ಕರ್ನಾಟಕ ಬಂದ್ |‌ ರಾಜಧಾನಿ ಸಂಪೂರ್ಣ ಸ್ತಬ್ಧ; ಬಸ್‌ ಗಾಜು ಒಡೆದ ಪ್ರತಿಭಟನಾಕಾರರು

Date:

Advertisements
  • ಸ್ವಯಂಪ್ರೇರಿತವಾಗಿ ಅಂಗಡಿ-ಮಳಿಗೆ ಬಂದ್‌ ಮಾಡಿದ ವ್ಯಾಪಾರಸ್ಥರು
  • ರಾಜಧಾನಿಯಲ್ಲಿ 144 ಸೆಕ್ಷನ್​ ಜಾರಿ, ಪ್ರತಿಭಟನಾಕಾರರ ಬಂಧನ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದೆ.

ರಾಜಧಾನಿಯಲ್ಲಿ ಬಹುತೇಕ ವ್ಯಾಪಾರ – ವಹಿವಾಟು ಸ್ಥಗಿತವಾಗಿದೆ. ಬೆಳಗ್ಗೆಯಿಂದಲೇ ವ್ಯಾಪಾರಿಗಳು, ಸ್ವಯಂಪ್ರೇರಿತವಾಗಿ ಅಂಗಡಿ-ಮಳಿಗೆ ಬಂದ್‌ ಮಾಡಿದ್ದಾರೆ.

ಬೆಂಗಳೂರು ನಗರದ ಪುರಭವನ ಎದುರು ಜಮಾಯಿಸಿ ಮೆರವಣಿಗೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. ಇದೇ ಸಂದರ್ಭದಲ್ಲಿ ಬಸ್‌ನಲ್ಲಿ ಕುಳಿತಿದ್ದ ಪ್ರತಿಭಟನಾಕಾರರು ಬಿಎಂಟಿಸಿ ಬಸ್‌ ಗಾಜು ಒಡೆದಿದ್ದಾರೆ.

Advertisements

ಕರ್ನಾಟಕ ಬಂದ್​ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ಬಂದೋಬಸ್ತ್​​ಗೆ ಫೀಲ್ಡ್​​ಗೆ ಇಳಿದಿದ್ದಾರೆ.

ಸಿಎಂ ಸಿವಾಸಕ್ಕೆ ಹೋಗುವ ಎಲ್ಲ ರಸ್ತೆಗಳಲ್ಲಿ ಬಂದೋಬಸ್ತ್

ಮುಖ್ಯಮಂತ್ರಿ ನಿವಾಸಕ್ಕೆ ಹೋಗುವ ಎಲ್ಲ ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನಾಕಾರರು ಇಂದು (ಸೆ. 29) ಸಿಎಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಪೊಲೀಸರು ಎಲ್ಲೆಡೆ ಹೈ ಅಲರ್ಟ್ ಆಗಿದ್ದಾರೆ. ಪ್ರತಿಭಟನೆಗಳು ನಡೆಯುವ ಜಾಗಗಳಾದ ಟೌನ್ ಹಾಲ್ ಸೇರಿದಂತೆ ಕೆಲವಾರು ಸ್ಥಳಗಳನ್ನು ಮೊದಲೇ ಗುರುತಿಸಿದ್ದ ಪೊಲೀಸರು ಅಲ್ಲಿಗೆ ಆಗಮಿಸಿದ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ತುಂಬಿ ಫ್ರೀಡಂ ಪಾರ್ಕ್ ನತ್ತ ಕೊಂಡೊಯ್ದಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಎಚ್ಚರಿಕೆ

ಬಂದ್ ನಲ್ಲಿ ಭಾಗಿಯಾಗಬಯಸಲಿರುವ ಎಲ್ಲ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಬಂದ್ ಹಿನ್ನೆಲೆಯಲ್ಲಿ ನಡೆಯುವ ಪ್ರತಿಭಟನೆಗಳಲ್ಲಿ ಯಾವುದೇ ಸರ್ಕಾರಿ ನೌಕರ ಭಾಗವಹಿಸುವಂತಿಲ್ಲ ಎಂದು ಸರ್ಕಾರದಿಂದ ಸುತ್ತೋಲೆ ಹೊರಡಿಸಿದೆ. ನಿಗಮ, ಮಂಡಳಿಗಳ ಪದಾಧಿಕಾರಿಗಳಿಗೂ ಸೂಚನೆ ನೀಡಿದೆ. ಅನಗತ್ಯವಾಗಿ ಇಂದು (ಸೆ. 29) ರಜೆ ಹಾಕಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X