ತೆಲಂಗಾಣ | ಕಾಳೇಶ್ವರಂ ಏತ ನೀರಾವರಿ ಹಗರಣ; ತನಿಖೆಗೆ ಕೇಂದ್ರ ಯಾಕೆ ಆದೇಶಿಸಿಲ್ಲ?

Date:

Advertisements

ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಹಗರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೂ, ಹಣರಣದ ತನಿಖೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾಕೆ ಆದೇಶಿಸಿಲ್ಲ ಎಂದು ತೆಲಂಗಾಣ ಪ್ರವಾಸೋದ್ಯಮ ಮತ್ತು ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರವು ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳಿಂದ ಅನೇಕ ಜನರನ್ನು ಬಂಧಿಸಿದೆ. ಆದರೆ, ಬಿಆರ್‌ಎಸ್ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಸುಲಿಗೆ ಕುರಿತು ಈ ಸಂಸ್ಥೆಗಳು ಯಾಕೆ ತನಿಖೆ ನಡೆಸುತ್ತಿಲ್ಲ. ಈ ಬಗ್ಗೆ ಬಿಜೆಪಿಗರು ವಿವರಿಸಬೇಕು” ಎಂದು ಹೇಳಿದ್ದಾರೆ.

“ಕೃಷ್ಣಾ ಜಲ ವಿವಾದವನ್ನು ಇತ್ಯರ್ಥಪಡಿಸಿ ತೆಲಂಗಾಣಕ್ಕೆ ನ್ಯಾಯಯುತವಾದ ಪಾಲು ನೀಡುವ ವಿಷಯದ ಬಗ್ಗೆ ಚುನಾವಣೆ ಸಮಯದಲ್ಲಿ ಕೇಂದ್ರ ಮಾತನಾಡುತ್ತಿದೆ. ಜಲ ವಿವಾದವನ್ನು ಇತ್ಯರ್ಥಪಡಿಸದೆ ತೆಲಂಗಾಣ ಜನತೆಯ ಮತ ಕೇಳುವ ನೈತಿಕ ಹಕ್ಕು ಬಿಜೆಪಿಗೆ ಇಲ್ಲ” ಎಂದು ಕಿಡಿಕಾರಿದ್ದಾರೆ.

Advertisements

“ಪಾಲಮುರು-ರಂಗಾರೆಡ್ಡಿ ಏತ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯ ಸ್ಥಾನಮಾನವನ್ನು ಏಕೆ ನೀಡುತ್ತಿಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ವಿವರಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಬಿಜೆಪಿಯವರು ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆದು ಮತ ಗಳಿಸಲು ಯತ್ನಿಸುತ್ತಿದ್ದಾರೆ. ಅವರು ರಾಮರಾಜ್ಯದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಏಕೆ ನ್ಯಾಯಯುತ, ನ್ಯಾಯೋಚಿತ ಮತ್ತು ಎಲ್ಲರನ್ನೂ ಒಳಗೊಳ್ಳುವ ಸರ್ಕಾರ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಬಿಆರ್‌ಎಸ್ ಮೈತ್ರಿಯು ಎರಡು ಸ್ಥಾನಗಳನ್ನೂ ಗೆಲ್ಲುವುದಿಲ್ಲ. ತೆಲಂಗಾಣ ಜನತೆ ಬಿಜೆಪಿ ಮತ್ತು ಬಿಆರ್‌ಎಸ್ ಎರಡಕ್ಕೂ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಕೃಷ್ಣರಾವ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X