ಮಾಜಿ ಪ್ರಧಾನಿ ದೇವೇಗೌಡಗೆ ಕಸಾಪ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ

Date:

  • 2022ನೇ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ʼ ದತ್ತಿ ಪ್ರಶಸ್ತಿ ಪ್ರದಾನ
  • ನಾಡಿನ 12 ಮಂದಿ ಗಣ್ಯರಿಗಷ್ಟೇ ಪ್ರದಾನವಾಗಿರುವ ಒಡೆಯರ್ ದತ್ತಿ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆಯ್ಕೆಯಾಗಿದ್ದಾರೆ.

ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, 2022ನೇ ಸಾಲಿನ ಪ್ರಶಸ್ತಿಯನ್ನು ಶೀಘ್ರದಲ್ಲೇ ದೇವೇಗೌಡರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಇದುವರೆಗೆ ನಾಡಿನ 12 ಮಂದಿಗೆ ಪ್ರದಾನವಾಗಿರುವ ಈ ದತ್ತಿ ಪ್ರಶಸ್ತಿ ಸ್ವೀಕರಿಸುತ್ತಿರುವ ಮೊದಲ ಕನ್ನಡಿಗನೆನ್ನುವ ಶ್ರೇಯ ಮಾಜಿ ಪ್ರಧಾನಿಗಳ ಪಾಲಾಗಿದೆ.

ನಾಡಿನ ಅಭ್ಯುದಯದ ಕನಸು ಕಂಡ ನಾಲ್ವಡಿಯವರ ಹೆಸರಿನಲ್ಲಿ ನೀಡಲಾಗುತ್ತಿರುವ ಈ ಪ್ರಶಸ್ತಿಯನ್ನು ಕೈಗಾರಿಕಾ, ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲಿಕರಣ, ಗ್ರಾಮ ನೈರ್ಮಲೀಕರಣ, ವೈದ್ಯಕೀಯ ಕ್ಷೇತ್ರ, ನೀರಿನ ಸೌಕರ್ಯ, ಸಾರಿಗೆ ಸೌಲಭ್ಯ, ವ್ಯಾಪಾರ ಸೇರಿದಂತೆ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಕೊಡಮಾಡಲಾಗುತ್ತದೆ.

ಸದರಿ ಪ್ರಶಸ್ತಿ 51,000 ರೂಪಾಯಿ ನಗದು, ಸ್ಮರಣಿಕೆ, ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ.

ಸಮಗ್ರ ಕನ್ನಡ ನಾಡಿನ ಅಭಿವೃದ್ಧಿಗೆ ಕಟಿಬದ್ಧರಾಗಿ ಕೆಲಸ ನಿರ್ವಹಿಸಿದ ದೇವೇಗೌಡರು, ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ಹೋರಾಟ ಮಾಡುತ್ತಲೇ ಬಂದ ಹಿನ್ನೆಲೆ ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ.

ಪ್ರಶಸ್ತಿ ಆಯ್ಕೆ ಸಲುವಾಗಿ ಇತಿಹಾಸ ತಜ್ಞ ಹಾಗೂ ಸಂಶೋಧಕ ಡಾ. ತಲಕಾಡು ಚಿಕ್ಕರಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ ಎಂ ಪಟೇಲ್ ಪಾಂಡು ಸಭೆ ನಡೆಸಿ ಮಾಜಿ ಪ್ರಧಾನಿಗಳ ಹೆಸರನ್ನು ಅಂತಿಮಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...