ಕಲ್ಯಾಣ ಕರ್ನಾಟಕ | ನವೋದ್ಯಮಗಳ ಸ್ಥಾಪನೆಗೆ 4 ಕೋಟಿ ರೂ. ಸಹಾಯಧನ: ಪ್ರಿಯಾಂಕ್‌ ಖರ್ಗೆ

Date:

Advertisements

ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ‘ಎಲಿವೇಟ್‌’ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ ಕಾರ್ಯಕ್ರಮದ ಅನ್ವಯ 19 ನವೋದ್ಯಮಿಗಳಿಗೆ ಈಗಾಗಲೆ 2 ಕೋಟಿ ರೂ. ಧನಸಹಾಯ ವಿತರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ 11, ಬಳ್ಳಾರಿ ಜಿಲ್ಲೆಯ ಮೂರು, ಕೊಪ್ಪಳ ಹಾಗು ಬೀದರ್‌ ಜಿಲ್ಲೆಯ ತಲಾ ಎರಡು ಮತ್ತು ರಾಯಚೂರು ಜಿಲ್ಲೆಯ ಒಂದು ಸೇರಿದಂತೆ 19 ಸಂಸ್ಥೆಗಳನ್ನು ನವೋದ್ಯಮ ಸ್ಥಾಪನೆಗಾಗಿ ಗುರುತಿಸಲಾಗಿದೆ. ಜೈವಿಕ ತಂತ್ರಜ್ಞಾನ, ಕೃಷಿ, ಪಶುಸಂಗೋಪನೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಬ್ಯಾಂಕಿಂಗ್‌, ಎವಿಜಿಸಿ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ನವೋದ್ಯಮಿಗಳು ಆರಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಆಯ್ಕೆಯಾಗಿರುವ 19 ಸಂಸ್ಥೆಗಳಲ್ಲಿ 7 ನವೋದ್ಯಮಗಳು ತಲಾ 25 ಲಕ್ಷ ರೂ. ಸಹಾಯಧನ ಮಂಜೂರಾತಿ ನೀಡಲಾಗಿದೆ. ಉಳಿದವುಗಳಿಗೆ 20 ಲಕ್ಷ ರೂ.ಗಳಿಂದ 15 ಲಕ್ಷ ರೂ. ಸಹಾಯಧನ ಮಂಜೂರಾಗಿದೆ ಎಂದು ಸಚಿವರು ಹೇಳಿದ್ದಾರೆ.

Advertisements

ಸಹಾಯಧನಕ್ಕೆ ಆಯ್ಕೆಗೊಂಡಿರುವ 19 ನವೋದ್ಯಮಿಗಳನ್ನು ಅಭಿನಂದಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಇನ್ನೂ ಹೆಚ್ಚು ಯುವಕ ಯುವತಿಯರು ನವೋದ್ಯಮಗಳನ್ನು ಆರಂಭಿಸುವ ಮೂಲಕ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಲು ಕಾರಣರಾಗಬೇಕೆಂದು ಕರೆಕೊಟ್ಟಿದ್ದಾರೆ.

ರಾಜ್ಯದ ರಾಜಧಾನಿಯಾದ ಬೆಂಗಳೂರು ಹಾಗೂ ದಕ್ಷಿಣ ಭಾಗದಲ್ಲಿ ಮಾತ್ರ ನವೋದ್ಯಮಗಳನ್ನು ಆರಂಭಿಸುತ್ತಿದ್ದ ಪರಂಪರೆಯನ್ನು ಬದಲಿಸಿ ಕಲ್ಯಾಣ ಕರ್ನಾಟಕ ಭಾಗದ ಯುವ ಜನತೆಗೂ ಅವಕಾಶ ನೀಡಿರುವುದಾಗಿ ತಿಳಿಸಿರುವ ಸಚಿವರು ಈ ಭಾಗದಲ್ಲಿ ನವೋದ್ಯಮಗಳನ್ನು ಆರಂಭಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳುವುದರೊಂದಿಗೆ ಸ್ಥಳಿಯ ಅರ್ಹ ಯುವ ಜನಾಂಗಕ್ಕೆ ಉದ್ಯೋಗ ದೊರೆಕಿಸಿಕೊಡಲು ಕಾರಣರಾಗಬೇಕೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X