಸ್ತುತ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.

Advertisements

ಇವರು 23 ಮೇ 2019ರಿಂದ ಕಲಬುರಗಿ ಲೋಕಸಭಾ ಕ್ಷೇತ್ರದಿಂದ 17ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದರು. ನಂತರ, ಅವರು ಮಾರ್ಚ್ 4 ರಂದು 2019 ರಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದರು. ರಾಜೀನಾಮೆಯನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಕೆ. ಆರ್.ರಮೇಶ್ ಕುಮಾರ್ ಅಂಗೀಕರಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟರು.

ನಂತರ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಕಲಬುರಗಿ ಲೋಕಸಭೆ ಅಭ್ಯರ್ಥಿಯಾಗಿ ಟಿಕೆಟ್ ಪಡೆದು ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಸ್ಪರ್ಧಿಸಿ 95,452  ಮತಗಳ ಅಂತರದಿಂದ ಗೆಲುವು ಸಾಧಿಸಿ ಸಂಸದರಾಗಿ ಲೋಕಸಭೆಗೆ ಆಯ್ಕೆಯಾದರು.

ಡಾ. ಉಮೇಶ್ ಜಾಧವ್ ಪಡೆದ ಸ್ಥಾನಗಳು

  • ಚಿಂಚೋಳಿಯಿಂದ ವಿಧಾನಸಭಾ ಸದಸ್ಯರು : 2013 ರಿಂದ 2018 (4) (5) (6) (7)
  • ಸಂಸದೀಯ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. (8)
  • ಚಿಂಚೋಳಿ 2018-2 ಏಪ್ರಿಲ್ 2019 ರಿಂದ ವಿಧಾನಸಭೆಯ ಸದಸ್ಯರು (9) (10)
  • ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ 17ನೇ ಲೋಕಸಭೆಯ ಸಂಸದ . (11)

ಜಾಧವ್ ಕಳೆದ ಐದು ವರ್ಷಗಳಲ್ಲಿ ಯಾವ ಕೆಲಸಗಳು ಮಾಡಿಲ್ಲ ಎಂದು ಜನರು ಆರೋಪಿಸುತ್ತಿರುವ ಹೊತ್ತಲ್ಲಿ ಜಾಧವ್ ಅವರು, ಸರ್ಕಾರದ ಅವಧಿ ಮುಗಿಯುವ ಅಂತಿಮ ಘಳಿಗೆಯಲ್ಲಿ ಕಲಬುರಗಿ-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು, ಕಲಬುರಗಿ-ಬೆಂಗಳೂರು ಮಧ್ಯೆ ವಾರದ ಎಕ್ಸ್‌ಪ್ರೆಸ್ ರೈಲು, ಕಲಬುರಗಿ, ಗಾಣಗಾಪುರ ರೈಲು ನಿಲ್ದಾಣಗಳ ಅಭಿವೃದ್ಧಿಗಾಗಿ ಸುಮಾರು 63 ಕೋಟಿ ರೂ. ತರಲು ಯತ್ನಿಸಿದ್ದಾರೆ. ಮತ ಪಡೆದುಕೊಳ್ಳಲು ಬಿಜೆಪಿಯ ಕೊನೆಯ ಕ್ಷಣದ ಪ್ರಯತ್ನ ಇದು ಎನ್ನುತ್ತಿದ್ದಾರೆ ಮತದಾರರು.

ಕಲಬುರಗಿ ನಗರದ ಜನತೆಯ ಬೇಡಿಕೆಯಾಗಿದ್ದ ಹಾಗರಗಾ ಕ್ರಾಸ್‌ನಿಂದ ರಾಮಮಂದಿರ ವೃತ್ತದವರೆಗಿನ ಸರ್ವಿಸ್ ರಸ್ತೆಗೆ 57 ಕೋಟಿ ರೂ. ಬಿಡುಗಡೆ ಮಾಡಿ ಕಲಬುರಗಿ ಜನತೆಯ ಮನಸು ಗೆಲುವ ಪ್ರಯತ್ನ ಮಾಡುವುದಷ್ಟೇ ಅಲ್ಲದೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಈ ಬಾರಿಯೂ ಉಮೇಶ್ ಜಾಧವ್ ಅವರ ಪರ ಪ್ರಚಾರ ನಡೆಸುವ ಮೂಲಕ ಅಖಾಡಕ್ಕೆ ಇಳಿದಿದ್ದಾರೆ.

ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X