ಕಾಂಗ್ರೆಸ್‌ನಿಂದಾಗಿ ಉಗ್ರರ ಅಡಗುತಾಣವಾಗುತ್ತಿರುವ ಕರ್ನಾಟಕ : ಶೋಭಾ ಕರಂದ್ಲಾಜೆ ಆರೋಪ

Date:

ಕೇರಳದ ರೀತಿಯಲ್ಲಿಯೇ ಕರ್ನಾಟಕವನ್ನು ಭಯೋತ್ಪಾದಕರ ಅಡಗುತಾಣವನ್ನಾಗಿ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್‌ನ ಓಟ್ ಬ್ಯಾಂಕ್ ರಾಜಕಾರಣ ಹಾಗೂ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

- Advertisement -

ದೆಹಲಿಯಲ್ಲಿಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡ್ತಿದ್ದಾರೆ. ಕರ್ನಾಟಕ ರಾಜ್ಯ ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿದೆ. ಈ ಹಿಂದೆ ಕೇರಳವು ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿತ್ತು. ಈಗ ಕರ್ನಾಟಕವನ್ನು ಆ ರೀತಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಇದಕ್ಕೆಲ್ಲ ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳೇ ಉದಾಹರಣೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ ಜಯೇಶ್ ಪೂಜಾರಿ ಎನ್ನುವ ವ್ಯಕ್ತಿ ಕೇಂದ್ರದ ಮಂತ್ರಿ ನಿತಿನ್ ಗಡ್ಕರಿಯವರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಾನೆ. ಈ ಜಾಲವನ್ನು ತನಿಖೆ ಮಾಡಿದಾಗ ಜಯೇಶ್ ಪೂಜಾರಿಯನ್ನು ಅಫ್ಸರ್ ಪಾಷಾ ಅನ್ನುವ ವ್ಯಕ್ತಿ ಈತನನ್ನು ಜೈಲಿನಲ್ಲಿಯೇ ಮತಾಂತರಿಸಿ, ಶಾಹೀರ್ ಆಗಿ ಮಾಡಿದ್ದಾನೆ. ಕಾರಾಗೃಹಗಳಲ್ಲಿರುವ ಅಮಾಯಕ ಹಿಂದೂ ಯುವಕರನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಯುವಕರು ಐಸಿಸ್ ಸೇರಿ ಬೇರೆ ಸಂಘಟನೆಗಳ ಜತೆ ಸಂಪರ್ಕ ಹೊಂದುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಮಂಗಳೂರು ಕುಕ್ಕರ್ ಬ್ಲಾಸ್ಟ್ ಘಟನೆಯಿಂದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ಮಾಡಿ, ಬದುಕಿ ಉಳಿದಿದ್ದಾರೆ. ಆದರೆ ಅವರು ಅಂಗವಿಕಲರಾಗಿ ಬದುಕುವ ಸ್ಥಿತಿ ಅವರಿಗೆ ಬಂದಿದೆ. ಕುಕ್ಕರ್ ಬಾಂಬ್ ಸಾಗಿಸುತ್ತಿದ್ದ ಆರೋಪಿ ಶಾರೂಕ್ ಇಂದು ಜೈಲಲ್ಲಿದ್ಧಾನೆ. ಹಾಗಾಗಿ ಮಂಗಳೂರಿನ ಘಟನೆಗೆ ಭಯೋತ್ಪಾದಕ ಸಂಘಟನೆಗಳ ಜೊತೆಗೆ ಸಂಬಂಧವಿರುವುದು ಆವಾಗಲೇ ಹೇಳಿದ್ದೆ. ಆದರೆ ಕಾಂಗ್ರೆಸ್‌ನವರು ನಮ್ಮ ಬ್ರದರ್ಸ್‌ ಎಂದು ಹೇಳುತ್ತಾ ಓಟ್ ಬ್ಯಾಂಕ್ ರಾಜಕಾರಣ ಮಾಡಿತು. ಚುನಾವಣೆಗೋಸ್ಕರ ಬಿಜೆಪಿ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಆಗ ಆರೋಪಿಸಿದ್ದರು. ಈಗ ನಡೆಯುತ್ತಿರುವ ಬೆಳವಣಿಗೆಗಳು ಏನು ಸೂಚಿಸುತ್ತವೆ ಎಂದು ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಇಂದು ನಾವ್ಯಾರೂ ಸುರಕ್ಷಿತರಾಗಿಲ್ಲ. ಭಯೋತ್ಪಾದನಾ ಚಟುವಟಿಕೆಗಳು ಜೈಲಿನಿಂದಲೇ ನಡೆಯುತ್ತಿರುವುದು ಆಘಾತ ಉಂಟು ಮಾಡಿದೆ. ಇದಕ್ಕೆಲ್ಲ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಕಾರಣ. ಆದ್ದರಿಂದ ಕಾಂಗ್ರೆಸ್‌ನವರು ಓಲೈಕೆ ರಾಜಕಾರಣ ಬಿಟ್ಟು, ಇದನ್ನು ತಡೆಯಬೇಕಿದೆ. ದೇಶದ ಹಾಗೂ ಕರ್ನಾಟಕದ ರಕ್ಷಣೆಯ ಹಿತದೃಷ್ಟಿಯ ಬಗ್ಗೆ ಯೋಚನೆ ಮಾಡಬೇಕು. ಈ ಎಲ್ಲ ಪ್ರಕರಣವನ್ನು ಎನ್‌ಐಎಯ ಮೂಲಕ ತನಿಖೆ ನಡೆಸಲು ನೀಡುವಂತೆ ಆಗ್ರಹ ಮಾಡುತ್ತೇನೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...