ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದ ಸುಪ್ರಿಯಾ ಶ್ರೀನಾಟೆಗೆ ಈ ಬಾರಿಯ ಲೋಕಸಭಾ ಚುನಾವಣೆ ಕಣದಿಂದ ಕಾಂಗ್ರೆಸ್ ಗೇಟ್ ಪಾಸ್ ಕೊಟ್ಟಿದೆ.
ಉತ್ತರ ಪ್ರದೇಶದ ಮಹಾರಾಜ್ಗಂಜ್ ಕ್ಷೇತ್ರದಲ್ಲಿ ಸುಪ್ರಿಯಾ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ, ಅವರು ನೀಡಿದ್ದ ಅಪಮಾನಕರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಅವರಿಗೆ ನೀಡಿದ್ದ ಟಿಕೆಟ್ಅನ್ನು ಕಾಂಗ್ರೆಸ್ ಹಿಂಪಡೆದಿದೆ.
2019ರಲ್ಲಿ ಸುಪ್ರಿಯಾ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಪಂಕಜ್ ಚೌಧರಿ ವಿರುದ್ಧ ಸೋತಿದ್ದರು. ಆದರೂ ಕೂಡ ಕಾಂಗ್ರೆಸ್ ಈ ಬಾರಿಯೂ ಟಿಕೆಟ್ ನೀಡಿತ್ತು. ಆದರೆ, ಕಂಗನಾ ರಣಾವತ್ ವಿರುದ್ಧದ ಟೀಕೆಯಿಂದ ಅವರು ಟಿಕೆಟ್ ಕಳೆದುಕೊಂಡಿದ್ದಾರೆ. ಅವರ ಬದಲಿಗೆ, ವೀರೇಂದ್ರ ಚೌಧರಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
“ಸಾಮಾಜಿಕ ಮಾಧ್ಯಮ ಮುಖ್ಯಸ್ಥೆಯಾಗಿ ತನ್ನ ಕೆಲಸದ ಮೇಲೆ ಗಮನ ಹರಿಸಲು ಬಯಸುತ್ತೇನೆ. ಚುನಾವಣೆಯಲ್ಲಿ ತನ್ನನ್ನು ಕಣಕ್ಕಿಳಿಸದಂತೆ ಪಕ್ಷವನ್ನು ಕೇಳಿದ್ದು, ಆ ಸ್ಥಾನಕ್ಕೆ ಅಭ್ಯರ್ಥಿಯನ್ನೂ ಸೂಚಿಸಿದ್ದೇನೆ” ಎಂದು ಸುಪ್ರಿಯಾ ಶ್ರಿನಾಟೆ ಮಾಧ್ಯಮವೊಂದಕ್ಕೆ ತಿಳಿಸಿದ್ದರು.
ಈ ಸುದ್ದಿ ಓದಿದ್ದೀರಾ? ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್; ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ