ಕಲಬುರಗಿ | ಬಿಜೆಪಿ ನಾಯಕರ ವಿರುದ್ಧ ಸಾರ್ವಜನಿಕರಿಂದ ಜನಾಕ್ರೋಶ ವ್ಯಕ್ತ, ವಾಪಸ್ಸಾದ ವಿಜಯೇಂದ್ರ

Date:

Advertisements

ರಾಜ್ಯ ಬಿಜೆಪಿ ಜನಾಕ್ರೋಶ ಯಾತ್ರೆ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದಾಗ ಸಾರ್ವಜನಿಕರಿಂದ ನಿಜವಾದ ಜನಾಕ್ರೋಶ ಸ್ಫೋಟಗೊಂಡಿದ್ದು, ಜನಾಕ್ರೋಶ ಯಾತ್ರೆಯನ್ನು ಮೊಟಕುಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿ ಪ್ರಮುಖ ನಾಯಕರು ಪಲಾಯನ ಮಾಡಿದ್ದಾರೆ.

ಬಿಜೆಪಿ ವಿರುದ್ಧದ ಜನಾಕ್ರೋಶವ ಕುರಿತ ವಿಡಿಯೋವನ್ನು ಕಾಂಗ್ರೆಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಕಲಬುರಗಿಗೆ ಆಗಮಿಸಿದ ಬಿಜೆಪಿ ನಾಯಕರಿಗೆ ಪ್ರಬುದ್ಧ ನಾಗರಿಕರು ಛೀಮಾರಿ ಹಾಕಿದ್ದಾರೆ” ಎಂದಿದೆ.

ಅಕ್ರಮ ಮರಳು ದಂಧೆಗೆ ಅವಕಾಶ ಕೊಟ್ಟಿದ್ದೇ ಬಿಜೆಪಿ ಮುಖಂಡರು ಎಂದು ಭಾಗೋಡಿ ಗ್ರಾಮದ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಇಂಗು ತಿಂದ ಮಂಗನಂತಾದ ಬಿಜೆಪಿಗರು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ಸಾಗಿದ್ದಾರೆ.

Advertisements

“ಜನಾಕ್ರೋಶ ಯಾತ್ರೆ ಎಂಬ‌ ಬೃಹನ್ನಾಟಕ್ಕೆ ಕಲಬುರ್ಗಿಯ ಜನ ಮಂಗಳಾರತಿ ಎತ್ತಿ, ಬಿಜೆಪಿಗರ ಬಣ್ಣ ಬಯಲು ಮಾಡಿ ತಪರಾಕಿ ಕೊಟ್ಟು ಹಿಂದಕ್ಕೆ ಓಡಿಸಿದ್ದಾರೆ. ಜನ ವಿರೋಧ ಎದುರಿಸಲಾಗದೆ ಇಂಗು ತಿಂದ ಮಂಗನಂತೆ ಯಾತ್ರೆ ಮೊಟಕುಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಿಂದಿರುಗಿದ್ದಾರೆ” ಎಂದು ಕಾಂಗ್ರೆಸ್‌ ಕುಟುಕಿದೆ.

“ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ, ತೆರಿಗೆ ಪ್ರಹಾರ, ರಾಜ್ಯ ಬಿಜೆಪಿಯೊಳಗಿನ ಕುರ್ಚಿ ಕಾದಾಟ ಮರೆಮಾಚಲು ಕಾಂಗ್ರೆಸ್ ಸರ್ಕಾರದ ಮೇಲೆ ಕೆಸರೆಚುವ ಬಿಜೆಪಿಯ ಪ್ರಯತ್ನ ಹಾಸ್ಯಾಸ್ಪದ ಯಾತ್ರೆಯಾಗಿ ಜನರಿಗೆ ಮನೋರಂಜನೆ ನೀಡುತ್ತಿದೆ” ಎಂದು ಲೇವಡಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X