ಇಂಡಿಯಾ ಒಕ್ಕೂಟಕ್ಕೆ ಕಮಲ್ ಹಾಸನ್ ಪಕ್ಷ?; ಹಿರಿಯ ನಟ ಹೇಳಿದ್ದೇನು?

Date:

Advertisements

ತಮಿಳುನಾಡಿನಲ್ಲಿ ‘ಇಂಡಿಯಾ’ ಮೈತ್ರಿಕೂಟದೊಂದಿಗೆ ಮಾತುಕತೆ ನಡೆಯುತ್ತಿದೆ. ಆದರೆ, ಮೈತ್ರಿಕೂಟಕ್ಕೆ ಸೇರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಸಂಸ್ಥಾಪಕ, ನಟ ಕಮಲ್ ಹಾಸನ್ ಹೇಳಿದ್ದಾರೆ.

ಎಂಎನ್‌ಎಂನ ಏಳನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. “ನಿಸ್ವಾರ್ಥ ಕೆಲಸ ಮಾಡುವ ಯಾರೊಂದಿಗಾದರೂ ಕೈಜೋಡಿಸಲು ಪಕ್ಷವು ಸಿದ್ಧವಿದೆ. ಆದರೆ, ನಾವು ಸ್ಥಳೀಯ ಊಳಿಗಮಾನ್ಯ ರಾಜಕೀಯದಲ್ಲಿ ಪಾಲ್ಗೊಳ್ಳುವ ಯಾರನ್ನೂ ಬೆಂಬಲಿಸುವುದಿಲ್ಲ” ಎಂದು ಹೇಳಿದರು.

ಇಲ್ಲಿಯವರೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ದೂರ ಉಳಿದಿರುವ ನಟ, ಇದೀಗ, ‘ಇಂಡಿಯಾ’ ಒಕ್ಕೂಟದ ಭಾಗವಾಗಿರುವ ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಜೊತೆ ಸ್ನೇಹ ಸಂಬಂಧ ಬೆಳೆಸಿಕೊಂಡಿದ್ದಾರೆ.

Advertisements

2023ರ ಈರೋಡ್ ಉಪಚುನಾವಣೆಯಲ್ಲಿ, ಕಮಲ್ ಹಾಸನ್ ಅವರು ಡಿಎಂಕೆ-ಕಾಂಗ್ರೆಸ್ ಸಮ್ಮಿಶ್ರ ಅಭ್ಯರ್ಥಿ, ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಮಾಜಿ ಅಧ್ಯಕ್ಷ ಇವಿಕೆಎಸ್ ಇಳಂಗೋವನ್ ಪರವಾಗಿ ಪ್ರಚಾರ ಮಾಡಿದ್ದರು.

ಹಾಸನ್ ಅವರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರ ಸ್ನೇಹಿತರೂ ಆಗಿದ್ದಾರೆ. ಅವರು ಕಳೆದ ವರ್ಷ ಚೆನ್ನೈನಲ್ಲಿ ಸ್ಟಾಲಿನ್ ಅವರ ಹುಟ್ಟುಹಬ್ಬದ ಅಂಗವಾಗಿ ನಡೆದ ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಿದ್ದರು.

2021ರಲ್ಲಿ ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಹಾಸನ್ ಬಿಜೆಪಿಯ ವನತಿ ಶ್ರೀನಿವಾಸನ್ ವಿರುದ್ಧ 1,540 ಮತಗಳ ಕಡಿಮೆ ಅಂತದಿಂದ ಸೋತಿದ್ದರು. ತಮ್ಮ ಸೋಲಿನ ಬಗ್ಗೆ ಮಾತನಾಡಿರುವ ಕಮಲ್ ಹಾಸನ್, “ನಾನು ಕೊಯಮತ್ತೂರು ಕ್ಷೇತ್ರದಲ್ಲಿ ಗೆಲ್ಲುವಲ್ಲಿ ವಿಫಲನಾಗಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ಆದರೆ, ಆ ದಿನ 90,000 ಜನರು ಮತದಾನ ಮಾಡಲು ಬರಲಿಲ್ಲ. ನಿಜವಾದ ವಿಚಾರವೆಂದರೆ ಅದು. ಅವರು ಏಕೆ ಮತ ಹಾಕಲಿಲ್ಲ ಎಂದು ನಾವು ಅವರನ್ನು ಕೇಳಬೇಕು,” ಎಂದು ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X