ಜಯಪ್ರಕಾಶ್‌ ಹೆಗ್ಡೆ ವರದಿ | ಜಾತಿ ಜಾತಿಗಳ ನಡುವೆ ಛೂ ಬಿಡುವುದು ಬೇಡ; ವೈಜ್ಞಾನಿಕ ವರದಿ ಬೇಕು: ಶಾಮನೂರು

Date:

Advertisements

ಸಿಎಂ ಸಿದ್ದರಾಮಯ್ಯ ಅವರು ಎಲ್ಲಿ ನಮ್ಮ ಮಾತು ಕೇಳುತ್ತಾರೆ? ಜಾತಿ ಗಣತಿಯನ್ನು ಸರ್ಕಾರ ಸ್ವೀಕರಿಸಿದ್ದು ತಪ್ಪು ಅಲ್ಲ. ಆದರೆ ಅದು ವೈಜ್ಞಾನಿಕವಾಗಿರಬೇಕು. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ಉಪಪಂಗಡಗಳು ಇವೆ. ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆ ತೋರಿಸಿರುವ ಮಾಹಿತಿ ಇದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಸರ್ಕಾರ ಸ್ವೀಕರಿಸಿರುವ ಜಾತಿ ಗಣತಿ ವರದಿ ವೈಜ್ಞಾನಿಕವಾಗಿ ಇಲ್ಲ. ಹೇಗೆ ಅವೈಜ್ಞಾನಿಕವಾಗಿದೆ ಎಂಬುದನ್ನು ಸಾಬೀತುಪಡಿಸಿ ತೋರಿಸುತ್ತೇವೆ” ಎಂದರು.

“ಆಯೋಗದ ಅಧ್ಯಕ್ಷರು ನಮ್ಮ ವರದಿ ವೈಜ್ಞಾನಿಕವಾಗಿ ಇದೆ ಎನ್ನುತ್ತಾರೆ. ಆದರೆ, ಅದು ಹೇಗೆ ಅವೈಜ್ಞಾನಿಕವಾಗಿದೆ ಎಂಬುದನ್ನು ಸಾಬೀತು ಮಾಡುತ್ತೇವೆ. 9 ವರ್ಷದ ಹಿಂದಿನ ಸರ್ವೆಯನ್ನು ಈಗ ವರದಿ ಸಲ್ಲಿಸಲಾಗಿದೆ” ಎಂದರು.

Advertisements

“ಮನೆಯಲ್ಲೇ ಕುಳಿತು ಜಾತಿಗಣತಿ ವರದಿ ತಯಾರಿಸಿದ ಮಾಹಿತಿ ಇದೆ. ಸರ್ಕಾರ ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಸಬೇಕು. ಈಗ ಸ್ವೀಕರಿಸಿರುವ ಜಾತಿ ಗಣತಿ ವರದಿಯನ್ನು ಸರ್ಕಾರ ಏನು ಮಾಡುತ್ತದೆ ಎಂದು ನೋಡುತ್ತೇವೆ. ನಾವು ಸುಮ್ಮನೆ ಕೂರುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಾಂತರಾಜ ವರದಿ ಬಹಿರಂಗಗೊಳಿಸದಂತೆ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ: ನಾಳೆ ವಿಚಾರಣೆ

“9 ವರ್ಷದ ಹಳೆಯದು ಬೇಡ. ವೈಜ್ಞಾನಿಕವಾಗಿ ಇನ್ನೊಮ್ಮೆ ಜಾತಿ ಗಣತಿ ಮಾಡಬೇಕು. ಕಾಂತರಾಜು ವರದಿಯನ್ನು ಈಗ ಅವರು ತಂದುಕೊಟ್ಟಿದ್ದಾರೆ. ನಮ್ಮ ಜನಸಂಖ್ಯೆ ಎರಡು ಕೋಟಿಗೂ ಹೆಚ್ಚಿದೆ. ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾರೆ. ಈ ವರದಿಯನ್ನು ಮೂಲೆಗೆ ಹಾಕುವುದೇ ಒಳ್ಳೆಯದು” ಎಂದು ತಿಳಿಸಿದರು.

“ಜಾತಿ ಗಣತಿ ವರದಿ ಸ್ವೀಕಾರದಿಂದ ಕಾಂಗ್ರೆಸ್​​ಗೆ ಸಮಸ್ಯೆ ಆಗಲಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಾನು ಈಗ ಏನನ್ನೂ ಕೂಲಂಕಷವಾಗಿ ಹೇಳಲು ಹೋಗುವುದಿಲ್ಲ. ಸಿಎಂ ಸಿದ್ದರಾಮಯ್ಯ ನಮ್ಮ ಅಭಿಪ್ರಾಯಗಳಿಗೆ ಎಲ್ಲಿ ಮನ್ನಣೆ ಕೊಡುತ್ತಾರೆ. ಈ ವರದಿಯಿಂದ ಜಾತಿ ಜಾತಿಗಳ ನಡುವೆ ಸಂಘರ್ಷ ಆಗುತ್ತದೆ. ಜಾತಿ ಜಾತಿಗಳ ನಡುವೆ ಅವರು ಛೂ ಬಿಡ್ತಿದ್ದಾರೆ. ನಾವು ಎಸ್​​ಸಿ ಎಸ್​ಟಿ ವಿರುದ್ಧವಿಲ್ಲ. ಆದರೆ ನಮ್ಮ ಸಂಖ್ಯೆ ಡಬಲ್ ಇದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X