ರಾಜ್ಯವನ್ನು ಕಾಂಗ್ರೆಸ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಲಿದೆ; ಬಿಜೆಪಿ ಆರೋಪ

Date:

Advertisements

ಹಿಂದೆಂದೂ ಕಂಡು, ಕೇಳರಿಯದಂತಹ ಆರ್ಥಿಕ ಸಂಕಷ್ಟಕ್ಕೆ ಕಾಂಗ್ರೆಸ್ ನಮ್ಮ ರಾಜ್ಯವನ್ನು ಸಿಲುಕಿಸಲಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, “ಈ ಹಿಂದಿನ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಕೋವಿಡ್‌ನಂತಹ ಆರ್ಥಿಕ ಬಿಕ್ಕಟ್ಟಿನ ಸಂಕಷ್ಟದ ನಡುವೆಯೂ, ಸಂಪನ್ಮೂಲವನ್ನು ಕ್ರೋಡೀಕರಿಸಿ, ಬಜೆಟ್ ಗಾತ್ರವನ್ನು ಹೆಚ್ಚಿಸಿ, ಉಳಿತಾಯ ಬಜೆಟ್ ಅನ್ನು ಮಂಡಿಸಿತ್ತು” ಎಂದು ಹೇಳಿದೆ.

“ಬಿಜೆಪಿಯ ಉಳಿತಾಯ ಬಜೆಟ್ ರಾಜ್ಯದ ಆರ್ಥಿಕ ಸ್ಥಿತಿಯನ್ನು ಪುನಶ್ಚೇತನಗೊಳಿಸಿ, ನಾವೀನ್ಯತೆಯ ಸೂಚ್ಯಂಕದಲ್ಲಿ ರಾಜ್ಯ ನಂಬರ್ 1 ಸ್ಥಾನ ಪಡೆದಿತ್ತು. ಆದರೆ, ಕುರ್ಚಿ ಹಿಡಿಯಬೇಕು ಎಂಬ ಏಕೈಕ ಕಾರಣಕ್ಕೆ, ಅವಾಸ್ತವಿಕ ಗ್ಯಾರಂಟಿಗಳನ್ನು ಘೋಷಿಸಿ, ಅವುಗಳನ್ನು ಈಡೇರಿಸಲು ಕರ್ನಾಟಕದ ಆರ್ಥಿಕತೆಯನ್ನು ವಿನಾಶಗೊಳಿಸುತ್ತಿದೆ” ಎಂದು ಕಿಡಿಕಾರಿದೆ.

Advertisements

“ಸಿದ್ದರಾಮಯ್ಯ ಅವರ ಅವಧಿಯಲ್ಲಿ, ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಅನುದಾನಕ್ಕೂ ಸಹ ಕಡಿತ ಬೀಳಲಿದ್ದು, ರಾಜ್ಯದ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಲಿದೆ. ಹಿಂದೆಂದೂ ಕಂಡು, ಕೇಳರಿಯದಂತಹ ಆರ್ಥಿಕ ಸಂಕಷ್ಟಕ್ಕೆ ಕಾಂಗ್ರೆಸ್ ನಮ್ಮ ರಾಜ್ಯವನ್ನು ಸಿಲುಕಿಸಲಿದೆ” ಎಂದು ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X