ಕೆಂಪೇಗೌಡ ಜಯಂತಿ : 198ಕ್ಕೆ ಏರಿಕೆಯಾದ ಪ್ರಶಸ್ತಿ ಸಂಖ್ಯೆ; ಜುಲೈ 9ಕ್ಕೆ ಪ್ರಶಸ್ತಿ ಪ್ರದಾನ

Date:

Advertisements
  • ಕೆಂಪೇಗೌಡ ಜಯಂತಿ ಕಾರ್ಯಕ್ರಮ ಕಡ್ಡಾಯ ಆಚರಣೆಗೆ ಸೂಚನೆ
  • ಮೂರು ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿರುವ ಸರ್ಕಾರ

ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ರಾಜ್ಯಾದ್ಯಂತ ಕಡ್ಡಾಯವಾಗಿ ಆಚರಿಸುವಂತೆ ಸೂಚನೆ ಹೊರಡಿಸಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದರು. ಯಾವುದೇ ಜಾತಿ ಧರ್ಮ ಮತ್ತು ಭಾಷೆಗೆ ಸೀಮಿತವಾಗದಂತೆ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ ಎಂದವರು ಹೇಳಿದರು.

ಇದರ ಜೊತೆಗೆ ರಾಜ್ಯ ಸರ್ಕಾರ ಮೂವರು ಸಾಧಕರಿಗೆ ಈ ಬಾರಿಯ ಕೆಂಪೇಗೌಡ ಪ್ರಶಸ್ತಿಯನ್ನು ನೀಡುತ್ತಿದೆ. ಇಲ್ಲಿನ ಸಾಧಕರ ಆಯ್ಕೆ ಜವಾಬ್ಧಾರಿ ಕಾಂಗ್ರೆಸ್ ಮುಖಂಡ ಬಿ ಎಲ್ ಶಂಕರ್ ಅವರದ್ದಾಗಿರುತ್ತದೆ ಎಂದು ಡಿಕೆಶಿ ಹೇಳಿದರು.

Advertisements

ಉಳಿದಂತೆ ಬೆಂಗಳೂರು ವ್ಯಾಪ್ತಿಯ ವಾರ್ಡ್ ಸಂಖ್ಯೆ 198ಕ್ಕೆ ಏರಿಕೆಯಾದ ಹಿನ್ನೆಲೆಯಲ್ಲಿ ಇಷ್ಟೇ ಪ್ರಮಾಣದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ಪ್ರಶಸ್ತಿ ಪ್ರದಾನ ಜುಲೈ 9ಕ್ಕೆ ಜರುಗಲಿದೆ ಎಂದವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? : ಮೊಟ್ಟೆ ವಿತರಣೆ ನಿಲ್ಲಿಸಿಲ್ಲ; ಹೈಸ್ಕೂಲಿಗೂ ವಿಸ್ತರಿಸುತ್ತೇವೆ: ಸಚಿವ ಮಧು ಬಂಗಾರಪ್ಪ

ಉಳಿದಂತೆ ಪೂರ್ವಭಾವಿ ಸಭೆ ತೆಗೆದುಕೊಂಡ ನಿರ್ಧಾರಗಳು ಹೀಗಿವೆ.

  1. ಈ ಹಿಂದಿನಂತೆಯೇ ಹಾಸನದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಸಲಾಗುತ್ತದೆ.
  2. ಎಲ್ಲಾ ತಾಲೂಕುಗಳಲ್ಲೂ ಕಡ್ಡಾಯವಾಗಿ ಜಯಂತಿ ಆಚರಣೆ ಮಾಡಬೇಕು.
  3. ಬೆಂಗಳೂರು ನಗರದಲ್ಲಿ 28 ರಿಂದ 5 ರವರೆಗೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಅನುಕೂಲಕ್ಕೆ ತಕ್ಕಂತೆ, ವಲಯ ಜಂಟಿ ಆಯುಕ್ತರುಗಳು ವೇಳಾಪಟ್ಟಿಯನ್ನು ಸಿದ್ದಪಡಿಸಿಕೊಂಡು ಕಾರ್ಯಕ್ರಮ ಆಯೋಜಿಸಬೇಕು.
  4. ಬಿಬಿಎಂಪಿ ವತಿಯಿಂದ ನಡೆಯುವ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ನೀಡುವ ಕೆಂಪೇಗೌಡ ಪ್ರಶಸ್ತಿಗಾಗಿ ಸಮಿತಿ ರಚಿಸಲಾಗುವುದು.
  5. ವಾರ್ಡ್‌ಗೆ ಒಂದರಂತೆ 198 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
  6. ಯಾವುದೇ ತಾರತಮ್ಯ ಮಾಡದಂತೆ ಎಲ್ಲಾ ಜಾತಿ ಧರ್ಮಕ್ಕೂ ಪ್ರಶಸ್ತಿ ಸಿಗುವಂತೆ ಆಯ್ಕೆ ಮಾಡಬೇಕು.
  7. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಬೇಕು.
  8. 9ರಂದು ಈ ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಯಾಗಬೇಕು.
  9. ರಾಜ್ಯ ಸರ್ಕಾರ ಮೂವರು ಸಾಧಕರಿಗೆ ಪ್ರಶಸ್ತಿ ನೀಡಲಿದ್ದು, ಇದರ ಆಯ್ಕೆ ಜವಾಬ್ದಾರಿ ಕಾಂಗ್ರೆಸ್‌ ಮುಖಂಡ ಬಿ ಎಲ್‌ ಶಂಕರ್‌ ಅವರದ್ದಾಗಿರುತ್ತದೆ.
  10. ಐದು ಗೋಪುರಗಳಿಂದ ವಿಧಾನಸೌಧಕ್ಕೆ ಕೆಂಪೇಗೌಡ ಜ್ಯೋತಿ ಆಗಮಿಸಲಿದೆ.ಇದಕ್ಕೆ ಸಚಿವರು ಚಾಲನೆ ನೀಡಲಿದ್ದಾರೆ, ಈ ಕಾರ್ಯಕ್ರಮದ ಜವಾಬ್ಧಾರಿ ಪಾಲಿಕೆಯದ್ದಾಗಿರುತ್ತದೆ.

ಇಂದಿನ ಪೂರ್ವಭಾವಿ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್‌, ಸಚಿವರಾದ ಕೃಷ್ಣ ಭೈರೇಗೌಡ, ರಾಮಲಿಂಗಾರೆಡ್ಡಿ, ಮಾಗಡಿ ಶಾಸಕರಾದ ಬಾಲಕೃಷ್ಣಾ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮಂಜುಳಾ, ರಾಜೇಂದ್ರ ಕುಮಾರ್ ಕಠಾರಿಯಾ, ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X