ಕರ್ನಾಟಕ ಫಲಿತಾಂಶ | ಹಾವು-ಏಣಿ ಆಟದಲ್ಲಿ ಅಭ್ಯರ್ಥಿಗಳು

Date:

Advertisements

ಕರ್ನಾಟಕದಲ್ಲಿ 29 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಹಾವು ಏಣಿ ಆಟದಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯದ ಚಿತ್ರಣ ಇಲ್ಲಿದೆ.

ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಹಿನ್ನಡೆ ಅನುಭವಿಸಿದ್ದು, ಜೆಡಿಎಸ್‌ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಒಂದು ಲಕ್ಷ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚಾಮರಾಜನಗರ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಹೆಚ್‌ ಸಿ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ ಅವರು 50 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಎಸ್‌ ಬಾಲರಾಜ್‌ ಹಿನ್ನಡೆ ಅನುಭವಿಸಿದ್ದಾರೆ.

Advertisements

ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ ಲಕ್ಷ್ಮಣ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್ 53 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬೀದರ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಈಶ್ವರ್‌ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ ಅವರು 24 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹಿನ್ನಡೆ ಅನುಭವಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಯಪ್ರಕಾಶ್‌ ಹೆಗಡೆ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಒಂದು ಲಕ್ಷ ಮತಗಳ ಮುನ್ನಡೆಯಲ್ಲಿದ್ದಾರೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ‌ ಪದ್ಮರಾಜ್ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಅವರು 21 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಮ್ ಅವರು 34 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಹಿನ್ನಡೆ ಅನುಭವಿಸಿದ್ದಾರೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು 31 ಸಾವಿರ ಮತಗಳ ಮುನ್ನಡೆಯಲ್ಲಿದ್ದು, ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್‌ ಜೊಲ್ಲೆ ಹಿನ್ನಡೆ ಅನುಭವಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X