ಬಿಜೆಪಿ ಇರೋ ಕಡೆ ಐಟಿ ರೇಡ್ ಆಗಲ್ಲ, ಏಕೆ : ಡಿಕೆ ಶಿವಕುಮಾರ್ ಪ್ರಶ್ನೆ

Date:

Advertisements
  • ‘ಐಟಿ ರೇಡ್ ನಡೆಯೋದೆ ರಾಜಕೀಯ ಉದ್ದೇಶಕ್ಕೆ’
  • ‘ಗುತ್ತಿಗೆದಾರರ ಸಂಘದ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ’

ಐಟಿ ದಾಳಿ ಬಗ್ಗೆ ನನಗೆ ಇನ್ನು ಪೂರ್ಣ ಮಾಹಿತಿ ಸಿಕ್ಕಿಲ್ಲ. ಬಿಜೆಪಿಯವರು ಇರೋ ಕಡೆ ಎಂದಾದರೂ ಐಟಿ ದಾಳಿ ಆಗಿದೆಯಾ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಐಟಿ ರೇಡ್ ನಡೆಯೋದೆ ರಾಜಕೀಯ ಉದ್ದೇಶಕ್ಕೆ, ಬಿಜೆಪಿ ಇರೋ ಕಡೆ ಐಟಿ ರೇಡ್ ಆಗಲ್ಲ, ಬೇರೆ ಕಡೆಗಳಲ್ಲಿ ಆಗುತ್ತದೆ ಎನ್ನುವ ಮೂಲಕ ಗುತ್ತಿಗೆದಾರರ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿರುವ ಪ್ರಕರಣಕ್ಕೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಬೊಟ್ಟು ಮಾಡಿದರು.

ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಮಾಡಿರುವ ರಾಜ್ಯ ಕಲೆಕ್ಷನ್ ಸೆಂಟರ್ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, “ಎಲ್ಲಿ, ಯಾರಿಗೆ ಆಯ್ತೋ ನನಗೆ ಗೊತ್ತಿಲ್ಲ, ರಸ್ತೆ, ಬೀದಿಯಲ್ಲಿ ಮಾತಾಡೋರಿಗೆಲ್ಲ ಉತ್ತರ ಕೊಡುವ ಅವಶ್ಯಕತೆ ಇಲ್ಲ” ಎಂದು ತಿರುಗೇಟು ನೀಡಿದರು.

Advertisements

ಗುತ್ತಿಗೆದಾರರ ಶೇ. 65ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ ಮಾಡಿದ್ದೇವೆ. ತನಿಖೆ ಪೆಂಡಿಂಗ್ ಇದ್ದರೂ ಬಿಲ್​ ಬಿಡುಗಡೆಗೆ ಆದೇಶ ಮಾಡಿದ್ದೇವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಗುತ್ತಿಗೆದಾರರಿಗೆ ಸಹಾಯ ಆಗಬೇಕು ಅಂತಾ ಆದೇಶ ಮಾಡಿದ್ದೇವೆ. ಸೀನಿಯಾರಿಟಿ ಮೇಲೆ ಬಿಲ್ ಬಿಡುಗಡೆ ಮಾಡಿದ್ದೇವೆ. ಗುತ್ತಿಗೆದಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗುತ್ತಿಗೆದಾರರ 20 ಸಾವಿರ ಕೋಟಿ ಬಿಲ್​ ಬಾಕಿ; ಸರ್ಕಾರಕ್ಕೆ 30 ದಿನಗಳ ಗಡುವು ನೀಡಿದ ಡಿ.ಕೆಂಪಣ್ಣ

ಲೋಡ್ ಶೆಡ್ಡಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿ, “ಯಾರ ಯಾರ ಅವಧಿಯಲ್ಲಿ ಎಷ್ಟು ಪವರ್ ಜನರೇಟ್ ಆಗ್ತಿತ್ತು ಅಂತ ಮಾಹಿತಿ ಇದೆ. ನಾನಿದ್ದಾಗ ಎಷ್ಟಿತ್ತು? ಎಷ್ಟು ಎಕ್ಸಿಸ್ ಇತ್ತು ಏನು ಪ್ರಿಪರೇಷನ್ ಇತ್ತು ಗೊತ್ತಿದೆ. ಬಿಜೆಪಿಯವರ ಆರೋಪಗಳು ಕೇವಲ ರಾಜಕೀಯ” ಎಂದು ಬಿಜೆಪಿಗೆ ಟಾಂಗ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X