ಮೀಸಲಾತಿ ಕುರಿತ ಕರಂದ್ಲಾಜೆ ಹೇಳಿಕೆ; ಅಜ್ಞಾನಕ್ಕೆ ಮದ್ದಿಲ್ಲ ಎಂದ ಸಿದ್ದರಾಮಯ್ಯ

Date:

  • ಸಿದ್ದರಾಮಯ್ಯ ಸುಳ್ಳು ಭರವಸೆ ನೀಡಿದ್ದಾರೆ ಎಂದ ಕರಂದ್ಲಾಜೆ
  • ಕೇಂದ್ರ ಸರ್ಕಾರವೇ ಮೀಸಲಾತಿಯನ್ನು 56%ಕ್ಕೆ ಏರಿಸಿದೆ

ಮೀಸಲಾತಿಯನ್ನು ಶೇ.50 ಕ್ಕಿಂತ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಅಜ್ಞಾನಕ್ಕೆ ಮದ್ದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.75ರಷ್ಟು ಹೆಚ್ಚಿಸಿ, ಎಲ್ಲ ಸಮುದಾಯಗಳಿಗೂ ಸಮಾನವಾಗಿ ಹಂಚುತ್ತೇವೆ ಎಂದು ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಶೋಭಾ ಕರಂದ್ಲಾಜೆ, “ನಾನು ಸಿದ್ದರಾಮಯ್ಯ ಅವರಿಗೆ ಕೇಳ್ತೇನೆ 75% ಮೀಸಲಾತಿ ಎಲ್ಲಿಂದ ಕೊಡ್ತಿರಾ. ಸಂವಿಧಾನದ ಪ್ರಕಾರ 50% ಗಿಂತ ಹೆಚ್ಚಿಸಲು ಬರುವುದಿಲ್ಲ. ರಾಜ್ಯದ ಜನರ ಕಣ್ಣಿಗೆ ಮಣ್ಣು ಎರಚುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಅವರ ಹೇಳಿಕೆ ವಿಡಿಯೋ ಹಂಚಿಕೊಂಡಿರುವ ಸಿದ್ದರಾಮಯ್ಯ, “ಮೀಸಲಾತಿಯನ್ನು ಶೇಕಡಾ 75ಕ್ಕೆ ಹೆಚ್ಚಿಸಲು ಹೇಗೆ ಸಾಧ್ಯ? ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಅವರ ಪಕ್ಷದ ಸರ್ಕಾರವೇ ಪರಿಶಿಷ್ಟ ಜಾತಿ/ಪಂಗಡದ ಮೀಸಲು ಹೆಚ್ಚಿಸಿ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 56ಕ್ಕೆ ಹೆಚ್ಚಿಸಿದ್ದು ಇವರ ಗಮನಕ್ಕೆ ಬಂದಿಲ್ಲ. ಅಜ್ಞಾನಕ್ಕೆ ಮದ್ದಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡಿ ಒಟ್ಟು ಮೀಸಲು ಪ್ರಮಾಣವನ್ನು ಶೇಕಡಾ 60ಕ್ಕೆ ಹೆಚ್ಚಿಸಿದ್ದು ಕೂಡಾ ಸಚಿವೆ ಶೋಭಾ ಅವರಿಗೆ ಗೊತ್ತಿಲ್ಲ. ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ” ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರಂದ್ಲಾಜೆ ವಿವಾದಾತ್ಮಕ ಪತ್ರ | ಚುನಾವಣೆ ನಡೆಸುತ್ತಿರುವುದು ಆಯೋಗವೋ, ಬಿಜೆಪಿಯೋ: ಸಿದ್ದರಾಮಯ್ಯ ಪ್ರಶ್ನೆ

ಸಿದ್ದರಾಮಯ್ಯ ಭರವಸೆ

ಮೀಸಲಾತಿ ಮಿತಿಯನ್ನು ಶೇ.50ರಿಂದ ಶೇ. 75ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಬದ್ಧವಾಗಿದೆ. ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

“ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್ ಗೆ ಸೇರಿಸಬೇಕು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...